ಕಬ್ಬಿಣ ಕಾದಿರುವಾಗಲೇ ಬಡಿಯಬೇಕು 


Team Udayavani, Mar 2, 2019, 12:30 AM IST

v-44.jpg

ತಾನು ಶಾಂತಿಯನ್ನು ಅಪೇಕ್ಷಿಸುತ್ತೇನೆ ಎಂದು ತೋರಿಸಿಕೊಡಲು ಪಾಕಿಸ್ತಾನ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರನ್ನು ಬಿಡುಗೊಳಿಸಿರಬಹುದು. ಆದರೆ ಈ ಒಂದು ನಡೆಯಿಂದ ಪಾಕಿಸ್ತಾನ ವಿಶ್ವಾಸಾರ್ಹ ದೇಶವೇನೂ ಆಗುವುದಿಲ್ಲ. ವರ್ಧಮಾನ್‌ ಅವರನ್ನು ಬಿಡುಗಡೆಗೊಳಿಸುವುದು ಪಾಕ್‌ ಪಾಲಿಗೆ ಅನಿವಾರ್ಯವಾಗಿತ್ತೇ ಹೊರತು ಇದು ಶಾಂತಿಯ ಸಂದೇಶವೂ ಅಲ್ಲ , ಔದಾರ್ಯವೂ ಅಲ್ಲ. 

ಬಿಡುಗಡೆಗೊಳಿಸದಿದ್ದರೆ ಭಾರತ ಯಾವ ರೀತಿಯ ಏಟು ಕೊಡಬಹುದು ಎಂದು ಊಹಿಸಲು ಅಸಾಧ್ಯವಾಗಿ ಪಾಕ್‌ ಈ ಕ್ರಮ ಕೈಗೊಂಡಿದೆ. ಇಡೀ ಜಗತ್ತು ತನ್ನ ವಿರುದ್ಧ ನಿಂತಿದೆ ಎಂದು ತಡವಾಗಿಯಾದರೂ ಆ ದೇಶಕ್ಕೆ ಅರಿವಾಗಿದೆ. ಆದರೆ ಇಷ್ಟರಿಂದಲೇ ಆ ದೇಶ ಪಾಠ ಕಲಿತುಕೊಂಡಿದೆ ಎಂದು ಭಾವಿಸಿದರೆ ತಪ್ಪಾಗಬಹುದು. ಏಕೆಂದರೆ ನಯವಂಚನೆ ಮತ್ತು ಬೆನ್ನಿಗಿರಿಯುವ ಬುದ್ಧಿ ಆ ದೇಶದ ಜಾಯಮಾನವೇ ಆಗಿದೆ. ಹೀಗಾಗಿ ಈಗ ಭಯೋತ್ಪಾದನೆ ವಿರುದ್ಧ ಪ್ರಾರಂಭಿಸಿರುವ ಹೋರಾಟ ಒಂದು ತಾರ್ಕಿಕ ಅಂತ್ಯ ತಲುಪುವ ತನಕ ವಿಶ್ರಮಿಸಬಾರದು. ಎಲ್ಲ ರೀತಿಯ ಒತ್ತಡಗಳನ್ನು ಹಾಕಿ ತನ್ನ ನೆಲದಲ್ಲಿರುವ ಭಯೋತ್ಪಾದಕರ ವಿರುದ್ಧ ಪಾಕ್‌ ಕ್ರಮ ಕೈಗೊಳ್ಳುವಂತೆ ಮಾಡುವುದೇ ಈ ಸಮಸ್ಯೆಗಿರುವ ಶಾಶ್ವತ ಪರಿಹಾರ. ಅದಕ್ಕೆ ಈಗ ಸಂದರ್ಭ ಪಕ್ಕಾ ಆಗಿದೆ. ಕಬ್ಬಿಣ ಕಾದಿರುವಾಗಲೇ ಬಡಿಯುವುದು ಬುದ್ಧಿವಂತಿಕೆ. 

