ನಾವು ಎಲ್ಲದಕ್ಕೂ ಸಿದ್ದ; ಪಾಕ್‌ಗೆ ಭಾರತದ ಎಚ್ಚರಿಕೆ


Team Udayavani, Mar 1, 2019, 12:30 AM IST

pti2282019000131b.jpg

ನವದೆಹಲಿ: ಪಾಕಿಸ್ತಾನ ವಶದಲ್ಲಿದ್ದ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಬಿಡುಗಡೆಯ ಘೋಷಣೆಯಾಗಿದ್ದರೂ, ಭಾರತ- ಪಾಕಿಸ್ತಾನದ ನಡುವಿನ ಯುದ್ಧದ ಕಾರ್ಮೋಡ ವಾತಾವರಣ ಇನ್ನೂ ಕಡಿಮೆಯಾಗಿಲ್ಲ. 

ಪಾಕಿಸ್ತಾನ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದರೂ, ನಾವು ಪ್ರಬಲವಾಗಿ ಎದುರಿಸುತ್ತೇವೆ, ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆಎಂದು ಭಾರತೀಯ ಸೇನೆಯ ಮೂರು ವಿಭಾಗದ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ದೇಶವಾಸಿಗಳಿಗೆ ಅಭಯ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮೂರು ವಿಭಾಗದ ಹಿರಿಯ ಅಧಿಕಾರಿಗಳು, ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನೇ ಬಯಲು ಮಾಡಿದ್ದಾರೆ. ವರ್ಧಮಾನ್‌ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡಿರುವುದನ್ನು ಸ್ವಾಗತಿಸಿರುವ ವಾಯುಸೇನೆಯ ವೈಸ್‌ ಏರ್‌ ಮಾರ್ಷಲ್‌ ಆರ್‌ಜಿಕೆ ಕಪೂರ್‌, ಇದು ಪಾಕಿಸ್ತಾನದ ಸದ್ಭಾವನೆಯ ನಡೆಯಲ್ಲ, ಜಿನೇವಾ ಒಪ್ಪಂದದ ಪಾಲನೆಯಷ್ಟೇ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. 

ಅತ್ತ ದೆಹಲಿಯಲ್ಲೇ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿಲ್ಲ ಪ್ರಧಾನಿ ನರೇಂದ್ರ ಮೋದಿ, ಈಗ ಆಗಿರುವುದು ಕೇವಲ ಪೈಲಟ್‌ ಪ್ರಾಜೆಕ್ಟ್. ನಿಜವಾದದ್ದು ಮುಂದೆ ಬರಲಿದೆ. ಅದಕ್ಕೂ ಮುನ್ನ ಒಂದು ಅಭ್ಯಾಸ ನಡೆಸಲಾಗಿದೆಯಷ್ಟೇ ಎಂದು ಹೇಳುವ ಮೂಲಕ, ಎಂಥದ್ದೇ ಸನ್ನಿವೇಶ ಬಂದರೂ ಸರಿಯೇ ಎದುರಿಸುತ್ತೇವೆ ಎಂಬ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಇನ್ನೂ ಯುದ್ಧದ ಕಾರ್ಮೋಡ ಹರಿದಿಲ್ಲ ಎಂಬುದೂ ಈ ಹೇಳಿಕೆಯ ಮೂಲಕ ಹೊರಬಿದ್ದಿದೆ.

ಜಂಟಿ ಪತ್ರಿಕಾಗೋಷ್ಠಿ
ವಾಯು ಸೇನೆ ಕಡೆಯಿಂದ ವೈಸ್‌ ಏರ್‌ ಮಾರ್ಷಲ್‌ ಆರ್‌ಜಿಕೆ ಕಪೂರ್‌, ಭೂಸೇನೆ ಕಡೆಯಿಂದ ಆರ್ಮಿ ಮೇಜರ್‌ ಜನರಲ್‌ ಎಸ್‌.ಎಸ್‌.ಮಹಲ್‌ ಮತ್ತು ನೌಕಾಪಡೆ ಕಡೆಯಿಂದ ನೆವ್ವಿ ರಿಯರ್‌ ಅಡ್ಮಿರಲ್‌ ದಲ್ಬಿàರ್‌ ಸಿಂಗ್‌ ಗುಜ್ರಾಲ್‌ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.  

