ಸುರಂಗ ಸಂಚಾರದ ಸಂಕಟ


Team Udayavani, Mar 1, 2019, 6:12 AM IST

suranga.jpg

ಬೆಂಗಳೂರು: ಗೃಹೋಪಯೋಗಿ ಉಪಕರಣ, ಅಲಂಕಾರಿಕ ವಸ್ತುಗಳು, ಮಕ್ಕಳ ಆಟಿಕೆಗಳು, ಮೊಬೈಲ್‌ ಬಿಡಿ ಭಾಗಗಳು, ತಿಂಡಿ-ತಿನಿಸು, ಹಣ್ಣು-ಹಂಪಲು, ಎಲೆಕ್ಟ್ರಾನಿಕ್‌ ಉಪಕರಣಗಳು ಹೀಗೆ ನಾನಾ ವಸ್ತುಗಳು ದೊರೆಯುವ ಈ ಜಾಗ ಮಾರುಕಟ್ಟೆ ಇಲ್ಲವೇ ಸೂಪರ್‌ ಮಾರ್ಕೆಟ್‌ ಅಲ್ಲ. ಬದಲಿಗೆ ಲಕ್ಷಾಂತರ ಜನ ನಿತ್ಯ ಸಂಚರಿಸುವ ಕೆಂಪೇಗೌಡ ಬಸ್‌ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸಂಪರ್ಕಿಸುವ ಪಾದಚಾರಿ ಸುರಂಗ ಮಾರ್ಗ.

ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿರುವ ಧನ್ವಂತರಿ ರಸ್ತೆ ಬಳಿಯಿಂದ ಆರಂಭವಾಗುವ ಪಾದಚಾರಿ ಸುರಂಗ ಮಾರ್ಗ ಹಾಗೂ ನಗರ ರೈಲು ನಿಲ್ದಾಣದ ಬಳಿಯಿರುವ ಸುರಂಗ ಮಾರ್ಗಗಳು ಅವ್ಯವಸ್ಥೆಯ ಆಗರವೆನಿಸಿವೆ. ಅನೈರ್ಮಲ್ಯ, ಬೀದಿ ವ್ಯಾಪಾರಿಗಳ ಹಾವಳಿಯಿಂದ ಜನರು ನೆಮ್ಮದಿಯಾಗಿ ನಡೆದಾಡಲು ಸಾಧ್ಯವಾಗದ ಸ್ಥಿತಿಯಿದೆ. 

ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಕೆಂಪೇಗೌಡ ಬಸ್‌ ನಿಲ್ದಾಣಗಳಿಗೆ ಅಂದಾಜು ಐದು ಲಕ್ಷ ಜನ ನಿತ್ಯ ಬಂದು ಹೋಗುತ್ತಾರೆ. ಜತೆಗೆ ನಗರ ರೈಲು ನಿಲ್ದಾಣ ಹಾಗೂ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಲಕ್ಷಾಂತರ ಜನ ಸಂಚರಿಸುತ್ತಾರೆ. ಪರಿಣಾಮ ಪಾದಚಾರಿ ಸುರಂಗ ಮಾರ್ಗ ಬಳಸುವವರ ಸಂಖ್ಯೆಯೂ ಹೆಚ್ಚಾಗಿದೆ.

ಆದರೆ, ಸುರಂಗ ಮಾರ್ಗದಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಲು ಬಿಬಿಎಂಪಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ರೈಲ್ವೆ ಇಲಾಖೆ, ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಶಾಸಕರು ಸೇರಿ ಯಾರೊಬ್ಬರೂ ಆಸಕ್ತಿ ತೋರುತ್ತಿಲ್ಲ. ಇದರಿಂದ ಸುರಂಗ ಮಾರ್ಗದಲ್ಲಿ ಸಂಚರಿಸಲು ಹಿಂದೇಟು ಹಾಕುವ ಪ್ರಯಾಣಿಕರು, ಗುಬ್ಬಿ ತೋಟದಪ್ಪ ಛತ್ರ ರಸ್ತೆಯಲ್ಲಿನ ನಾಲ್ಕೈದು ಅಡಿ ಎತ್ತರದ ಉಕ್ಕಿನ ವಿಭಜಕ ಹತ್ತಿಳಿಯುವ ಅಪಾಯಕಾರಿ ಸಾಹಸ ಮಾಡುತ್ತಿದ್ದಾರೆ.

