ಉತ್ಸವಕ್ಕೆ ಶೋಭಾಯಾತ್ರೆಯ ಮೆರಗು
Team Udayavani, Mar 3, 2019, 11:37 AM IST
ಹಂಪಿ: ಹಂಪಿ ಉತ್ಸವ ಅಂಗವಾಗಿ ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾಯಾತ್ರೆ ಉತ್ಸವಕ್ಕೆ ಮತ್ತಷ್ಟು ಹೆಚ್ಚು ಮೆರುಗು ನೀಡಿದ್ದು, ಮೆರವಣಿಗೆಯಲ್ಲಿ ಕಲಾ ತಂಡಗಳು ಗಮನ ಸೆಳೆದವು.
ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿರೂಪಾಕ್ಷೇಶ್ವರನಿಗೆ ಪೂಜೆ ಮಾಡುವುದರ ಮೂಲಕ ಆರಂಭವಾದ ಶೋಭಾಯಾತ್ರೆಯಲ್ಲಿ ನಂದಿಧ್ವಜ, ನಾದಸ್ವರ, ವೀರಗಾಸೆ, ಕಹಳೆ ವಾದನ, ತಾಷರಂಡೋಲ್, ಡೊಳ್ಳು ಕುಣಿತ, ಹಗಲುವೇಷ, ಹುಲಿವೇಷ, ಮುಳ್ಳಿನ ಪ್ರದರ್ಶನ, ಗಾರುಡಿಗೊಂಬೆ, ಪಟಕುಣಿತ, ಮಹಿಳಾ ಝಾಂಜ್ ಪಥಕ್, ಕರಡಿ ಮಜಲು, ಸಿಂಗಾರಿ ಮೇಳ, ಮಹಿಳಾ ತಮಟೆ ವಾದನ, ಕೀಲುಕುದುರೆ ಮತ್ತು ಕರಡಿ ಕುಣಿತ ಸೇರಿದಂತೆ 25ಕ್ಕೂ ಹೆಚ್ಚು ಕಲಾ ತಂಡಗಳ ಪ್ರದರ್ಶನ ಅದ್ಭುತವಾಗಿತ್ತು.
500ಕ್ಕೂ ಹೆಚ್ಚು ಕಲಾವಿದರು ಈ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ಗೊರವರ ಕುಣಿತ, ಪೂಜಾ ಕುಣಿತ, ಪುರವಂತಿಕೆ, ಚಿಟ್ಟಿಮೇಳ, ದಟ್ಟಿಕುಣಿತ, ಜಗ್ಗಲಿಗಿ, ಜಾಂಜ್ ಮೇಳ, ಚಿಲಿಪಿಲಿ ಗೊಂಬೆ, ವೀರಭದ್ರ ಕುಣಿತ, ಸೋಮನ ಕುಣಿತ, ಕತ್ತಿ ವರಸೆ ಹೀಗೆ ಹಲವು ಸಾಂಪ್ರದಾಯಿಕ ನೃತ್ಯಗಳು ಗಮನ ಸೆಳೆದವು.
ಸಾವಿರ ಕುಂಭಹೊತ್ತ ಮಹಿಳೆಯರು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಎದುರು ಬಸವಣ್ಣ ಮಂಟಪದವರೆಗೆ ಯಾತ್ರೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಮಹೇಶ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