ಸದ್ಯದ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಪೂರ್ಣ ಪ್ರಮಾಣದ ಯುದ್ಧದಲ್ಲಿ ಭಾಗವಹಿಸುವ ಸ್ಥಿತಿಯಲ್ಲಿಲ್ಲ. ಒಂದೆಡೆ ಆ ದೇಶದ ಆರ್ಥಿಕ ಸ್ಥಿತಿ ಪಾತಾಳ ತಲುಪಿದೆ. ಇನ್ನೊಂದೆಡೆ ಅತ್ಯಾಪ್ತ ಎಂದು ಪರಿಗಣಿಸಿದ್ದ ಚೀನ ಸೇರಿದಂತೆ ಯಾವ ದೇಶದ ಬೆಂಬಲ ಸಿಗುವ ಸಾಧ್ಯತೆಯೂ ಇಲ್ಲ. ಹೀಗಾಗಿ ಪಾಕ್‌ ಪ್ರಧಾನಿ ಪದೇ ಪದೇ ನಾವು ಶಾಂತಿ ಬಯಸುತ್ತೇವೆ, ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳುತ್ತಿದ್ದಾರೆ. ಇದು ಪರಿಸ್ಥಿತಿಯ ಅನಿವಾರ್ಯತೆಯಿಂದ ಬಂದಿರುವ ಮಾತುಗಳೇ ಹೊರತು ಹೃದಯಂತರಾಳದ ನೈಜ ಅಪೇಕ್ಷೆಯಲ್ಲ. ಪಾಕಿಸ್ತಾನದ ನಿರಾಕರಣೆಗಳನ್ನು ಅಥವಾ ತನಿಖೆ ನಡೆಸುವ ಆಶ್ವಾಸನೆಗಳನ್ನು ನಂಬುವಂತಿಲ್ಲ. ಸದ್ಯಕ್ಕೇನೋ ಭಾರತದ ಕೊಟ್ಟ ಏಟಿನಿಂದ ಉಗ್ರ ಸಂಘಟನೆ ಗಳು ಥಂಡಾ ಹೊಡೆದಿರಬಹುದು. ಆದರೆ ಎಂದಿನ ತನಕ ಪಾಕಿಸ್ತಾನದ ಸೇನೆ ಮತ್ತು ಗುಪ್ತಚರ ಪಡೆಯ ಬೆಂಬಲ ಸಿಗುತ್ತದೋ ಅಲ್ಲಿಯ ತನಕ ಈ ಉಗ್ರ ಪಡೆಗಳು ಚಿಗಿತುಕೊಳ್ಳುತ್ತಲೆೇ ಇರುತ್ತವೆ. ಇದೊಂದು ರೀತಿಯಲ್ಲಿ ರಕ್ತ ಬೀಜಾಸುರನ ಸಂತತಿಯಿದ್ದಂತೆ. ಅಲ್ಲಿ ಉಗ್ರವಾದ ಸಂಪೂರ್ಣ ಮೂಲೋತ್ಪಾಟನೆಯಾಗುವ ತನಕ ಶಾಂತಿ ಮರೀಚಿಕೆಯಾಗಿಯೇ ಇರಲಿದೆ. ಈ ಮಾದರಿಯ ಶಾಂತಿ ಮಾತುಕತೆಗಳನ್ನು ಹಲವಾರು ಬಾರಿ ನಡೆಸಲಾಗಿದೆ ಮತ್ತು ಅದರ ಫ‌ಲಿತಾಂಶವನ್ನೂ ನೋಡಿಯಾಗಿದೆ. 

