ಎಲ್ಲರಿಗೂ ಪಾಸ್‌ಪೋರ್ಟ್‌ ಅವಶ್ಯ


Team Udayavani, Mar 2, 2019, 7:16 AM IST

yllarigu.jpg

ಚನ್ನಪಟ್ಟಣ: ಪಾಸ್‌ಪೋರ್ಟ್‌ ಕೇವಲ ದೇಶಕ್ಕೆ ಹೋಗುವ ಉದ್ದೇಶಕ್ಕಾಗಿ ಇರುವ ವ್ಯವಸ್ಥೆಯಲ್ಲ. ಅದು ದೇಶದ ಪ್ರತಿಯೊಬ್ಬ ನಾಗರಿಕರು ಹೊಂದಬೇಕಾದ ಅವಶ್ಯ ಗುರುತಿನ ಚೀಟಿಯಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಪಟ್ಟಣದ ಪ್ರಧಾನ ಅಂಚೆ ಕಚೇರಿಯ ಪಕ್ಕದಲ್ಲಿ ನಿರ್ಮಿಸಿರುವ ನೂತನ ಅಂಚೆ ಕಚೇರಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಪಾಸ್‌ಪೋರ್ಟ್‌ ಅನ್ನು ಹಲವು ದಾಖಲಾತಿಗಳನ್ನು ಪರಿಶೀಲನೆ ನಡೆಸಿ ನೀಡಲಾಗುತ್ತದೆ. ಜತೆಗೆ ಪೊಲೀಸ್‌ ಪರಿಶೀಲನೆಯೂ ಆಗಿರುತ್ತದೆ. ಆಧಾರ್‌, ಎಪಿಕ್‌ ಕಾರ್ಡ್‌ಗಳಿದ್ದರೂ ಪಾಸ್‌ಪೋರ್ಟ್‌ ದೇಶದ ನಾಗರಿಕರು ಅಗತ್ಯವಾಗಿ ಪಡೆದುಕೊಳ್ಳಬೇಕಿದೆ ಎಂದರು.

