ದೇಶದ ಕಾರ್ಮಿಕರಲ್ಲಿ ಶೇ.92 ಅಸಂಘಟಿತ
Team Udayavani, Mar 2, 2019, 7:16 AM IST
ಹಾಸನ: ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣ ಸಲಹೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಏರ್ಪಡಿಸಿದ್ದ ಕಾರ್ಮಿಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಶೇ.92ಕ್ಕಿಂತ ಹೆಚ್ಚು ಕಾರ್ಮಿಕರು ಅಸಂಘಟಿತ ಕ್ಷೇತ್ರದಲ್ಲಿ ದುಡಿಯುತ್ತಿದ್ದು, ರಾಜ್ಯದಲ್ಲಿ 2.35 ಕೋಟಿ ಅಸಂಘಟಿತ ಕಾರ್ಮಿಕರಿದ್ದಾರೆ. ಅವರಲ್ಲಿ 1.70 ಕೋಟಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದಾರೆ ಎಂದು ಹೇಳಿದರು.
ಪರಿಹಾರ ಯೋಜನೆ: ಅಸಂಘಟಿತ ವಲಯದ ಬಹುತೇಕ ಕಾರ್ಮಿಕರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸಬೇಕಾಗಿದೆ. ಆ ನಿಟ್ಟಿನಲ್ಲಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಇದರ ಸದ್ಬಳಕೆ ಆಗಬೇಕು.
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಈಗಾಗಲೇ 144 ಅಸಂಘಟಿತ ವಲಯಗಳ ಕಾರ್ಮಿಕರನ್ನು ಗುರುತಿಸಿದೆ. ಖಾಸಗಿ, ವಾಣಿಜ್ಯ, ಸಾರಿಗೆ ಕಾರ್ಮಿಕರಿಗೆ 5 ಲಕ್ಷ ರೂ. ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದೆ. ಚಾಲಕರಿಗೆ ಅಪಘಾತ ಜೀವ ರಕ್ಷಕ ಯೋಜನೆಯಡಿ ಪ್ರಥಮ ಚಿಕಿತ್ಸಾ ತರಬೇತಿ ನೀಡಿ, ಕಿಟ್ ನೀಡಲಾಗುತ್ತಿದೆ ಎಂದು ರೇವಣ್ಣ ತಿಳಿಸಿದರು.
ಗುರುತಿನ ಚೀಟಿ ಪಡೆಯಿರಿ: ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಕೆ.ಬಸವರಾಜ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಕಾರ್ಮಿಕರಿಗೆ ಸೌಲಭ್ಯ ದೊರೆಯುತ್ತಿದ್ದು, ಅರಿವು ಮೂಡಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಕಾರ್ಡ್ ನೀಡಲಾಗುತ್ತಿದ್ದು, ಪಡೆಯುವಂತೆ ಹೇಳಿದರು.
11.5 ಕೋಟಿ ರೂ. ಸೌಲಭ್ಯ: ಕಾರ್ಮಿಕ ಇಲಾಖೆ ಉಪ ಆಯುಕ್ತ ವೆಂಕಟೇಶ್ ಅಪ್ಪಯ್ಯ ಮಾತನಾಡಿ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಜಿಲ್ಲೆಗೆ ಸಂಬಂಧಿಸಿದ ಒಟ್ಟು 34,616 ಫಲಾನುಭವಿಗಳನ್ನು ಗುರುತಿಸಿ ಚೀಟಿ ನೀಡಲಾಗಿದೆ. ಇದುವರೆಗೂ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ, ಮದುವೆ, ಶೈಕ್ಷಣಿಕ ಸಹಾಯಧನ, ಹೆರಿಗೆ ಸೌಲಭ್ಯ, ಅಪಘಾತ ಪರಿಹಾರ, ಅಂತ್ಯಕ್ರಿಯೆ ವೆಚ್ಚದಂತಹ 14 ಸೌಲಭ್ಯಗಳನ್ನು ಒದಗಿಸಲಾಗಿದೆ. ಇದುವರೆಗೂ 14,937 ಫಲಾನುಭವಿಗಳಿಗೆ 11.5 ಕೋಟಿ ರೂ. ಸೌಲಭ್ಯ ನೀಡಲಾಗಿದೆ ಎಂದು ವಿವರ ನೀಡಿದರು.
ಸನ್ಮಾನ: ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮೆಕ್ಯಾನಿಕ್ಗಳು, ಮೂರು ಮತ್ತು ನಾಲ್ಕು ಚಕ್ರದ ಸಾರಿಗೆ ಚಾಲಕರು, ಹಮಾಲರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಮನೆ ಕೆಲಸದವರು, ಕ್ಷೌರಿಕರು ಮತ್ತು ಚಿಂದಿ ಆಯುವವರು ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಒಟ್ಟು 14 ಕಾರ್ಮಿಕರಿಗೆ ತಲಾ 10,000 ನಗದು ಮತ್ತು ಶ್ರಮ ಸನ್ಮಾನ ಪ್ರಶಸ್ತಿ ಹಾಗೂ 130 ಕಾರ್ಮಿಕರಿಗೆ ತಲಾ 1,000 ರೂ. ನಗದು, ವಿಶೇಷ ಪುರಸ್ಕಾರ ಮತ್ತು 50 ಸಾರಿಗೆ ಚಾಲಕರಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ
Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ
Devarajegowda 2 ದಿನ ಎಸ್ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು
MUST WATCH
ಹೊಸ ಸೇರ್ಪಡೆ
Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್