ಕೊಟ್ಟೂರು ಜಾತ್ರೆಗೆ ಭಕ್ತರ ದಂಡು


Team Udayavani, Feb 27, 2019, 10:46 AM IST

27-february-13.jpg

ಕೊಟ್ಟೂರು: ಇಲ್ಲಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವಕ್ಕೆ ವಿವಿಧ ಕಡೆಯಿಂದ ಸಾವಿರಾರು ಭಕ್ತಾದಿ ಗಳು ಪಾದಯಾತ್ರೆ ಮೂಲಕ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಬಂದ ಭಕ್ತಾದಿಗಳಿಗೆ ಇಲ್ಲಿನ ಸಂಘ-ಸಂಸ್ಥೆ ಮತ್ತು ಜನರು ತಮ್ಮ ಕೈಲಾದ ಮಟ್ಟಿಗೆ ಉಪಾಹಾರ, ಊಟ ಸೇರಿದಂತೆ ಮೂಲ ಸೌಲಭ್ಯ ಒದಗಿಸುತ್ತಿದ್ದಾರೆ.

ಫೆ.28ರಂದು ಜರುಗುವ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ದಾವಣಗೆರೆಯಿಂದ ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಪಾದಯಾತ್ರೆ ಮೂಲಕ ಮಂಗಳವಾರವೇ ಆಗಮಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು. ಪ್ರತಿ ವರ್ಷ ಸ್ವಾಮಿಯ ರಥೋತ್ಸವಕ್ಕೆ ದಾವಣಗೆರೆಯಿಂದ ಪಾದಯಾತ್ರಿಗಳು ಅಧಿಕ ಸಂಖ್ಯೆಯಲ್ಲಿ ಬರುವುದು ವಾಡಿಕೆ. ಪ್ರಸಕ್ತ ವರ್ಷ ಈ ಸಂಖ್ಯೆ ಲಕ್ಷಕ್ಕೂ ಹೆಚ್ಚು ದಾಟಿದೆ.

ಬೆಂಗಳೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಹುಬ್ಬಳ್ಳಿ, ಹಾಸನ, ಮುಂಡರಗಿ, ಗದಗ, ರಾಣಿಬೆನ್ನೂರು, ಹಾವೇರಿ, ಬ್ಯಾಡಗಿ, ಕೊಪ್ಪಳ, ಹೊಸಪೇಟೆ, ಹರಪನಹಳ್ಳಿ ಮತ್ತು ಹರಿಹರ ಸೇರಿದಂತೆ ವಿವಿಧೆಡೆಯಿಂದ ಬಂಡಿಯಲ್ಲಿ ಬಂದು ಕೊಟ್ಟೂರೇಶ್ವರನ ರಥೋತ್ಸವ ಕಣ್ತುಂಬಿಕೊಳ್ಳುವ ಭಕ್ತಾದಿಗಳು ಅಧಿ ಕ ಸಂಖ್ಯೆಯಲ್ಲಿದ್ದಾರೆ. ಪಾದಯಾತ್ರೆ ಮೂಲಕ ಆಗಮಿಸುವವರನ್ನು ಸ್ವಾಗತಿಸಲೆಂದು ಪಟ್ಟಣದ ವಿವಿಧ ವರ್ಗದ ಜನರು ಮತ್ತು ಸಂಘ-ಸಂಸ್ಥೆಗಳು ನಿಂತಿವೆ.

ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್‌ ತಮ್ಮ ತೋಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರಿಗಳಿಗೆ ಸ್ನಾನ, ಅಡುಗೆ, ವಿಶ್ರಾಂತಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಪಾದಯಾತ್ರಿಗಳಿಗೆ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಪಾಯಸ, ಅನ್ನಸಾರು, ಕಾಫಿ, ಟೀ ಸೇವೆ ಗೈಯುತ್ತಿದ್ದಾರೆ. ಪಾದಯಾತ್ರಿಯಲ್ಲಿ ನಿತ್ರಾಣ ಆದವರು, ನೋವು ಅನುಭವಿಸುವವರ ಆರೈಕೆ ಮತ್ತು ಶ್ರೂಶುಷೆ ಮಾಡುವಲ್ಲಿ ಖರೀದಿ ಮತ್ತು ದಲ್ಲಾಲರ ಸಂಘದ ಅಧ್ಯಕ್ಷ ಪತ್ತಿಕೊಂಡ ಗಣೇಶ ದಂಪತಿ ನಿರತರಾಗಿದ್ದಾರೆ.

ಬಸವೇಶ್ವರ ಸ್ವಾಮಿಗೆ ಅರ್ಪಿಸಲು ರುದ್ರಾಕ್ಷಿ ಮಾಲೆ ಸಿದ್ಧ
ಪಟ್ಟಣದ ಹರಪನಹಳ್ಳಿ ರಸ್ತೆಯುದ್ದಕ್ಕೂ ಪಾದಯಾತ್ರಿಗಳಿಗೆ ಎಳೆನೀರು, ಶರಬತ್ತು, ಮಜ್ಜಿಗೆ, ತಂಪು ಪಾನೀಯ, ಕಲ್ಲು ಸಕ್ಕರೆ, ಐಸ್‌, ದ್ರಾಕ್ಷಿ, ಗೋಡಂಬಿ, ಹಾಲು, ಕಾಫಿ  ವಿತರಿಸಲು ಕೆಲವರು ಮುಂದಾಗಿದ್ದಾರೆ. ಹಾವೇರಿ ಜಿಲ್ಲೆ ಕೆಸರಳ್ಳಿ ಗ್ರಾಮದ ಮೂಳೆ ತಜ್ಞ ಕುಲಕರ್ಣಿ ಹಾಲಯ್ಯ ಸ್ವಾಮಿ, ಕೊಟ್ರಯ್ಯ ಸ್ವಾಮಿ ಸಹೋದರರು ಒಂದುವರೆ ಲಕ್ಷದ ರೂ. ಮೌಲ್ಯದ ರುದ್ರಾಕ್ಷಿ ಮಾಲೆಯನ್ನು ಶ್ರೀಗುರು ಕೊಟ್ಟೂರು ಬಸವೇಶ್ವರ ಸ್ವಾಮಿಗೆ ಸಮರ್ಪಿಸಲು ಸಿದ್ಧಗೊಳಿಸಿದ್ದಾರೆ. ಜಾತ್ರೆ ನಿಮಿತ್ತ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ಜನಜಂಗುಳಿ ಕಂಡು ಬರುತ್ತಿದೆ.

„ರವಿಕುಮಾರ ಎಂ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.