ನಕಲಿ ದಾಖಲೆ ಸೃಷ್ಟಿಸಿ ದಂಪತಿಗೆ ವಂಚನೆ


Team Udayavani, Mar 3, 2019, 7:47 AM IST

nakali.jpg

ಮದ್ದೂರು: ಮುಖ್ಯಮಂತ್ರಿ ಅವರ ಉಪ ಕಾರ್ಯದರ್ಶಿಯ ಲೆಟರ್‌ಹೆಡ್‌ ಅನ್ನು ನಕಲಿಯಾಗಿ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಮಂಜೂರು ಮಾಡಿಸುವುದಾಗಿ ಅಮಾಯಕ ದಂಪತಿಯಿಂದ 5ಲಕ್ಷ ರೂ. ಪಡೆದು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ಕೆಸ್ತೂರು ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ನಿವಾಸಿ ಹಾಗೂ ಕೆಸ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಟಿ.ಎಲ್‌. ನಂಜುಂಡಸ್ವಾಮಿ ಅವರ ಪತ್ನಿ ಟಿ.ಎಂ. ಗಿರಿಜಾ ವಂಚನೆಗೊಳಗಾದ ದಂಪತಿ.

ಬೆಂಗಳೂರಿನ ಮಂಜುನಾಥ ನಗರದಲ್ಲಿ ವಾಸವಾಗಿರುವ ಎಂ.ರಾಮಚಂದ್ರೇಗೌಡ ಎಂಬುವರು ನಿವೇಶನ ಕೊಡಿಸುವುದಾಗಿ ವಂಚಿಸಿದ್ದಾರೆ ಎಂದು ಈತ ನೀಡಿರುವ ನಕಲಿ ದಾಖಲಾತಿಗಳೊಂದಿಗೆ ಗಿರಿಜಾ ಅವರು ಕೆಸ್ತೂರು ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. 

ಘಟನೆ ವಿವರ: ಮಲ್ಲನಕುಪ್ಪೆ ಮೂಲ ನಿವಾಸಿಯಾದ ರಾಮಚಂದ್ರೇಗೌಡ ಬೆಳೆಸಾಲ ಪಡೆಯಲು ಕೆಸ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬಂದಾಗ ಗುಮಾಸ್ತ ನಂಜುಂಡಸ್ವಾಮಿ ಅವರನ್ನು ಪರಿಚಯಿಸಿಕೊಂಡಿದ್ದಾನೆ. ಪರಿಚಯ ಸ್ನೇಹವಾಗಿ ಬೆಳೆದ ಬಳಿಕ ತಾನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ತಮಗೆ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಕಡಿಮೆ ಹಣದಲ್ಲಿ ನಿವೇಶನ ಕೊಡಿಸುವುದಾಗಿ ನಂಜುಂಡಸ್ವಾಮಿ ಅವರನ್ನು ಪುಸಲಾಯಿಸಿದ್ದಾನೆ. 

ಬಳಿಕ ತನಗೆ ವಿವಿಧ ಇಲಾಖಾ ಸಚಿವರಗಳ ಸಂಪರ್ಕವಿದ್ದು, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಗಳ ಪರಿಚಯವಿದ್ದು, ನಿಮ್ಮ ಕೆಲಸ ಸುಲಭವಾಗಲಿದೆ ಎಂದು ಹೇಳಿದ್ದು ಇದನ್ನು ನಂಬಿದ ನಂಜುಂಡಸ್ವಾಮಿ ಅವರು ತಮಗೆ ನಿವೇಶನ ಕೊಡಿಸುವಂತೆ ಆತನಲ್ಲಿ ವಿನಂತಿಸಿದ್ದಾರೆ. 

ನಂಜುಂಡಸ್ವಾಮಿ ಅವರ ಅಮಾಯಕತೆ ಬಳಸಿಕೊಂಡ ರಾಮಚಂದ್ರೇಗೌಡ ಆಲಿಯಾಸ್‌ ಶ್ರೀರಾಮಚಂದ್ರ, ಜ.8ರಂದು ನಂಜುಂಡಸ್ವಾಮಿ ಅವರನ್ನು ಮತ್ತೇ ಭೇಟಿ ಮಾಡಿ ಅವರ ಪತ್ನಿ ಟಿ.ಎಂ.ಗಿರಿಜಾ ಅವರ ಹೆಸರಿನಲ್ಲಿ ನಿವೇಶನ ಕೋರಿ ಅರ್ಜಿಯನ್ನು ಬರೆಸಿಕೊಂಡಿದ್ದಾನೆ. 