ಪ್ರಮುಖ ನಿಲ್ದಾಣಗಳಿಗೆ ಸಂಪರ್ಕಿಸುವ ಉದ್ದೇಶದಿಂದ ಹತ್ತಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುರಂಗ ಮಾರ್ಗದಲ್ಲಿ ಬೀದಿ ವ್ಯಾಪಾರಿಗಳೇ ತುಂಬಿದ್ದು, ಕೆಲವೆಡೆ ಮಲ-ಮೂತ್ರ ವಿಸರ್ಜನೆ, ತ್ಯಾಜ್ಯ ಸುರಿಯುವುದರಿಂದ ಅನೈರ್ಮಲ್ಯ ತಾಂಡವವಾಡುತ್ತಿದೆ.

ಅಪಾಯಕಾರಿ ಜಂಪಿಂಗ್‌: ಸುರಂಗ ಮಾರ್ಗದ ಅವ್ಯವಸ್ಥೆಗೆ ಬೇಸತ್ತ ಪಾದಚಾರಿಗಳು ಪ್ರಮುಖ ನಿಲ್ದಾಣಗಳಿಗೆ ಹೋಗಲು ನಾಲ್ಕೈದು ಅಡಿ ಎತ್ತರದ ಉಕ್ಕಿನ ವಿಭಜಕ ಹತ್ತಿ ಇಳಿಯುತ್ತಾರೆ. ಯುವಕರು, ವಯಸ್ಕರು ಸೇರಿದಂತೆ ಮಹಿಳೆಯರು ಹಾಗೂ ಮಕ್ಕಳು ಸಹ ವಿಭಜಕ ಜಿಗಿದು ರಸ್ತೆ ದಾಟುತ್ತಿದ್ದಾರೆ. ಇದರಿಂದಾಗಿ ಹಲವು ಬಾರಿ ಅಪಘಾತ ಸಂಭವಿಸಿವೆ. ಶಾಂತಲಾ ಸಿಲ್ಕ್ಹೌಸ್‌, ಓಕಳಿಪುರ ಕಡೆಯಿಂದ ವೇಗವಾಗಿ ಬರುವ ವಾಹನಗಳಿಗೆ ದಿಢೀರ್‌ ಜನರು ಅಡ್ಡಬರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ಅನೈರ್ಮಲ್ಯ ವಾತಾವರಣ: ಸ್ಥಳೀಯ ಸಂಸ್ಥೆಗಳು ಪಾದಚಾರಿ ಸುರಂಗಗಳ ನಿರ್ವಹಣೆ ಮಾಡದ ಕಾರಣ, ಹಗಲು ಕತ್ತಲೆ, ರಾತ್ರಿಯೂ ಕತ್ತಲೆ ಎಂಬ ಸ್ಥಿತಿಯಿದೆ. ಬಹುತೇಕ ಕಡೆ ಬಲ್ಬ್ಗಳು ನಿಷ್ಕ್ರಿಯಗೊಂಡಿವೆ. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆಯಿಲ್ಲ. ಜತೆಗೆ ಸುರಂಗ ಮಾರ್ಗದ ಗೋಡೆಗಳು ಪಾನ್‌ ಉಗುಳಿನಿಂದ ವಿಕಾರವಾಗಿವೆ.

