ವಿದ್ಯುತ್‌ ಅವಘಡ ಮರುಕಳಿಸದಂತೆ ಎಚ್ಚರಿಕೆ


Team Udayavani, Feb 28, 2019, 5:00 AM IST

blore-2.jpg

ಬೆಂಗಳೂರು: ವಿದ್ಯುತ್‌ ತಂತಿ ತಗುಲಿ ಬಾಲಕ ಸಾವಿಗೀಡಾಗಿರುವ ಘಟನೆ ಮರುಕಳಿಸದಂತೆ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಪಕ್ಷಾತೀತವಾಗಿ ಪಾಲಿಕೆ ಸದಸ್ಯರು ಆಗ್ರಹಿಸಿದರು.

ಕೌನ್ಸಿಲ್‌ ಸಭೆ ಆರಂಭವಾಗುತ್ತಿದ್ದಂತೆ ಮಾತನಾಡಿದ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌, ಸೋಮವಾರ ಬಾಣಸವಾಡಿಯ ರಾಜ್‌ಕುಮಾರ್‌ ಪಾರ್ಕ್‌ನಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಈ ಹಿಂದೆ ಬಿಡಿಎ ಉದ್ಯಾನ ನಿರ್ವಹಣೆ ಮಾಡುತ್ತಿತ್ತು. ಆಗ
ಸ್ಥಳೀಯ ಶಾಸಕರು ಅನುದಾನ ನೀಡಿ ಉದ್ಯಾನ ಅಭಿವೃದ್ಧಿಗೆ ಸೂಚಿಸಿದ್ದರು. ಆದರೆ, ಅಭಿವೃದ್ಧಿ ಕಾಮಗಾರಿ ಸೂಕ್ತ ರೀತಿಯಲ್ಲಾಗುತ್ತಿಲ್ಲ ಎಂಬ ಕಾರಣಕ್ಕೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರು. ನಂತರ ಪಾಲಿಕೆ ಉದ್ಯಾನದಲ್ಲಿ ಕಾಮಗಾರಿ ಕೈಗೊಂಡಿದೆ. ಈ ಘಟನೆಗೆ ಬಿಡಿಎ, ಬಿಬಿಎಂಪಿ ವಿದ್ಯುತ್‌ ನಿರ್ವಹಣಾ ಅಧಿಕಾರಿಗಳು ಕಾರಣವಾಗಿದ್ದು, ಈಗ ತಮ್ಮದೇನೂ ತಪ್ಪಿಲ್ಲ ಎನ್ನುವ ಮೂಲಕ ಎಲ್ಲರೂ ಜಾರಿಕೊಳ್ಳುತ್ತಿದ್ದಾರೆ. ಈ ಕುರಿತು ಮುಖ್ಯ ಇಂಜಿನಿಯರ್‌ ಹಂತದಲ್ಲಿ ತನಿಖೆ ಮಾಡಿ, ತಪ್ಪಿತಸ್ತರಿಗೆ ಶಿಕ್ಷೆ ವಿಧಿಸಬೇಕು ಆಗ್ರಹಿಸಿದರು.

ಬಾಣಸವಾಡಿ ವಾರ್ಡ್‌ ಸದಸ್ಯ ಕೋದಂಡ ರೆಡ್ಡಿ ಮಾತನಾಡಿ, ಘಟನೆ ನಡೆದ ಸಂದರ್ಭದಲ್ಲಿ ಉದ್ಯಾನಕ್ಕೆ ಮೇಯರ್‌ ಭೇಟಿ ನೀಡುತ್ತಾರೆ ಎಂದು ಅಧಿಕಾರಿಗಳಿಗೆ ಗೊತ್ತಿತ್ತು. ಆದ್ದರೂ, ಈ ಕುರಿತು ನನಗೆ ಮಾಹಿತಿ ನೀಡಿಲ್ಲ. ಇಲ್ಲಿ ಸದಸ್ಯರ ಹಕ್ಕಿಗೆ ಚ್ಯುತಿಯಾಗಿದೆ ಎಂದು ಬೇಸರ ವ್ಯಕ್ತಪಡೆಸಿದರು. ಇದಕ್ಕೆ ದನಿಗೂಡಿಸಿದ ವಿಪಕ್ಷ ಸದಸ್ಯರು, ಮಾಹಿತಿ ನೀಡದ ಅಧಿಕಾರಿಗೆ ನೋಟಿಸ್‌ ಜಾರಿ ಮಾಡಬೇಕು ಎಂದು ಪಟ್ಟು ಹಿಡಿದರು. ಅಧಿಕಾರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡುವಂತೆ ಬೆಂಗಳೂರು ಪೂರ್ವ ವಲಯ ಜಂಟಿ ಆಯುಕ್ತರಿಗೆ ಮೇಯರ್‌ ಆದೇಶಿಸಿದರು. ಮೃತ ಬಾಲಕ ಉದಯಕುಮಾರ್‌ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಬೇಕು ಹಾಗೂ ಈ ಕೂಡಲೇ ಮಗುವಿನ ಪೋಷಕರಿಗೆ ಹಣ ತಲುಪಿಸಲಬೇಕು ಎಂದು ಸದಸ್ಯರಲ್ಲರೂ ಒತ್ತಾಹಿಸಿದರು.

