ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಆರ್ಥಿಕ ಸಬಲರಾಗಿಸಿ


Team Udayavani, Mar 2, 2019, 7:16 AM IST

hennu-mak.jpg

ಶ್ರೀರಂಗಪಟ್ಟಣ: ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸ್ವಂತ ಕಾಲ ಮೇಲೆ ನಿಂತು ಆರ್ಥಿಕ ಸಬಲರನ್ನಾಗಿ ಮಾಡಬೇಕು ಎಂದು ಪ್ರಾದೇಶಿಕ ನಿರ್ದೇಶಕ ಡಾ.ಸುಧಾಕರ್‌ ಹೇಳಿದರು. ಪಟ್ಟಣದ ಸಂದಲ್‌ ಕೋಟೆ ಆವರಣದಲ್ಲಿ ರಂಗನಾಯಕಿ ಸ್ತ್ರೀ ಸಮಾಜ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿವಿಧ ಆಟೋಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ದೇಶದ ರಾಷ್ಟ್ರಪಿತ ಮಹಾತ್ಮಗಾಂಧಿ, ಸ್ವಾಮಿ ವಿವೇಕಾನಂದ, ಡಾ.ಅಂಬೇಡ್ಕರ್‌ ಅವರು ಮಹಿಳೆಯರನ್ನು ಗೌರವಿಸುತ್ತಿದ್ದರು. ದೇಶದಲ್ಲಿ ಹೆತ್ತ ತಾಯಿಗೆ ಮೊದಲ ಸ್ಥಾನ ನೀಡುತ್ತೇವೆ. ನಂತರ ಗುರುಗಳಿಗೆ ಗೌರವ ಕೊಡಲಾಗುತ್ತದೆ. ಮಹಿಳೆಯರು ಇವತ್ತಿನ ದಿನದಲ್ಲಿ ಎಲ್ಲಾ ಸಮಾಜದ ವಾಹಿನಿಯಲ್ಲಿ ಗಂಡಿಗಿಂತಲೂ ಮುಂದುವರಿಯುವ ಅವಕಾಶವನ್ನು ನಮ್ಮ ದೇಶದ ಸಂವಿಧಾನ ಕಲ್ಪಿಸಲಾಗಿದೆ. ಗಂಡು ಹೆಣ್ಣೆಂಬ ಭೇದಭಾವನೆಯಿಲ್ಲದೆ ಸಮಾನವಾಗಿ ಮಹಿಳೆಯರನ್ನು ಗೌರವಿಸಬೇಕು ಎಂದು ಹೇಳಿದರು.

ಹೆಣ್ಣು ಸಂತತಿ ಕ್ಷೀಣ: ಜನವಾದಿ ಸಂಘಟನೆ ಮುಖ್ಯಸ್ಥೆ ಕುಮಾರಿ ಮಾತನಾಡಿ, ಸಮಾಜದಲ್ಲಿ ಹಿಂದಿನಿಂದಲೂ ಗಂಡು ಶ್ರೇಷ್ಠ, ಹೆಣ್ಣು ಕನಿಷ್ಠ ಎಂಬ ಭಾವನೆಯಲ್ಲಿ ಗಂಡನ್ನು ಪ್ರಧಾನವಾಗಿ ನೋಡಲಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಪರಿಣಾಮ ಹೆಣ್ಣು ಸಂತತಿಯೇ ಇಳಿಮುಖವಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಹೆಣ್ಣಿನ ಸಂಖ್ಯೆ ಇಳಿಮುಖವಾಗುತ್ತಿದೆ. ಅದರಲ್ಲೂ ಮಂಡ್ಯದಲ್ಲಿ ಕೊನೆಯ ಸ್ಥಾನದಲ್ಲಿದೆ. ಪಾಂಡವಪುರ ಹಾಗೂ ಶ್ರೀರಂಗಪಟ್ಟಣದಲ್ಲಿ ಮಹಿಳೆಯರ ಸಂಖ್ಯೆ ತುಂಬಾ ಕಡಿಮೆ ಇದೆ ಎಂದು ಆತಂಕವ್ಯಕ್ತಪಡಿಸಿದರು. 

ಮಹಿಳೆಯರು ಶ್ರಮಿಕರು: ಗ್ರಾಮೀಣ ಮಹಿಳೆಯರು ಶ್ರಮಿಕ ಜೀವಿಗಳು. ಮನೆಯ ಒಳಗೆ ಮತ್ತು ಹೊರಗೆ ಎರಡೂ ಕಡೆ ದುಡಿದರೂ ಅವರ ದುಡಿಮೆಗೆ ಬೆಲೆ ಇಲ್ಲ. ಅಲ್ಲದೆ ಅದನ್ನು ಪರಿಗಣಿಸುತ್ತಿಲ್ಲ. ಕೆಲಸದ ಒತ್ತಡದಲ್ಲಿ ಸಿಲುಕುವ ಮಹಿಳೆಯರು ಆರೋಗ್ಯವನ್ನೂ ನಿರ್ಲಕ್ಷಿಸುತ್ತಿದ್ದಾರೆ. ಆರೋಗ್ಯವಿದ್ದರೆ ಮಾತ್ರ ದುಡಿಯಲಾಗುತ್ತದೆ. ದುಡಿಮೆಯಷ್ಟೇ ಆರೋಗ್ಯದತ್ತಲೂ ಕಾಳಜಿ ವಹಿಸಬೇಕು. ಯಾವುದೇ ಕಷ್ಟಗಳು ಬಂದರೂ ಅದನ್ನು ನೀಗಿಸುವ ಜವಾಬ್ದಾರಿ ನಿಮ್ಮದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗನಾಯಕಿ ಸ್ತ್ರೀಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ ವಹಿಸಿದ್ದರು. ಜಿಲ್ಲಾ ಮಹಿಳಾ ಸಂಘಟನಾ ಅಧ್ಯಕ್ಷ ಅನುಪಮ, ಸಮಾಜದ ಗೌರವಾಧ್ಯಕ್ಷೆ ಪದ್ಮ, ದೈಹಿಕ ಶಿಕ್ಷಕಿ ಸುಮತಿ, ಗಂಗಾ, ಪ್ರಿಯಾ ಉಪಸ್ಥಿತಿಯಲ್ಲಿ  ಮಹಿಳಾ ವಕೀಲರು ಸೇರಿದಂತೆ ಹಲವು ಮಹಿಳಾ ಸಂಘಟನೆಗಳ ಮಹಿಳೆಯರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.