ನಾನು ಮರಾಠ ಸೇನಾನಿಯಾದೆ !


Team Udayavani, Mar 1, 2019, 12:30 AM IST

v-14.jpg

ಧರ್ಮಸ್ಥಳದ ಭಗವಾನ್‌ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಮೆರವಣಿಗೆಯಲ್ಲಿ ನಾನು ಮರಾಠಾ ಸೇನಾನಿಯಾಗಿ ಪಾಲ್ಗೊಂಡಿದ್ದೆ. ಸುಮಾರು ಮೂರು ಸಾವಿರ ಮಂದಿ ಈ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳ ಹಲವು ಕಲಾ ಪ್ರಕಾರಗಳ ಪ್ರದರ್ಶನವಾಯಿತು. ಹನ್ನೆರಡು ವರ್ಷಕ್ಕೊಮ್ಮೆ ಬರುವ ಮಹಾಮಸ್ತಕಾಭಿಷೇಕವನ್ನು ಕಣ್ತುಂಬಿಕೊಳ್ಳಲು ವಿವಿಧ ರಾಜ್ಯಗಳಿಂದ ಜನರು ಬರುತ್ತಾರೆ.  ಇಂತಹ ಒಂದು ವೈಭವದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಜೀವನದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಸಿಕ್ಕ ಅವಕಾಶವು ಅಭೂತಪೂರ್ವವಾದದ್ದು. ನೋಡುಗರಾಗಿ ನೋಡುವ ಅವಕಾಶ ಇನ್ನು ಮುಂದೆಯೂ ಸಿಗಬಹುದು. ಆದರೆ, ವಿದ್ಯಾರ್ಥಿ ಜೀವನದಲ್ಲಿ ಕಲಾವಿದರಾಗಿ ಭಾಗವಹಿಸುವ ಅವಕಾಶ ಈಗ ಮಾತ್ರ ಸಿಗಲು ಸಾಧ್ಯ. ಆ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಂಡ ನೆಮ್ಮದಿ ನನಗಿದೆ. ನಿಜಜೀವನದಲ್ಲಿ ಸೇನಾನಿಯಾಗಿರದಿದ್ದರೂ ಮೆರವಣಿಗೆಯಲ್ಲಿ ಸೇನಾನಿಯಾಗಿ ಭಾಗವಹಿಸಿದ್ದು ಖುಷಿಯ ವಿಚಾರವೇ ಸರಿ. ಒಂದು ದಿನದ ಮಟ್ಟಿಗೆ ಸೇನಾನಿಗಳಾಗಿ ಭಾಗವಹಿಸಿದ್ದ ನಾವೆಲ್ಲರೂ ಸೆಲೆಬ್ರಿಟಿಗಳಾಗಿ ಮಿಂಚಿದೆವು. ಹಲವರು ನಮ್ಮೊಂದಿಗೆ ಸೆಲ್ಫಿ ತೆಗೆದುಕೊಂಡರು. ದಿನವಿಡೀ  ಸುತ್ತಾಡಿ ಸುಸ್ತಾಗಿದ್ದರೂ ಸೆಲ್ಫಿಗಾಗಿ ಆಗಾಗ ಸ್ಮೈಲ್‌ ಮಾಡುವ ಸರದಿ ನಮ್ಮದಾಗಿತ್ತು. ಜನರ ಸೆಲ್ಫಿಗಾಗಿ ನಾವು ಸ್ಮೈಲ್‌ ಮಾಡಿದೆವು. ಆದರೆ, ನಮ್ಮ ಸೆಲ್ಫಿ ನಮಗೆ ತೆಗೆದುಕೊಳ್ಳಲು ಸಮಯವಿರಲಿಲ್ಲ ಎಂಬುದು ಬೇಸರದ ಸಂಗತಿ. ಮೆರವಣಿಗೆಯ ಫೊಟೋ ತೆಗೆಯಲು ಬೈಕಿನ ಹಿಂದಿನಿಂದ ಸರ್ಕಸ್‌ ಮಾಡಿ ಪ್ರಯತ್ನಿಸುತ್ತಿದ್ದರು.

ಮಹಿಳೆಯರೂ ದೇಶಕ್ಕೆ ಆಪತ್ತು ಬಂದಾಗ ಸೈನಿಕರಾಗಿ ಹೋರಾಡಲು ಸಿದ್ಧ ಎಂಬಂತಿದ್ದ ನಮ್ಮ ಮಹಿಳಾ ಸೇನೆಯು ನೆರೆದಿದ್ದವರೆಲ್ಲರ ಗಮನ ಸೆಳೆಯಿತು. ನಾವು ಭರತ ಚಕ್ರವರ್ತಿ ಹಾಗೂ ಭಗವಾನ್‌ ಬಾಹುಬಲಿಗೆ ಜಯಘೋಷವನ್ನು ಹಾಕುತ್ತಿದ್ದಾಗ ಎಲ್ಲರೂ ಭಾವಪರವಶರಾಗಿ ನೋಡುತ್ತಿದ್ದುದು ಎಲ್ಲೆಡೆ ಕಂಡು ಬಂದಿತು.

ಬಿಸಿಲ ತಾಪಕ್ಕೆ ತುಂಬಾ ಬಾಯಾರಿಕೆಯಾಗುತ್ತಿತ್ತು. ನೀರಡಿಕೆಯನ್ನು ನೀಗಿಸಲು ಮೆರವಣಿಗೆಯಲ್ಲಿ ಭಾಗವಹಿಸಿದ  ಕಲಾವಿದರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ನಮ್ಮ ಸೇನಾ ಗುಂಪಿಗೆ ನಿರ್ದೇಶಕರಾಗಿದ್ದವರು ಆಗಾಗ ನಿರ್ದೇಶನವನ್ನು ನೀಡುತ್ತ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಕಾಲಿಗೆ ಪೆಟ್ಟಾಗಿದ್ದರೂ ಸಹ ನೋವನ್ನು ಲೆಕ್ಕಿಸದೇ ಚಕ್ರವರ್ತಿಯ ದಿಗ್ವಿಜಯದ ಬೆಳಗ್ಗಿನ ಹಾಗೂ ಸಂಜೆಯ ಮೆರವಣಿಗೆಯಲ್ಲಿ ಭಾಗವಹಿಸಿದ ಸಾರ್ಥಕತೆ ನನ್ನಲ್ಲಿದೆ. ನಮ್ಮಲ್ಲಿ ಏನಾದರೊಂದು ಅಂದುಕೊಂಡ ಕೆಲಸವನ್ನು ಮಾಡಬೇಕೆನ್ನುವ ಛಲ, ಹಠವೊಂದಿದ್ದರೆ ಏನನ್ನು ಬೇಕಾದರೂ ಮಾಡಲು ಸಾಧ್ಯ. ಒಟ್ಟಿನಲ್ಲಿ ಈ ಮಹಾಮಸ್ತಕಾಭಿಷೇಕವು ನನ್ನ ಜೀವನದಲ್ಲಿ ಮರೆಯಲಾಗದ ಅಮೂಲ್ಯ ಕ್ಷಣಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. 

ಕಲ್ಪನಾ ಕೆ.
ತೃತೀಯ ಬಿ.ಎ., ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.