ಗ್ರಾಮೀಣಕ್ಕೆ ತಟ್ಟಿದ ಬಿಸಿ: ಬತ್ತುತ್ತಿದೆ ಅಂತರ್ಜಲ


Team Udayavani, Feb 28, 2019, 5:46 AM IST

28-february-4.jpg

ಜಾಲ್ಸೂರು: ಬಿಸಿಲಿನ ಬೇಗೆ ತೀವ್ರಗೊಳ್ಳುತ್ತಿದ್ದು, ಗ್ರಾಮೀಣ ಪ್ರದೇಶಗಳ ನೀರಿನ ಮೂಲಗಳು ಬತ್ತ ತೊಡಗಿವೆ. ಮುಂಬರುವ ದಿನಗಳಲ್ಲಿ ದಿನ ಬಳಕೆಯ ನೀರಿನ ಪೂರೈಕೆಗೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗುವ ಸಂಶಯ ಕಾಡುತ್ತಿದೆ.

ನಗರಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶಗಳ ಸ್ಥಿತಿ ಕೊಂಚ ಪರವಾಗಿಲ್ಲ ಎಂದರೂ ಪರಿಸ್ಥಿತಿ ಹೆಚ್ಚೇನೂ ಭಿನ್ನವಾಗಿಲ್ಲ. ನದಿಗಳು ನೀರಿನ ಅಭಾವ ಎದುರಿಸುತ್ತಿರುವಂತೆಯೇ ಕೊಳವೆ ಬಾವಿಗಳ ನೀರಿನ ಮಟ್ಟ ದಿನೇ ದಿನೇ ಕುಸಿತ ಕಂಡುಬರುತ್ತಿದೆ. ಐದು ಗ್ರಾಮಗಳಿಗೂ ಇದೆ ಸಮಸ್ಯೆ ಬೇಸಗೆ ಕಾಲದಲ್ಲಿ ಗ್ರಾಮಗಳಲ್ಲಿ ಹೆಚ್ಚಿನ ಜನರು ಕುಡಿಯುವ ನೀರು ಹಾಗೂ ದಿನಬಳಕೆಗೆ ನಳ್ಳಿ ನೀರನ್ನೇ ಆಶ್ರಯಿಸಿದ್ದಾರೆ. ಬಾವಿಗಳಲ್ಲಿ ಮಾರ್ಚ್‌, ಎಪ್ರಿಲ್‌ ತಿಂಗಳಾಗುವಾಗ ನೀರಿನ ಮಟ್ಟ ಕಡಿಮೆಯಾಗುವುದು ಇದಕ್ಕೆಲ್ಲ ಪ್ರಮುಖ ಕಾರಣ. ಐವರ್ನಾಡು, ಜಾಲ್ಸೂರು, ಕನಕಮಜಲು, ಅಜ್ಜಾವರ ಹಾಗೂ ಮಂಡೆಕೋಲು ಇಲ್ಲಿನ ಗ್ರಾಮಸ್ಥರಿಗೆ ನಳ್ಳಿ ನೀರಿನ ಸಂಪರ್ಕವಿದ್ದರೂ, ವ್ಯವಸ್ಥಿತ ನೀರಿನ ಪೂರೈಕೆಯಿಲ್ಲದೆ ತೊಂದರೆಪಡುವಂತಾಗಿದೆ. ಒಟ್ಟು ಐದು ಗ್ರಾಮಗಳಲ್ಲಿ 2,673ರಷ್ಟು ನಳ್ಳಿ ನೀರಿನ ಬಳಕೆದಾರದ್ದಾರೆ. 79 ಕೊಳವೆ ಬಾವಿಗಳು ಹಾಗೂ 6 ಬಾವಿಗಳನ್ನು ಪ್ರಸ್ತುತ ನೀರು ಪೂರೈಕೆಗೆ ಬಳಸಲಾಗುತ್ತಿದೆ.


ಎಲ್ಲ ಕಡೆ ಕೊಳವೆ ಬಾವಿಗಳಿಂದ ನೀರು ಪೂರೈಸಲಾಗುತ್ತಿದ್ದರೂ ಐವರ್ನಾಡು, ಜಾಲ್ಸೂರು, ಅಜ್ಜಾವರ ಗ್ರಾಮಗಳಲ್ಲಿ ಬಾವಿಗಳನ್ನೂ ನಳ್ಳಿ ನೀರಿಗೆ ಉಪಯೋಗಿಸುತ್ತಾರೆ. ಜಾಲ್ಸೂರಿನಲ್ಲಿ ಹೊಳೆಗೆ ರಿಂಗ್‌ ಅಳವಡಿಸಿ ನೀರು ಶೇಖರಿಸುತ್ತಾರೆ. ಹೀಗಿದ್ದರೂ ಮಾರ್ಚ್‌, ಎಪ್ರಿಲ್‌, ಮೇ ತಿಂಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕಡಿಮೆಯಾಗುತ್ತವೆ ಎಂದು ಪಂಚಾಯತ್‌ ಸಿಬಂದಿ ಹೇಳುತ್ತಾರೆ.

