ಭದ್ರತೆ ಹೆಚ್ಚಿಸಲು ಕೇಂದ್ರದಿಂದ ಸೂಚನೆ: ವಿಧ್ವಂಸಕ ಕೃತ್ಯ ಸಂಚು?
Team Udayavani, Mar 1, 2019, 12:56 AM IST
ಬೆಂಗಳೂರು: ಪುಲ್ವಾಮ ಘಟನೆ ಬಳಿಕ ರಾಜ್ಯದಲ್ಲೂ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವ ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನೀಡಿದ್ದು, ಪ್ರಮುಖ ನಗರ, ಅಣೆಕಟ್ಟೆಗಳು, ಅಣುಸ್ಥಾವರ ಸೇರಿ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಿಂದ ಎಲ್ಲಾ ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಪೊಲೀಸ್ ವರಿಷ್ಠರಿಗೆ ಮತ್ತು ವಲಯಗಳ ಪೊಲೀಸ್ ಮಹಾ ನಿರೀಕ್ಷಕರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ದೂರದರ್ಶನ, ಆಕಾಶವಾಣಿ ಕೇಂದ್ರಗಳು, ಕೇಂದ್ರಸರ್ಕಾರಕ್ಕೆ ಸಂಬಂಧಿಸಿದ ಆಯಕಟ್ಟಿನ ಕಟ್ಟಡಗಳು, ಪ್ರದೇಶಗಳಿಗೆ ಹೆಚ್ಚಿನ ರಕ್ಷಣೆ ಒದಗಿಸಲೂ ಹೇಳಲಾಗಿದೆ.
ಕರಾವಳಿಯುದ್ದಕ್ಕೂ ಕರಾವಳಿ ರಕ್ಷಣಾ ಪಡೆ ಹೆಚ್ಚಿನ ನಿಗಾ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಿಗಿಗೊಳಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕ ಬಸ್, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳ ಸುತ್ತ ನಿಗಾ ವಹಿಸಲಾಗಿದೆ. ಶಂಕಿತ ವ್ಯಕ್ತಿ, ವಸ್ತುಗಳು ಕಂಡುಬಂದಲ್ಲಿ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ -100ಗೆ ಕರೆ ಮಾಡಲು ವಿನಂತಿಸಲಾಗಿದೆ.
ಬಸ್ ನಿಲ್ದಾಣಗಳಲ್ಲಿ ಕಟ್ಟೆಚ್ಚರ
ಸಾರ್ವಜನಿಕ ಬಸ್ ನಿಲ್ದಾಣ, ಸಾರಿಗೆ ಬಸ್ಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕೆಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೆಎಸ್ಆರ್ಟಿಸಿ ಭದ್ರತಾ ಮತ್ತು ಜಾಗೃತಾ ವಿಭಾಗ ತಿಳಿಸಿದೆ.
ಪ್ರಯಾಣಿಕರಿಗೆ ತಿಳಿವಳಿಕೆ
ಬಸ್ ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು/ ಅವರು ತರುವ ಬ್ಯಾಗ್ಗಳ
ಬಗ್ಗೆ ಮಾಹಿತಿ ನೀಡುವಂತೆ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಮನವಿ.
ಪೊಲೀಸ್, ಆಸ್ಪತ್ರೆ, ಅಗ್ನಿ ಶಾಮಕ ಠಾಣೆ, ಸಂಸ್ಥೆಯ ಕಂಟ್ರೋಲ್ ರೂಂನ ದೂರವಾಣಿ ಸಂಖ್ಯೆಯನ್ನು ಬಸ್ ನಿಲ್ದಾಣ ಮುಂಭಾಗದಲ್ಲಿ ಪ್ರಕಟಿಸಲಾಗುವುದು.
ಸಂಸ್ಥೆಯ ಎಲ್ಲ ವರ್ಗದ ಸಿಬ್ಬಂದಿಗೆ ಭಯೋತ್ಪಾದಕರ ಕೃತ್ಯದ ಬಗ್ಗೆ ಎಚ್ಚರ ವಹಿಸುವಂತೆ ತಿಳಿವಳಿಕೆ.