ಬೀದಿ ವ್ಯಾಪಾರಿಗಳ ಹಾವಳಿ: ಮೆಜೆಸ್ಟಿಕ್‌ನ ಪಾದಚಾರಿ ಸುರಂಗ ಮಾರ್ಗದ ಎರಡೂ ಬದಿಗಳಲ್ಲಿ ಬಟ್ಟೆ, ಗೃಹ ಬಳಕೆ ವಸ್ತು, ಅಲಂಕಾರಿಕ ವಸ್ತುಗಳು, ಆಟಿಕೆ ಇನ್ನಿತರ ವಸ್ತುಗಳ ಮಾರಾಟ ಮಾಡುವುದರಿಂದ ಪಾದಚಾರಿಗಳು ಓಡಾಡಲು ಸ್ಥಳವೇ ಇಲ್ಲದಂತಾಗಿದೆ. ಮತ್ತೂಂದೆಡೆ ಕೆಲ ವ್ಯಾಪಾರಿಗಳು ಉತ್ಪನ್ನಗಳನ್ನು ಖರೀದಿಸುವಂತೆ ಪ್ರಯಾಣಿಕರ ದುಂಬಾಲು ಬೀಳುವುದು ಕಿರಿಕಿರಿ ಉಂಟುಮಾಡುತ್ತದೆ.

ಸ್ವಚ್ಛತೆಗೆ  ಕ್ರಮ ಕೈಗೊಳ್ಳುವರೇ ಮೇಯರ್‌?: ನಗರದ ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ತಿಳಿಸಿರುವ ಮೇಯರ್‌ ಗಂಗಾಂಬಿಕೆ, ಈಗಾಗಲೇ ಕೆ.ಆರ್‌.ಮಾರುಕಟ್ಟೆಯ ಪಾದಚಾರಿ ಸುರಂಗ ಮಾರ್ಗ ಪರಿಶೀಲಿಸಿ ಸ್ವಚ್ಛತೆಗೆ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ನಗರದ ಹೃದಯ ಭಾಗದಲ್ಲಿರುವ ಈ ಪಾದಚಾರಿ ಸುರಂಗ ಮಾರ್ಗದ ಅವ್ಯವಸ್ಥೆಗಳಿಗೂ ಪರಿಹಾರ ಕಲ್ಪಿಸವರೇ ಎಂದು ಕಾದು ನೋಡಬೇಕಾಗಿದೆ.

ಪಬ್ಲಿಕ್‌ ಅಪೀಲ್‌: ರಾಜಧಾನಿಯಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ “ಮೆಟ್ರೋ ಫೋಕಸ್‌’ ಮೂಲಕ ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತಂದು, ಪರಿಹಾರ ಕಲ್ಪಿಸುವ ಪ್ರಯತ್ನ “ಉಯದವಾಣಿ’ಯದ್ದು. ಈ ಹಿನ್ನೆಲೆಯಲ್ಲಿ, ತಮ್ಮ ಹೊಣೆ ನಿರ್ವಹಿಸುವಲ್ಲಿ ಸ್ಥಳೀಯ ಸಂಸ್ಥೆಗಳು ವಿಫ‌ಲವಾಗಿರುವುದು, ಎಷ್ಟೇ ದೂರು ಕೊಟ್ಟರೂ ತಿರುಗಿ ನೋಡದಿರುವುದು, ಕಾಮಗಾರಿ ಪೂರ್ಣಗೊಳಿಸದಿರುವುದು ಸೇರಿ ಪರಿಹಾರ ದೊರೆಯದ ಯಾವುದೇ ಸಮಸ್ಯೆ ನಿಮ್ಮ ಸುತ್ತ ಇದ್ದರೆ ನೀವೂ ನಮಗೆ ತಿಳಿಸಬಹುದು. 

ವಾಟ್ಸ್‌ಆ್ಯಪ್‌: 88611 96369
ಇ-ಮೇಲ್‌: [email protected]

* ವೆಂ.ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.