1250 ಉದ್ಯಾನಗಳ ತಪಾಸಣೆಗೆ ಸೂಚನೆ ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟ ಘಟನೆ ಕುರಿತು ಮಾತನಾಡಿದ ಪಾಲಿಕೆ ಆಯುಕ್ತ ಮಂಜುನಾಥ್‌ ಪ್ರಸಾದ್‌, ಮೊದಲು ಬಿಡಿಎ ಅಧೀನದಲ್ಲಿದ್ದ ಪಾರ್ಕ್‌ ನಂತರ ಬಿಬಿಎಂಪಿಗೆ ಬಂದಿದ್ದು, ಉಳಿದ ಕಾಮಗಾರಿ ನಡೆಸಲು ಟೆಂಡರ್‌ ನೀಡಲಾಗಿತ್ತು. ಟೆಂಡರ್‌ ಪಡೆದ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು.

ನಗರದ 1,250 ಉದ್ಯಾನಗಳನ್ನು ತಪಾಸಣೆ ಮಾಡಿ ತುರ್ತು ಕಾಮಗಾರಿ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ನಗರದ 9,000 ಬೀದಿ ದೀಪಗಳು ದುರಸ್ತಿಗೆ ಬಂದಿದ್ದು, ಒಂದು ವಾರದೊಳಗೆ ಅವುಗಳ ರಿಪೇರಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

ಬಜೆಟ್‌ ಅನುಷ್ಠಾನ ಕಷ್ಟ: ಆಯುಕ್ತ ಬಜೆಟ್‌ ಗಾತ್ರ ಹೆಚ್ಚಾಗಿರುವ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತರು, ಈ ಬಾರಿ ಬಜೆಟ್‌ ಗಾತ್ರ ಏಳರಿಂದ ಎಂಟು ಸಾವಿರ ಕೋಟಿ ರೂ. ಎಂದು ನಿರೀಕ್ಷಿಸಿದ್ದೆವು. ಆದರೆ, 12 ಸಾವಿರ ಕೋಟಿ ರೂ. ತಲುಪಿದೆ. ಪಾಲಿಕೆ ಆದಾಯವೇ ಏಳು ಸಾವಿರ ಕೋಟಿ ರೂ. ಇರುವಾಗ ಈ ಬಜೆಟ್‌ ಅನುಷ್ಠಾನ ಕಷ್ಟವಾಗಬಹುದು. ಹೀಗಾಗಿ, ಬಜೆಟ್‌ ಕುರಿತ ಅನುಮೋದನೆ ಕಡತ ನನ್ನ ಬಳಿ ಬಂದಾಗ ರಾಜ್ಯ ಸರ್ಕಾರಕ್ಕೆ ಅಗತ್ಯ ತಿದ್ದುಪಡಿಗೆ ಶಿಫಾರಸ್ಸು ಮಾಡುವೆ ಎಂದರು.

ವಾಯುಸೇನೆಗೆ ಪಾಲಿಕೆ ನಮನ ಪುಲ್ವಾಮ ಉಗ್ರರ ದಾಳಿಗೆ ಪ್ರತಿದಾಳಿ ನಡೆಸಿ 350ಕ್ಕೂ ಹೆಚ್ಚು ಉಗ್ರರನ್ನು ಸಂಹಾರ ಮಾಡಿದ ಭಾರತೀಯ ವಾಯುಸೇನೆಗೆ ಪಾಲಿಕೆಯ ಎಲ್ಲಾ ಸದಸ್ಯರು ಕೌನ್ಸಿಲ್‌ ಸಭೆಯಲ್ಲಿ ಪಕ್ಷಾತೀತವಾಗಿ ವಂದಿಸಿದರು. ಈ ವೇಳೆ “ಜೈ ಜವಾನ್‌’ ಘೋಷಣೆ ಕೂಗಿ ಸೈನಿಕರ ಶೌರ್ಯ ಪ್ರಶಂಸಿಸಿದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.