ಕಳೆದ ವರ್ಷದ ಸ್ಥಿತಿ
ನೀರಿನ ಸಮಸ್ಯೆ ಕಳೆದ ವರ್ಷವೂ ಇದೇ ರೀತಿಯಾಗಿದ್ದು, ಮಾರ್ಚ್‌, ಎಪ್ರಿಲ್‌ ತಿಂಗಳುಗಳಲ್ಲಿ ಪರಿಸ್ಥಿತಿ ಹೆಚ್ಚು ಬಿಗಾಡಾಯಿಸುತ್ತವೆ. ಸಮಸ್ಯೆ ನಿವಾರಿಸಲು ಕೊಳವೆ ಬಾವಿ ಕೊರೆಯಲಾಗಿತ್ತು. ಲೋಡ್‌ ಶೆಡ್ಡಿಂಗ್‌, ವಿದ್ಯುತ್‌ ಕಣ್ಣಾ ಮುಚ್ಚಾಲೆ ಕೂಡ ಜನರನ್ನು ಕಂಗೆಟ್ಟಿಸಿತ್ತು. ನೀರಿನ ಅಭಾವ ಇದ್ದ ಕಡೆ ಜಲ ಮರು ಪೂರಣ ಘಟಕ ಮಾಡಿದ್ದರೂ, ಅದಕ್ಕೊಂದು ಶಾಶ್ವತ ಪರಿಹಾರ ಕಾಣಲಿಲ್ಲ. ಜಾಲ್ಸೂರಿನ ಅಡ್ಕಾರು, ಬೊಲುಬೈಲು, ಐವರ್ನಾಡು ಪಂಚಾಯತ್‌ ವ್ಯಾಪ್ತಿಯ ಅಜ್ಜಮೂಲೆ, ಕನಕಮಜಲಿನ ಕಾರಿಂಜ ಅಜ್ಜಾವರ ಗ್ರಾಮದ ನೆಹರೂನಗರ, ಮುಳ್ಯ ದೊಡ್ಡೇರಿ ಈ ಭಾಗಗಳಲ್ಲಿ ಕಳೆದ ವರ್ಷ ನೀರಿನ ಪೂರೈಕೆಗೆ ತೊಂದರೆಯಾಗಿತ್ತು.

ನೀರಿನ ಮಟ್ಟ ಕುಸಿತ
ಐದು ಗ್ರಾಮಗಳಲ್ಲಿ ಸುಮಾರು 79 ಕೊಳವೆ ಬಾವಿಗಳಿದ್ದರೂ ಬೇಸಗೆ ಕಾಲದಲ್ಲಿ ನೀರಿನ ಮಟ್ಟ ಕುಸಿಯುವುದು ಸಾಮಾನ್ಯವಾಗಿವೆ. ಈ ಪೈಕಿ 15 ಕೊಳವೆ ಬಾವಿಗಳಲ್ಲಿ ನೀರು ತೀರಾ ಕೆಳ ಮಟ್ಟಕ್ಕೆ ಕುಸಿಯುತ್ತವೆ. ಕೆಲವು ಕೊಳವೆ ಬಾವಿಗಳನ್ನು ನೀರಿಲ್ಲದೆ ಮುಚ್ಚಲಾಗಿದೆ. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದಿರುವುದು ಕೊರತೆಗೆ ಕಾರಣವಾಗಿದೆ. ಕೊಳೆಯ ಬಾವಿ ಕೊರೆಯುವುದನ್ನು ಹೊರತು ಪಡಿಸಿ ಮಳೆ ಕೊಯ್ಲು, ಜಲ ಮರುಪೂರಣ ಘಟಕ ನಿರ್ಮಾಣಕ್ಕೆ ಗಂಭೀರ ಪ್ರಯತ್ನ ಮಾಡದಿರುವುದು ಇಲ್ಲಿ ಸ್ಮರಿಸಬಹುದು. ನೀರಿನ ಅಭಾವ, ಲೋಡ್‌ ಶೆಡ್ಡಿಂಗ್‌ ಸವಾಲುಗಳಿಗೆ ಒಂದು ಶಾಶ್ವತ ಪರಿಹಾರ ಕಾಣಬೇಕಿದೆ.

ಕ್ರಮ ಕೈಗೊಂಡಿದ್ದೇವೆ
ಮಾರ್ಚ್‌ ಎಪ್ರಿಲ್‌ ತಿಂಗಳುಗಳಲ್ಲಿ ನೀರಿನ ಸಮಸ್ಯೆ ಸಾಮಾನ್ಯವಾಗಿ ಎದುರಾಗುತ್ತವೆ. ಇದಕ್ಕೆ ತಕ್ಕಂತೆ ನೀರಿನ ಅಭಾವ ಕಂಡುಬರುವ ಭಾಗದಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಕ್ರಮ ಕೈಗೊಂಡಿದ್ದೇವೆ.
– ಯು.ಡಿ. ಶೇಖರ್‌
ಪಿಡಿಒ, ಐವರ್ನಾಡು ಗ್ರಾ.ಪಂ.

ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.