ತುರ್ತು ಪರಿಸ್ಥಿತಿಯಲ್ಲಿ ಗಾಯಾಳುಗಳನ್ನು ಸಾಗಿಸುವ ಬಗ್ಗೆ ಹಾಗೂ ಅಗ್ನಿ ಶಾಮಕ ಉಪಕರಣಗಳ ಉಪಯೋಗಿಸುವ ಬಗ್ಗೆ ಭದ್ರತಾ, ನಿಲ್ದಾಣದ ಸಿಬ್ಬಂದಿಗೆ ಅಣುಕು ಪ್ರದರ್ಶನ ನೀಡಲಾಗುವುದು.
ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ನಿಲ್ದಾಣದಲ್ಲಿ ನಿರುಪಯುಕ್ತ ವಸ್ತುಗಳು, ವಿಶ್ರಾಂತಿ ಗೃಹಗಳು, ಶೌಚಾಲಯ ಸೇರಿ ಎಲ್ಲೆಡೆ ತಪಾಸಣೆ
ಬಸ್ ನಿಲ್ದಾಣಗಳಿಗೆ ಪ್ರತಿ ನಿತ್ಯ ಸ್ಥಳೀಯ ಪೊಲೀಸರು ಮೂರು ಬಾರಿ ಗಸ್ತು ತಿರುಗುವ ವ್ಯವಸ್ಥೆ.
ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಹಾಗೂ ಡಿವಿಆರ್ಗಳ ಕಾರ್ಯಕ್ಷಮತೆ ಬಗ್ಗೆ ಖಾತರಿಪಡಿಸಿಕೊಳ್ಳುವುದು.ಪ್ರಯಾಣಿಕರಿಗೆ ತಿಳಿವಳಿಕೆ
ಬಸ್ ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು/ ಅವರು ತರುವ ಬ್ಯಾಗ್ಗಳ
ಬಗ್ಗೆ ಮಾಹಿತಿ ನೀಡುವಂತೆ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಮನವಿ.
ಪೊಲೀಸ್, ಆಸ್ಪತ್ರೆ, ಅಗ್ನಿ ಶಾಮಕ ಠಾಣೆ, ಸಂಸ್ಥೆಯಕಂಟ್ರೋಲ್ ರೂಂನ ದೂರವಾಣಿ ಸಂಖ್ಯೆಯನ್ನು ಬಸ್ ನಿಲ್ದಾಣ ಮುಂಭಾಗದಲ್ಲಿ ಪ್ರಕಟಿಸಲಾಗುವುದು.
ಸಂಸ್ಥೆಯ ಎಲ್ಲ ವರ್ಗದ ಸಿಬ್ಬಂದಿಗೆ ಭಯೋತ್ಪಾದಕರ ಕೃತ್ಯದ ಬಗ್ಗೆ ಎಚ್ಚರ ವಹಿಸುವಂತೆ ತಿಳಿವಳಿಕೆ.
ತುರ್ತು ಪರಿಸ್ಥಿತಿಯಲ್ಲಿ ಗಾಯಾಳುಗಳನ್ನು ಸಾಗಿಸುವ ಬಗ್ಗೆ ಹಾಗೂ ಅಗ್ನಿ ಶಾಮಕ ಉಪಕರಣಗಳ ಉಪಯೋಗಿಸುವ ಬಗ್ಗೆ ಭದ್ರತಾ, ನಿಲ್ದಾಣದ ಸಿಬ್ಬಂದಿಗೆ ಅಣುಕು ಪ್ರದರ್ಶನ ನೀಡಲಾಗುವುದು.
ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ನಿಲ್ದಾಣದಲ್ಲಿ ನಿರುಪಯುಕ್ತ ವಸ್ತುಗಳು, ವಿಶ್ರಾಂತಿ ಗೃಹಗಳು, ಶೌಚಾಲಯ ಸೇರಿ ಎಲ್ಲೆಡೆ ತಪಾಸಣೆ
ಬಸ್ ನಿಲ್ದಾಣಗಳಿಗೆ ಪ್ರತಿ ನಿತ್ಯ ಸ್ಥಳೀಯ ಪೊಲೀಸರು ಮೂರು ಬಾರಿ ಗಸ್ತು ತಿರುಗುವ ವ್ಯವಸ್ಥೆ.
ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಹಾಗೂ ಡಿವಿಆರ್ಗಳ ಕಾರ್ಯಕ್ಷಮತೆ ಬಗ್ಗೆ ಖಾತರಿಪಡಿಸಿಕೊಳ್ಳುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