39 ವರ್ಷ ಕಳೆದರೂ ಎಂಡೋಸಲ್ಫಾನ್‌ ಸಮಸ್ಯೆ ಜೀವಂತ


Team Udayavani, Mar 3, 2019, 12:30 AM IST

0203udks5.jpg

ಉಡುಪಿ: ಎಂಡೋಸಲ್ಫಾನ್‌ ಸಿಂಪಡಣೆ ಆಗಿ 39 ವರ್ಷ ಕಳೆದಿವೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ, ಹುಟ್ಟುವ ಮಕ್ಕಳೂ ಸೇರಿದಂತೆ ಅನೇಕ ಮಂದಿ ಇನ್ನೂ ಇದರಿಂದ ನರಳುತ್ತಿದ್ದಾರೆ ಎಂದು ಸಚಿವೆ ಡಾ| ಜಯಮಾಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಶನಿವಾರ, ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್‌ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮಣ್ಣು ಮತ್ತು ನೀರಿನಲ್ಲಿ ಬೆರೆತಿರುವ ಎಂಡೋಸಲ್ಫಾನ್‌ ತೀವ್ರತೆ ಇನ್ನೂ ಎಷ್ಟು ವರ್ಷ ಇರಬಹುದು ಎಂಬ ಬಗ್ಗೆ ವೈಜ್ಞಾನಿಕ ರೀತಿಯಲ್ಲಿ ನುರಿತ ತಜ್ಞರಿಂದ ಪರಿಶೀಲನೆ ನಡೆಸಿ, ಸಂತ್ರಸ್ತರ ಸಮಸ್ಯೆಗಳನ್ನು ತಳಮಟ್ಟದಿಂದ ಬಗೆ ಹರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಎಂಡೋ ಪೀಡಿತರನ್ನು ಸರಿಯಾಗಿ ಗುರುತಿಸುವ ಕಾರ್ಯ ಆಗಿಲ್ಲ ಎಂಬ ದೂರು ಬರುತ್ತಿದ್ದು, ಎಂಡೋ ಸಿಂಪಡಣೆ ಸ್ಥಳದ ಬೀಸುವ ಗಾಳಿ ಮತ್ತು ಹರಿಯುವ ನೀರಿನಿಂದ ಸಮೀಪದ ಗ್ರಾಮಗಳಿಗೂ ಹರಡಿರುವ ಸಾಧ್ಯತೆಗಳಿವೆ. ಈ ಬಗ್ಗೆ ಎಂಡೋ ಪೀಡಿತ ಮತ್ತು ಪಕ್ಕದ ಗ್ರಾಮಗಳಲ್ಲಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಮನೆ ಮನೆ ಸಮೀಕ್ಷೆ ನಡೆಸಿ, ಅರ್ಹರನ್ನು ಗುರುತಿಸಿ ಸೌಲಭ್ಯ ವಿತರಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ಕರಾವಳಿ ಜಿಲ್ಲೆಗಳ ಜಂಟಿ ಸಭೆ
ಉಡುಪಿ, ದ.ಕ., ಉ.ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಂಡೋ ಪೀಡಿತ ಸಂತ್ರಸ್ತರಿಗೆ ಒದಗಿಸಬೇಕಾದ ಸೌಲಭ್ಯಗಳ ಕುರಿತು 4 ಜಿಲ್ಲೆಗಳ ಜಂಟಿ ಸಭೆ ನಡೆಸುವುದಾಗಿ ತಿಳಿಸಿದ ಸಚಿವೆ, ಜಿಲ್ಲೆಯ ಎಂಡೋ ಪೀಡಿತರನ್ನು ಖುದ್ದಾಗಿ ತೆರಳಿ ವೀಕ್ಷಿಸಿ ಅವರಲ್ಲಿ ಕೆಲಸ ಮಾಡುವ ಸಾಮರ್ಥ್ಯ ಇರುವವರಿಗೆ ಕೌಶಲ ತರಬೇತಿ ನೀಡಲು ಪ್ರತ್ಯೇಕ ಘಟಕ ಆರಂಭಿಸುವುದಾಗಿ ತಿಳಿಸಿದರು.

ಅತ್ಯಾಧುನಿಕ ಸೌಲಭ್ಯದ ಆಸ್ಪತ್ರೆ
ಎಂಡೋ ಪೀಡಿತರ ಶಾಶ್ವತ ಪುನರ್ವಸತಿಗಾಗಿ ನಾಡಾ ಗ್ರಾಮದ ಸೇನಾಪುರದಲ್ಲಿ 5 ಎಕ್ರೆ ಜಾಗ ಗುರುತಿಸಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಶಾಶ್ವತ ಪುನರ್ವಸತಿಗೆ ಕನಿಷ್ಠ 10 ಎಕ್ರೆ ಜಾಗ ಮೀಸಲಿಡುವಂತೆ ಮತ್ತು ದುಬೈಯಲ್ಲಿ ಅಂಗವಿಕಲರಿಗೆ ಚಿಕಿತ್ಸೆ ನೀಡುವ ವಿಶೇಷ ಆಸ್ಪತ್ರೆ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಚಿಕಿತ್ಸಾ ಕೇಂದ್ರ ತೆರೆಯಬೇಕು. ವಿದೇಶಗಳಲ್ಲಿನ ವೈದ್ಯರ ನೆರವು ಪಡೆದು ಸೂಕ್ತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಬೇಕು. ಕೇಂದ್ರದ ನಿರ್ಮಾಣಕ್ಕೆ ಅನುದಾನದ ಸಮಸ್ಯೆ ಇಲ್ಲ, ಶೀಘ್ರದಲ್ಲಿ ಸಮಗ್ರ ಯೋಜನಾ ವರದಿಯೊಂದಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು. ಎಂಡೋ ಪೀಡಿತರಿಗೆ ನೀಡುವ ಸಾಧನ ಸಲಕರಣೆಗಳನ್ನು ವಿಕಲಚೇತನ ಇಲಾಖೆಯಿಂದ ಒದಗಿಸಲಾಗುವುದು ಎಂದರು.

ಪಿಂಚಣಿಯನ್ನು ಆರ್‌ಟಿಜಿಎಸ್‌ ಮೂಲಕ ನೀಡಲು ಕ್ರಮ ಕೈಗೊಳ್ಳಿ. ಕನಿಷ್ಠ ಪ್ರತಿ 3 ತಿಂಗಳಿಗೊಮ್ಮೆ ಸಮಿತಿಯ ಸಭೆ ಕರೆದು ಸೌಲಭ್ಯಗಳನ್ನು ವಿತರಿಸಿ ಎಂದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.