ಆರಂಭದಲ್ಲೇ ಪಾಕಿಸ್ತಾನದ ಸುಳ್ಳಿನ ಕಂತೆಯನ್ನೇ ಬಿಚ್ಚಿಟ್ಟರು. ಬುಧವಾರ ಬೆಳಗ್ಗೆ ಪಾಕಿಸ್ತಾನದ ಯುದ್ಧ ವಿಮಾನಗಳು ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಲು ಬಂದಿದ್ದವು. ಇದಕ್ಕೆ ಎಫ್ 16 ಅನ್ನು ಬಳಕೆ ಮಾಡಲಾಗಿತ್ತು. ಈ ವಿಮಾನವನ್ನು ನಮ್ಮ ಮಿಗ್‌ 21 ಬಿಸೋನ್‌ ಕಡೆಯಿಂದಲೇ ಹೊಡೆದು ಹಾಕಿದ್ದೇವೆ ಎಂದು ಐಎಎಫ್ ಏರ್‌ವೈಸ್‌ ಮಾರ್ಷಲ್‌ ಆರ್‌.ಜಿ.ಕೆ.ಕಪೂರ್‌ ಹೇಳಿದ್ದಾರೆ. ಅದಕ್ಕೆ ಸಾಕ್ಷ್ಯವಿದೆ ಎಂದು ಹೇಳಿದ ಅವರು, ಪತನವಾದ ವಿಮಾನದ ಭಾಗಗಳನ್ನೂ ಪ್ರದರ್ಶಿಸಿದ್ದಾರೆ. ಜತೆಗೆ ನಾವು ಎಫ್ 16ನ ಎಲೆಕ್ಟ್ರಾನಿಕ್‌ ಸಿಗ್ನೇಚರ್‌ಗಳನ್ನು ಸಂಗ್ರಹಿಸಿದ್ದೇವೆ. ಅರ್ಮಮ್‌ನ ಬಿಡಿಭಾಗಗಳೂ ಕಾಶ್ಮೀರದ ರಜೌರಿಯಲ್ಲಿ ಪತ್ತೆಯಾಗಿದ್ದು, ಇದನ್ನು ಕೇವಲ ಎಫ್ 16 ನಲ್ಲಿ ಮಾತ್ರ ಬಳಕೆ ಮಾಡಲಾಗುತ್ತದೆ ಎಂದಿದ್ದಾರೆ. 

ಬಾಲಕೋಟ್‌ ಮತ್ತು ಇತರ ಎರಡು ಉಗ್ರ ಶಿಬಿರಗಳ ಮೇಲೆ ನಡೆಸಲಾಗಿರುವ ದಾಳಿಯಲ್ಲಿ ಎಷ್ಟು ಮಂದಿ ಉಗ್ರರು ಅಸುನೀಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಪೂರ್‌ ಈ ಸಂದರ್ಭದಲ್ಲಿ ಅದರ ಬಗ್ಗೆ ನಿಖರವಾಗಿ ಹೇಳಲಾಗದು ಎಂದರು. 

ನಿರಂತರ ಟಾರ್ಗೆಟ್‌: ಪಾಕಿಸ್ತಾನ ಉಗ್ರರಿಗೆ ನೀಡುವ ಬೆಂಬಲ ನಿಲ್ಲುವ ವರೆಗೆ ಉಗ್ರರ ತರಬೇತಿ ಶಿಬಿರಗಳನ್ನು ಗುರಿಯಾಗಿರಿಸಿಕೊಂಡು ನಡೆಸುವ ದಾಳಿ ನಿಲ್ಲುವುದಿಲ್ಲ ಎಂದು ಭೂಸೇನೆಯ ಹಿರಿಯ ಅಧಿಕಾರಿ  ಮೇ.ಜ.ಸುರೇಂದ್ರ ಸಿಂಗ್‌ ಮಹಲ್‌ ಎಚ್ಚರಿಕೆ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲೂ ಕಟ್ಟೆಚ್ಚರ ಮುಂದುವರಿಯಲಿದೆ ಎಂದಿದ್ದಾರೆ. ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯ ಎರಡು ಪ್ರಮುಖ ಕೇಂದ್ರಗಳನ್ನು ಉಡಾಯಿಸಲು ಮುಂದಾಗಿತ್ತು ಎಂದಿದ್ದಾರೆ. ನೌಕಾಪಡೆಯ ಉಪ ಮುಖ್ಯಸ್ಥ ರಿಯರ್‌ ಎಡ್ಮಿರಲ್‌ ಡಿ.ಎಸ್‌.ಗುಜ್ರಾಲ್‌ ಮಾತನಾಡಿ,  ನೌಕಾಪಡೆ ಕೂಡ ಎಲ್ಲಾ ರೀತಿಯ ಸವಾಲು ಎದುರಿಸಲು ಸಿದ್ಧವಾಗಿದೆ ಎಂದರು.

ಈಗಷ್ಟೇ ಒಂದು ‘ಪೈಲಟ್‌’ ಯೋಜನೆ ಪೂರ್ಣಗೊಂಡಿತು. ಪ್ರಾಯೋಗಿಕ ಯೋಜನೆ ಮುಗಿದ ಬಳಿಕ ನೈಜ ಯೋಜನೆ ಶುರುವಾಗುತ್ತದೆ. ಅಂತೆಯೇ, ನೈಜ ಯೋಜನೆ ಇನ್ನು ಆರಂಭವಾಗುತ್ತದೆ. ಇಷ್ಟು ದಿನ ನಡೆದಿದ್ದು  ಕೇವಲ ಪ್ರಾಕ್ಟೀಸ್‌ ಅಷ್ಟೆ.
– ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.