ಅಮೆರಿಕ, ಬ್ರಿಟನ್‌ ಮತ್ತು ಫ್ರಾನ್ಸ್‌ ದೇಶಗಳು ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಸ್ಥಾಪಕ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋ ತ್ಪಾದಕನೆಂದು ಘೋಷಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮತ್ತೂಮ್ಮೆ ಮನವಿ ಮಾಡಿವೆ. ಇದೇ ವೇಳೆ ಪಾಕಿಸ್ತಾನವೂ ಮಸೂದ್‌ ತನ್ನಲ್ಲಿರುವುದನ್ನು ಮೊದಲ ಬಾರಿಗೆ ನೇರವಾಗಿ ಒಪ್ಪಿಕೊಂಡಿದೆ. ಇದು ಮಹತ್ವದ ಬೆಳವಣಿ ಗೆಯೇ ಆಗಿದ್ದರೂ ಇದೇ ವೇಳೆ ಅವನ ವಿರುದ್ಧ ಕ್ರಮ ಕೈಗೊಳ್ಳಲು ಸಾಕ್ಷಿ ಕೊಡಿ ಎನ್ನುವ ಮಾಮೂಲು ಆಲಾಪನೆಯನ್ನೂ ಅಲ್ಲಿನ ವಿದೇಶಾಂಗ ಸಚಿ ವರು ಮಾಡಿದ್ದಾರೆ. ಸಾಕ್ಷಿ ಕೊಡುವ ಬದಲು ಅಂತಾರಾಷ್ಟ್ರೀಯ ಒತ್ತಡದಿಂ ದಲೇ ಪಾಕಿಸ್ತಾನ ಮಸೂದ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಡಲು ಭಾರತ ತನ್ನ ಎಲ್ಲ ರಾಜತಾಂತ್ರಿಕ ಕೌಶಲಗಳನ್ನು ಬಳಸಿಕೊಳ್ಳಬೇಕು. ಈ ನಿಟ್ಟಿ ನಲ್ಲಿ ರಶ್ಯಾವೂ ಸೇರಿದಂತೆ ಎಲ್ಲ ದೇಶಗಳ ನೆರವು ಪಡೆದುಕೊಳ್ಳಬಹುದು. 

ಈ ಬಿಗುವಿನ ಪರಿಸ್ಥಿತಿಯಲ್ಲಿ ಭಾರತದ ರಾಜಕೀಯ ವ್ಯವಸ್ಥೆ ಸರಕಾರ ಮತ್ತು ಸೇನೆಯ ಬೆಂಬಲಕ್ಕೆ ನಿಲ್ಲುವುದು ಅತ್ಯಗತ್ಯ. ಅಂತೆಯೇ ಸರಕಾರವೂ ಪಾಕ್‌ ವಿರುದ್ಧ ಕೈಗೊಳ್ಳುವ ಕ್ರಮಗಳಲ್ಲಿ ರಾಜಕೀಯ ಲಾಭದ ಅಪೇಕ್ಷೆ ಇಟ್ಟುಕೊಳ್ಳಬಾರದು. ಪಾಕಿಸ್ತಾನದ ಮೇಲೆ ದಾಳಿ ಮಾಡಿದ ಕಾರಣ ನಾವು ಗೆಲ್ಲುತ್ತೇವೆ ಎನ್ನುವುದು ಸಂಕುಚಿತ ದೃಷ್ಟಿಕೋನ ಮಾತ್ರವಲ್ಲದೆ ಹೊಣೆಗೇಡಿತನವೂ ಆಗುತ್ತದೆ. ಚುನಾವಣೆಯೇ ಬೇರೆ, ರಾಷ್ಟ್ರೀಯ ಭದ್ರತೆಯೇ ಬೇರೆ. ದೇಶದ ರಕ್ಷಣೆಯ ವಿಷಯಕ್ಕೆ ಬಂದಾಗ ಎಲ್ಲರೂ ಒಗ್ಗಟ್ಟಾಗಿರಬೇಕು. ಇಲ್ಲದಿದ್ದರೆ ಇದರ ಲಾಭವನ್ನು ಶತ್ರು ದೇಶ ಪಡೆದುಕೊಳ್ಳುತ್ತದೆ. ಇಂಥ ಒಂದು ಪ್ರಯತ್ನವನ್ನು ಈಗಾಗಲೇ ಪಾಕಿಸ್ತಾನ ಮಾಡಿ ಆಗಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ಭಾರತವೇ ಈ ಸನ್ನಿವೇಶನ್ನು ಸೃಷ್ಟಿಸಿದೆ ಎಂಬ ರಂಗುಕೊಡಲು ಆ ದೇಶ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ನಮ್ಮ ರಾಜಕೀಯ ಪಕ್ಷಗಳ ವರ್ತನೆಯೂ ಇದನ್ನು ಸಮರ್ಥಿಸುವಂತಿದ್ದರೆ ಇದರ ಪರಿಣಾಮವನ್ನು ಅನುಭವಿಸಬೇಕಾಗುವುದು ದೇಶ ಎನ್ನುವ ಅರಿವು ಇರಬೇಕು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.