ಫ್ಲೋರೊಸಿಸ್‌ ತಡೆಗೆ ಅರಿವು ಅಗತ್ಯ


Team Udayavani, Feb 28, 2019, 10:19 AM IST

chikk-1.jpg

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿನ ನೀರನ್ನು ಸಾರ್ವಜನಿಕರು ಕುಡಿಯಲಿಕ್ಕೆ ಮಾತ್ರವಲ್ಲದೇ ಮನೆಗಳಲ್ಲಿ ತಯಾರಿಸುವ ಅಡುಗೆಗೂ ಶುದ್ಧ ನೀರು ಬಳಕೆ ಮಾಡುವ ಮೂಲಕ ಫ್ಲೋರೊಸಿಸ್‌ ತಡೆಗೆ ಅರಿವು ಮೂಡಿಸಬೇಕಿದೆ ಎಂದು ಜಿಪಂ ಅಧ್ಯಕ್ಷ ಎಚ್‌.ವಿ.ಮಂಜುನಾಥ ತಿಳಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ಜಿಪಂ,  ಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪುಣ್ಯಕೋಟಿ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ತುಮಕೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನೀರು ಮತ್ತು ನೈರ್ಮಲ್ಯ ಕುರಿತಾದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳವಳಕಾರಿ ಸಂಗತಿ: ಸಾರ್ವಜನಿಕರಿಗೆ ಆರೋಗ್ಯದ ದೃಷ್ಟಿಯಿಂದ ಶುದ್ಧ ನೀರು ಒದಗಿಸು ವುದು ಸರ್ಕಾರದ ಆದ್ಯ ಕರ್ತವ್ಯ ವಾಗಿದ್ದು, ಜಿಲ್ಲೆಯ ಮಟ್ಟಿಗೆ ಶುದ್ಧ ಕುಡಿಯುವ ನೀರು ಸಿಗುವುದೇ ಅಪರೂಪ ವಾಗಿದೆ. ಈಗಾಗಲೇ ಜಿಲ್ಲೆ ಯಲ್ಲಿ ಅಂತರ್ಜಲ ಅತಿಯಾದ ಬಳಕೆಯಿಂದ ನೀರಿನಲ್ಲಿ ಅಪಾಯಕಾರಿ ಲವಣಾಂಶಗಳ ಹೆಚ್ಚಳದಿಂದ ಫ್ಲೋರೈಡ್‌ ಅಂಶ ಅಧಿಕವಾಗಿ ಜಿಲ್ಲೆಯ ಬಾಗೇಪಲ್ಲಿ, ಗುಡಿ ಬಂಡೆ, ಗೌರಿಬಿದನೂರು ತಾಲೂಕುಗಳಲ್ಲಿ ಫ್ಲೋರೊಸಿಸ್‌ ಕಾಯಿಲೆ ವಿಪರೀತವಾಗಿ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಅರಿವು ಮೂಡಿಸಲು ಸಲಹೆ: ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸಾರ್ವಜನಿಕರು ಕುಡಿಯುವುದಕ್ಕೆ ಮಾತ್ರ ಶುದ್ಧ ನೀರು ಬಳಸುವುದರ ಜೊತೆಗೆ ಅಡುಗೆ ತಯಾರಿಸಲು ಶುದ್ಧ ನೀರನ್ನು ಬಳಸುವುದರಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಯಬಹುದು. ಶುದ್ಧ ಕುಡಿಯುವ
ನೀರಿನ ಘಟಕಗಳ ನೀರನ್ನು ಅಡುಗೆಗೆ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದ ಸಲಹೆ ನೀಡಿದರು.

ನಿಗಾ ವಹಿಸಬೇಕು: ಸೇವನೆ ಮಾಡುವ ಊಟಕ್ಕಿಂತ ಅರ್ಧ ಕಾಯಿಲೆಗಳು ಮನುಷ್ಯನಿಗೆ ನೀರಿನಿಂದ ಬರುತ್ತಿವೆ. ಶುದ್ಧ ಕುಡಿಯುವ ನೀರು ಸೇವನೆ ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್‌ಗ್ಳು ಚರಂಡಿಗಳಲ್ಲಿ ಹಾದು ಹೋಗುವುದರಿಂದ ಶುದ್ಧ
ನೀರಿಗೂ ಕಲುಷಿತ ನೀರು ಸೇರಿ ಕೊಳ್ಳುವ ಸಾಧ್ಯತೆಯು ಇರುತ್ತದೆ. ಗ್ರಾಮೀಣ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳ ಮೇಲೆ ಗುರುತ್ತರವಾದ ಜವಾಬ್ದಾರಿ ಇದ್ದು, ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಂಪರ್ಕಗಳ ಬಗ್ಗೆ ನಿಗಾವಹಿಸಬೇಕೆಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ. ರಾಮುಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಳಪ್ಪ, ಜಿಪಂ ಉಪ ಕಾರ್ಯದರ್ಶಿ ಟಿ.ಎಂ.ಶಶಿಧರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಡಾ.ನಾಗೇಶ್‌ , ತಾಪಂ ಇಒ ಕೆ.ಪಿ.ಸಂಜೀವಪ್ಪ, ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿ ಯಂತರರಾದ ಶಿವಕುಮಾರ್‌ ಲೋಕೂರ್‌, ಜಿಲ್ಲಾ ಪ್ಲೋರೋಸಿಸ್‌ ಸಮಾಲೋಕರಾದ ವಿನೋದ್‌ ಕುಮಾರ್‌, ಜಿಲ್ಲಾ ಪರಿಸರ ನಿಯಂತ್ರಣಾಧಿಕಾರಿ ಎಸ್‌.ಮಧುಸೂದನ್‌ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ನೀರಿನ ನೈರ್ಮಲ್ಯದ ಕುರಿತು ಅರಿವು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲೆಯ ತಾಪಂ ಇಒಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು, ತೋಟಗಾರಿಕಾ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು. ತುಮಕೂರಿನ ಪುಣ್ಯಕೋಟಿ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಡಾ.ಸಿ.ಸಿ.ಪಾವಟೆ ರವರು ನೀರು ಹಾಗೂ ನೈರ್ಮಲ್ಯದ ಕುರಿತು ಉಪನ್ಯಾಸ ನೀಡಿದರು. ಮಧ್ಯಾಹ್ನ ಅಧಿಕಾರಿಗಳ ಹಾಗೂ ತಜ್ಞರು ಸಂವಾದ ನಡೆಸಿ ಗ್ರಾಮೀಣ ಪ್ರದೇಶದಲ್ಲಿ ನೀರು ಹಾಗೂ ನೈರ್ಮಲ್ಯ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.