ಲೋಕಸಭಾ ಕ್ಷೇತ್ರಗಳಲ್ಲಿ ಸೇವಾ ಕೇಂದ್ರ ಆರಂಭ: ಪಾಸ್‌ಪೋರ್ಟ್‌ ಪರಿಶೀಲನೆ ಹಾಗೂ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ದೂರದ ಬೆಂಗಳೂರು ಅಥವಾ ಮೈಸೂರು ನಗರಗಳಿಗೆ ಈ ಹಿಂದೆ ಹೋಗಬೇಕಿತ್ತು. ದಿನವಿಡೀ ಕಾಲ ಕಳೆಯಬೇಕಿತ್ತು. ಆದರೆ, ಇದೀಗ ಎಲ್ಲಾ ವಿಧಾನಗಳನ್ನು ಸರಳೀಕರಿಸಿ ಹತ್ತಿರದಲ್ಲೇ ಸೇವೆ ಸಿಗುವಂತೆ ಭಾರತ ಸರ್ಕಾರ ದೇಶದೆಲ್ಲೆಡೆ 400 ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಕರ್ನಾಟಕದಲ್ಲಿಯೂ ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ ಒಂದರಂತೆ ಅಂಚೆ ಇಲಾಖೆ ಸಹಯೋಗದೊಂದಿಗೆ ಸೇವಾ ಕೇಂದ್ರ ತೆರೆಯಲಾಗುತ್ತಿದೆ, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ತಂತ್ರಜ್ಞಾನದಿಂದ ಅಂಚೆ ಮೂಲೆಗುಂಪು: ಈ ಹಿಂದೆ ಅಂಚೆ ಇಲಾಖೆ ಗ್ರಾಮೀಣ ಭಾಗದಲ್ಲಿ ಮಾಹಿತಿ ಸಂವಹನಕ್ಕಾಗಿ ಸಾಕಷ್ಟು ಶ್ರಮಿಸಿದೆ. ಅಂಚೆ ಇಲಾಖೆ ಇಲ್ಲದಿದ್ದರೆ ಯಾವುದೇ ಮಾಹಿತಿ ರವಾನೆಯಾಗುತ್ತಿರಲಿಲ್ಲ. ವರ್ಷಗಟ್ಟಲೆ ಜನಸೇವೆ ಸಲ್ಲಿಸಿದ ಇಲಾಖೆ ಇತ್ತೀಚಿನ ದಿನಗಳಲ್ಲಿ ತಂತ್ರಜಾnನ ಬೆಳೆದಂತೆ ಮೂಲೆಗುಂಪಾಗುತ್ತಿದೆ. ಅದನ್ನು ತಪ್ಪಿಸಲು ಅಂಚೆ ಸೇವೆಯ ಜತೆಗೆ ಬ್ಯಾಂಕಿಂಗ್‌, ಜೀವ ವಿಮೆ, ಪೆನನ್‌ ಸ್ಕೀಂ ಹೀಗೆ ಇತರೆ ಸೇವೆಗಳನ್ನು ನೀಡಲು ಭಾರತ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಸನಿಹದಲ್ಲೇ ಪಾಸ್‌ಪೋರ್ಟ್‌ ಸೇವೆ: ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿ ಭರತ್‌ಕುಮಾರ್‌ ಕುತ್ತಾಟಿ ಮಾತನಾಡಿ, ಸಾರ್ವಜನಿಕರಿಗೆ ಪಾಸ್‌ ಪೋರ್ಟ್‌ ಸೇವೆ ಸನಿಹದಲ್ಲೇ ಸಿಗುವಂತೆ ಮಾಡುವ ಉದ್ದೇಶದಿಂದ ಅಂಚೆ ಇಲಾಖೆ ಸಹಯೋಗದೊಂದಿಗೆ ಸೇವಾ ಕೇಂದ್ರ ಆರಂಭಿಸಲಾಗುತ್ತಿದೆ. ಅಂಚೆ ಇಲಾಖೆಯ ಸಿಬ್ಬಂದಿ ಹಾಗೂ ವಿದೇಶಾಂಗ ಇಲಾಖೆ ಅಧಿಕಾರಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲಿದ್ದಾರೆ. ಪ್ರತಿಯೊಬ್ಬರೂ ಪಾಸ್‌ಪೋರ್ಟ್‌ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ಪಾಸ್‌ಪೋರ್ಟ್‌ ಪೌರತ್ವದ ಸಂಕೇತ: ಪಾಸ್‌ ಪೋರ್ಟ್‌ ಸೇವೆ ಸಾರ್ವಜನಿಕರಿಗೆ 10-12 ದಿನಗಳಲ್ಲಿ ಲಭ್ಯವಾಗಬೇಕಿದ್ದರೂ ಪೊಲೀಸ್‌ ಪರಿಶೀಲನೆ ತಡವಾಗುತ್ತಿರುವುದರಿಂದ ಪ್ರಕ್ರಿಯೆ ತಡವಾಗುತ್ತಿದೆ. ಆನ್‌ಲೈನ್‌ನಲ್ಲೇ ಎಲ್ಲ ಪ್ರಕ್ರಿಯೆ ನಡೆಯಬೇಕಿರುವುದರಿಂದ ತಡವಾಗುವುದಿಲ್ಲ. ಸಾರ್ವಜನಿಕರು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ನಿಗದಿಯಾದ ದಿನಾಂಕದಂದು ಸೇವಾ ಕೇಂದ್ರಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಒದಗಿಸಬೇಕು. ಪಾಸ್‌ಪೋರ್ಟ್‌ ದೇಶದ ಪೌರತ್ವದ ಸಂಕೇತವಾಗಿದೆ ಎಂದು ಹೇಳಿದರು.

ಸದ್ಬಳಕೆಯಿಂದ ಉದ್ದೇಶ ಸಾರ್ಥಕ: ಬೆಂಗಳೂರು ಭಾಗದ ಪೋಸ್ಟ್‌ ಮಾಸ್ಟರ್‌ ಜನರಲ್‌ ಕರ್ನಲ್‌ ಅರವಿಂದ ವರ್ಮ ಮಾತನಾಡಿ, ಪಾಸ್‌ಪೋರ್ಟ್‌ ಸೇವಾ ಕೇಂದ್ರ ಅಂಚೆ ಕಚೇರಿ ಪಕ್ಕದಲ್ಲೇ ಸ್ಥಾಪನೆಯಾಗಬೇಕೆಂಬ ನಿಯಮವಿದೆ. ಅನ್ಯಕೆಲಸಕ್ಕಾಗಿ ವಿನ್ಯಾಸಗೊಂಡಿದ್ದ ಕಚೇರಿಯನ್ನೇ ಸೇವಾ ಕೇಂದ್ರಕ್ಕೆ ಬಳಕೆ ಮಾಡಲಾಗುತ್ತಿದೆ. ಸಾರ್ವಜನಿಕರು ಕೇಂದ್ರದ ಸದ್ಬಳಕೆ ಮಾಡಿಕೊಂಡರೆ ಉದ್ದೇಶ ಸಾರ್ಥಕವಾಗುತ್ತದೆ ಎಂದರು. ಈ ವೇಳೆಯಲ್ಲಿ ಅಂಚೆ ಅಧೀಕ್ಷಕ ಎನ್‌.ವಿ. ಸತ್ಯನಾರಾಯಣ ರಾಜು, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ವೀಣಾ ಕುಮಾರಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.