ಬಳಿಕ ಜ.13ರಂದು ನಂಜುಂಡಸ್ವಾಮಿ ಅವರಿಗೆ ಪೋನಾಯಿಸಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿಯಲ್ಲಿ 26*40 ಅಡಿ ಅಳತೆಯ ನಿವೇಶನ ಮಂಜೂರಾಗಿದೆ ಕೂಡಲೇ ಗಿರಿಜಾ ಅವರ ಆಧಾರ್‌ ಚೀಟಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸೇರಿದಂತೆ ಇನ್ನಿತರ ದಾಖಲಾತಿಗಳೊಂದಿಗೆ ಬೆಂಗಳೂರಿಗೆ ಬರಲು ತಿಳಿಸಿದ್ದಾನೆ.

ಈತನ ಮಾತು ನಂಬಿದ ನಂಜುಂಡಸ್ವಾಮಿ ದಂಪತಿ ಬೆಂಗಳೂರಿಗೆ ಹೋಗಿ ಆತನನ್ನು ಭೇಟಿಯಾಗಿ ಆಗ ಆತನು ಅಲ್ಲಿಂದ ಇವರನ್ನು ಉಲ್ಲಾಳ ಉಪನಗರದ ವಿಶ್ವೇಶ್ವರಯ್ಯ ಬಡಾವಣೆಗೆ ಕರೆದೊಯ್ದಿದ್ದಾನೆ. ಅಲ್ಲಿ ಬಿಡಿಎ ನಿವೇಶನ ಸಂಖ್ಯೆ 140/1 ತೋರಿಸಿ ಇದೇ ನಿಮ್ಮ ನಿವೇಶನ ಎಂದು ತಿಳಿಸಿದ್ದಾನೆ. ಬಳಿಕ ತಮ್ಮ ಮನೆಗೆ ಗಿರಿಜಾ ಹಾಗೂ ನಂಜುಂಡಸ್ವಾಮಿ ಅವರನ್ನು ಕರೆದೊಯ್ದ ಈತ, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅವರ ಶಿಫಾರಸಿನ ನಕಲಿ ಪತ್ರವನ್ನು ತೋರಿಸಿ ನಂಬಿಕೆ ಹುಟ್ಟಿಸಿದ್ದಾನೆ. 

ಜ.16ರಂದು ಕೆಸ್ತೂರಿಗೆ ಬಂದ ರಾಮಚಂದ್ರೇಗೌಡ, ನಾನು ಈಗಾಗಲೇ ನನ್ನ ಖಾತೆಯಿಂದ 4,22,830 ರೂ. ಹಣವನ್ನು ಬಿಡಿಎಗೆ ಪಾವತಿ ಮಾಡಿದ್ದೇನೆ ಎಂದು ತಿಳಿಸಿ ಬಿಡಿಎಗೆ ಪಾವತಿ ಮಾಡಿರುವ ಹಣದ ಚಲನ್‌ ಹಾಗೂ ಅವರು ನೀಡಿರುವ ಹಣದ ರಶೀದಿಯನ್ನು ತೋರಿಸಿ ಹಣ ನೀಡುವಂತೆ ಒತ್ತಾಯಿಸಿದ್ದಾನೆ.

ಇದನ್ನು ನಂಬಿದ ನಂಜುಂಡಸ್ವಾಮಿ ಅವರು ತಮ್ಮ ಖಾತೆಯಿಂದ 2ಲಕ್ಷ ರೂ. ಗಳ ಚೆಕ್‌ ಅನ್ನು ಅಂದೇ ನೀಡಿದ್ದಾರೆ. ಬಳಿಕ ಜ.21ರಲ್ಲಿ 3ಲಕ್ಷ ರೂ. ಹಣವನ್ನು ನಗದಾಗಿ ನಂಜುಂಡಸ್ವಾಮಿ ರಾಮಚಂದ್ರೇಗೌಡನಿಗೆ ನೀಡಿದ್ದಾರೆ. ಇದಾದ ಬಳಿಕ ಫೆ.14ರಂದು ನಿಮ್ಮ ನಿವೇಶನದ ನೋಂದಣಿ ಪ್ರಕ್ರಿಯೆ ಮಾಡಬೇಕಾಗಿದ್ದು, ಇದಕ್ಕೆ ನೋಂದಣಿ ಶುಲ್ಕವಾಗಿ 84,811 ರೂ. ಪಾವತಿ ಮಾಡಬೇಕೆಂದು ಒತ್ತಾಯಿಸಿದ್ದಾನೆ.

