ಚಾಮರಾಜೇಶ್ವರ ರಥ ನಿರ್ಮಾಣಕ್ಕೆ ಚಾಲನೆ


Team Udayavani, Mar 2, 2019, 7:17 AM IST

chamaaj.jpg

ಚಾಮರಾಜನಗರ: ಪಟ್ಟಣದ ಇತಿಹಾಸ ಪ್ರಸಿದ್ಧ ಚಾಮರಾಜೇಶ್ಚರ ದೇವಸ್ಥಾನನದ ನೂತನ ರಥ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ದೇವಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಥ ನಿರ್ಮಾಣಕ್ಕೆ ಬಳಸಲಾಗುತ್ತಿರುವ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ಅವರು ನಿರ್ಮಾಣ ಕಾಮಗಾರಿ ಉದ್ಘಾಟಿಸಿದರು.  

ಈ ಸಂದರ್ಭದಲ್ಲಿ  ಮಾತನಾಡಿದ ಸಚಿವ ಸಿ. ಪುಟ್ಟರಂಗಶೆಟ್ಟಿ, ನೂತನ ರಥ ನಿರ್ಮಾಣಕ್ಕೆ ಮುಜರಾಯಿ ಇಲಾಖೆ ವತಿಯಿಂದ 1.20 ಕೋಟಿ ರೂ. ಬಿಡುಗಡೆಯಾಗಿದ್ದು ಅದರಲ್ಲಿ ನೂತನ ರಥ ನಿರ್ಮಾಣಕ್ಕೆ 1 ಕೋಟಿ ರೂ. ಹಾಗೂ ರಥ ನಿಲ್ಲಿಸಲು ಶೆಡ್‌ ನಿರ್ಮಾಣಕ್ಕೆ 20 ಲಕ್ಷ ರೂ ವಿನಿಯೋಗಿಸಲಾಗುವುದು ಎಂದರು.

ತಾವು ಶಾಸಕರಾದ ನಂತರ ಚಾಮರಾಜೇಶ್ವರ ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಳೆದ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಚಾಮರಾಜನಗರ ಪಟ್ಟಣದ ಅಭಿವೃದ್ಧಿಗಾಗಿ 50 ಕೋಟಿ ರೂ. ಬಿಡುಗಡೆಯಾಗಿತ್ತು. ಅದರಲ್ಲಿ 1 ಕೋಟಿ ರೂ.ಗಳನ್ನು ಚಾಮರಾಜೇಶ್ವರ ದೇವಾಲಯದ ನವೀಕರಣ ಕಾಮಗಾರಿಗೆ ಮೀಸಲಾಗಿರಿಸಲಾಯಿತು. ಈ ಅನುದಾನದಲ್ಲಿ ದೇವಾಲಯವನ್ನು ಪುರಾತತ್ವ ಇಲಾಖೆಯ ನಿರ್ದೇಶನದಂತೆ ನವೀಕರಣಗೊಳಿಸಲಾಗಿದೆ ಎಂದು ತಿಳಿಸಿದರು.

2017ರಲ್ಲಿ ಕಿಡಿಗೇಡಿಯೊಬ್ಬ ಹಾಕಿದ ಬೆಂಕಿಗೆ ಚಾಮರಾಜೇಶ್ವರ ರಥ ಸುಟ್ಟು ಹೋಗಿತ್ತು. ಸುಟ್ಟ ರಥದಲ್ಲಿ ರಥೋತ್ಸವ ನಡೆಸಬಾರದೆಂಬ ದೇವಸ್ಥಾನದ ಭಕ್ತಾದಿಗಳ ಮನವಿಯ ಮೇರೆಗೆ ಹೊಸ ರಥ ನಿರ್ಮಿಸಲು ಉದ್ದೇಶಿಸಲಾಯಿತು. ನಾನು ಮುತುವರ್ಜಿ ವಹಿಸಿ ಮುಜರಾಯಿ ಇಲಾಖೆಯಿಂದ ರಥ ನಿರ್ಮಾಣಕ್ಕೆ 1.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಟೆಂಡರ್‌ ಪ್ರಕ್ರಿಯೆ ತಾಂತ್ರಿಕ ಸಮಸ್ಯೆಗಳಿಂದಾಗಿ ಸ್ವಲ್ಪ ತಡವಾಗಿ ರಥ ನಿರ್ಮಾಣ ಕಾಮಗಾರಿ ಆರಂಭವಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಪ್ರಮುಖ ದೇವಸ್ಥಾನ ಚಾಮರಾಜೇಶ್ವರ ರಥೋತ್ಸವವು ಇತಿಹಾಸ ಪ್ರಸಿದ್ಧ ವಾಗಿದ್ದು, ಇದರ ಅಭಿವೃದ್ಧಿಗಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಥ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಆದಷ್ಟು ಶೀಘ್ರ ರಥದ ಕೆಲಸ ಪೂರ್ಣಗೊಳ್ಳಬೇಕು ಎಂದು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವಸ್ಥಾನದ ಜೀಣೊìàದ್ಧಾರ ಕಾಮಗಾರಿ ಪ್ರಗತಿಯಲ್ಲಿದ್ದು ಬಹುತೇಕ ಪೂರ್ಣಗೊಂಡಿದೆ. ಸರ್ಕಾರದಿಂದ ಮತ್ತಷ್ಟು ಅನುದಾನ ತಂದು ಈ ಐತಿಹಾಸಕ ದೇವಾಲಯವನ್ನು ಅಭಿವೃದ್ದಿಪಡಿಸಲಾಗುವುದು ಎಂದು ಸಚಿವರು ತಿಳಿಸಿದರು. 

ಜಿಲ್ಲಾಧಿಕಾರಿ ಬಿ.ವಿ. ಕಾವೇರಿ, ನಗರಸಭಾ ಸದಸ್ಯರಾದ ಚಿನ್ನಮ್ಮ, ಆಶಾ ಭಾಗ್ಯಮ್ಮ ಕುಮುದಾ,  ಕಲಾವತಿ, ಗಾಯತ್ರಿ,  ಮಮತಾ, ಚಂದ್ರಶೇಖರ್‌ ಮಂಜುನಾಥ್‌, ರಾಜಪ್ಪ ಸುದರ್ಶನ್‌ಗೌಡ, ಪ್ರಕಾಶ್‌, ಅರ್ಚಕ ರಾಮಕೃಷ್ಣ ಭಾರಧ್ವಜ, ನಗರಸಭೆ ಮಾಜಿ ಅಧ್ಯಕ್ಷೆ ಶೋಭಾ,  ಮುಖಂಡರಾದ ಬಂಗಾರು, ಮಂಜುನಾಥಗೌಡ, ಬಿ.ಕೆ ರವಿಕುಮಾರ್‌ ಮಹಮ್ಮದ್‌ ಅಸರ್‌, ಚಂದ್ರಶೇಖರ್‌ ಚಾ.ರಂ. ಶ್ರೀನಿವಾಸಗೌಡ, ತಹಶೀಲ್ದಾರ್‌ ಪುರಂದರ, ನಗರಸಭಾ ಪೌರಾಯುಕ್ತ ರಾಜಣ್ಣ ಎಇಇ ವಿಜಯ್‌ಕುಮಾರ್‌, ಸತ್ಯಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.