ಬಳಿಕ ಈಗಾಗಲೇ ಆ ಹಣವನ್ನು ತಾನೇ ಪಾವತಿಸಿರುವುದಾಗಿ ತಿಳಿಸಿ ಅದರ ನಕಲಿ ಚಲನ್‌ ಅನ್ನು ನಂಜುಂಡಸ್ವಾಮಿ ಅವರ ವಾಟ್ಸ್‌ಪ್‌ ಮೂಲಕ ಕಳುಹಿಸಿದ್ದಾನೆ. ಕೂಡಲೇ ಬೆಂಗಳೂರಿಗೆ ಬಂದು ಹಣವನ್ನು ಕೊಡಲು ಒತ್ತಾಯಿಸಿದ್ದಾನೆ. ಇದರಿಂದ ಅನುಮಾನಗೊಂಡ ನಂಜುಂಡಸ್ವಾಮಿ ಕೂಡಲೇ ಬೆಂಗಳೂರಿನ ಬಿಡಿಎ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅಲ್ಲದೇ ಆತ ನೀಡಿದ್ದ ಎಲ್ಲಾ ಚಲನ್‌ ಹಾಗೂ ರಶೀದಿಗಳನ್ನು ತೋರಿಸಿದಾಗ ಇವುಗಳೆಲ್ಲವೂ ನಕಲಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ಈ ಕುರಿತು ರಾಮಚಂದ್ರೇಗೌಡನಿಗೆ ನಂಜುಂಡಸ್ವಾಮಿ ಅವರು ಪೋನಾಯಿಸಿದಾಗ, ಎಲ್ಲಾ ದಾಖಲಾತಿಗಳು ಅಸಲಿ ಎಂದು ಆತ ವಾದಿಸಿದ್ದಾನೆ. ಬಳಿಕ ಮೂರು ನಾಲ್ಕು ಬಾರಿ ಪೋನಾಯಿಸಿ, ಈ ಕುರಿತು ಪ್ರಶ್ನಿಸಲು ಆರಂಭಿಸಿದಾಗ ತನ್ನ ಪೋನನ್ನು ಸ್ವಿಚ್‌ ಆಫ್ ಮಾಡಿಕೊಂಡಿದ್ದಾನೆ. ಆಗ ತಾವು ಮೋಸ ಹೋಗಿರುವುದಾಗಿ ನಂಜುಂಡಸ್ವಾಮಿ ದಂಪತಿಗಳಿಗೆ ಗೊತ್ತಾಗಿದೆ.

ಬಳಿಕ ಗಿರಿಜಾ ಹಾಗೂ ನಂಜುಂಡಸ್ವಾಮಿ ಅವರು ರಾಮಚಂದ್ರೇಗೌಡನ ಮಂಜುನಾಥ ನಗರದ ನಿವಾಸಕ್ಕೆ ಹೋದಾಗ ಅಲ್ಲಿ ರಾಮಚಂದ್ರೇಗೌಡ ಸಿಗಲಿಲ್ಲ. ಈ ಬಗ್ಗೆ ಆತನ ಪತ್ನಿ ಮಂಜುಳಾ ಅವರನ್ನು ಪ್ರಶ್ನಿಸಿದಾಗ ಆಕೆಯು ಇವರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ಮಾಡಿದರು ಎಂದು ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಅಲ್ಲದೇ ರೌಡಿಗಳ ಮೂಲಕ ರಾಮಚಂದ್ರೇಗೌಡ ನಂಜುಂಡಸ್ವಾಮಿ ದಂಪತಿಗೆ ಧಮಕಿ ಹಾಕಿಸಿ ಕೊಲೆ ಬೆದರಿಕೆವೊಡ್ಡಿದ್ದಾನೆ ಎಂದು ಗಿರಿಜಾ ನಂಜುಂಡಸ್ವಾಮಿ ದಂಪತಿ ಕೆಸ್ತೂರು ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪಿಎಸ್‌ಐ ಸಂತೋಷ್‌ ಈ ಸಂಬಂಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.