ಪಾಕಿಸ್ತಾನಕೆ ಯುದ್ಕ ಮಾಡೋ ಸಾಮರ್ಥ್ಯವಿಲ್ಲ


Team Udayavani, Mar 3, 2019, 11:42 AM IST

bell-2.jpg

ಹರಪನಹಳ್ಳಿ: ಭಾರತದ ಎದುರು ಯುದ್ಧ ಮಾಡುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಒತ್ತಡ ಹಾಕಿ, ಪಾಕಿಸ್ತಾನದ ಜುಟ್ಟು ಹಿಡಿದ ಪರಿಣಾಮ ಯುದ್ಧಕ್ಕೆ ಹೆದರಿ ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರನ್ನು ಬೇಷರತ್‌ ಬಿಡುಗಡೆ ಮಾಡಿದೆ ಎಂದು ಟೀಮ್‌ ಮೋದಿ ಸಂಸ್ಥಾಪಕ ಚಕ್ರವರ್ತಿಸೂಲಿಬೆಲೆ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಟೀಂ ಮೋದಿ ತಂಡದವತಿಯಿಂದ ಹಮ್ಮಿಕೊಂಡಿಕೊಂಡಿದ್ದ ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು ಕಾರ್ಯಕ್ರಮ ಮತ್ತು ಪ್ರಧಾನಮಂತ್ರಿ ಅವರ ಸಾಧನೆ ಹಾಗೂ ಕೇಂದ್ರ ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳ ಕುರಿತ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ ನಿಜವಾಗಿಯೂ ಶಾಂತಿ ಬಯಸುವುದಾದರೆ ಮೊದಲು ಭಾರತದ ಸಾವಿರಾರು ಜನರ ಹತ್ಯೆಗೆ ಕಾರಣರಾದ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಉಗ್ರಗಾಮಿ ಸಂಘಟನೆ ಮುಖಂಡರನ್ನು ಹಸ್ತಾಂತರಿಸಬಹುದಿತ್ತು. ಪಾಕಿಸ್ತಾನಕ್ಕೆ ಶೇ.70ರಷ್ಟು ಇಂಧನ ಜಲಮಾರ್ಗದ ಮೂಲಕ ಸರಬರಾಜು ಆಗುತ್ತಿದೆ. ಪಾಕಿಸ್ತಾನಕ್ಕೆ ಬರುವ ಇಂಧನದ ಹಡಗನ್ನು ಭಾರತದ ನೌಕಾಪಡೆ ತಡೆದರೆ ನಾಲ್ಕು ದಿನಗಳಲ್ಲಿ ಅಲ್ಲಿ ಇಂಧನ ಕ್ಷಾಮ ಉಂಟಾಗಲಿದೆ. ನಮ್ಮ ನೌಕಾಪಡೆಯನ್ನು ತಡೆಯುವ ಶಕ್ತಿ ಸದ್ಯಕ್ಕೆ ಇರುವುದು ಅಮೆರಿಕ ಮತ್ತು ರಷ್ಯಾಕ್ಕೆ ಮಾತ್ರ. ಈ ಬೆಳವಣಿಗೆಯಲ್ಲಿ ಈ ಎರಡೂ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿವೆ. ನೌಕಾಪಡೆ ಕಾರ್ಯಾಚರಣೆಗೆ ಇಳಿದರೆ ನಾಲ್ಕು ದಿನಗಳಲ್ಲಿ ಪಾಕಿಸ್ತಾನ ಮಂಡಿಯೂರಿ ಭಾರತದ ಮುಂದೆ ಕುಳಿತುಕೊಳ್ಳಬೇಕಾಗುತ್ತದೆ ಎಂದರು.

ರಫೇಲ್‌ ಯುದ್ಧ ವಿಮಾನ ಬಂದರೆ ಪಾಕಿಸ್ತಾನವಷ್ಟೇ ಅಲ್ಲ; ಚೀನಾವನ್ನೂ ಗುರಾಯಿಸಿ ನೋಡುವ ಶಕ್ತಿ ನಮಗೆ ಬರಲಿದೆ. ಮೂರು ವರ್ಷಗಳಲ್ಲಿ 36 ರಫೇಲ್‌ ಯುದ್ಧ ವಿಮಾನಗಳು ಬರಲಿದ್ದು, ಆಗ ನಮ್ಮ ವಾಯುಪಡೆಯ ತಾಕತ್ತು ಹೇಗಿರುತ್ತದೆ ಎಂದು ನೋಡಬೇಕು. ಅಣುಬಾಂಬ್‌ ಇರುವ ದೇಶದ ಮೇಲೆಯೂ ನಿರ್ದಿಷ್ಟ ದಾಳಿ ನಡೆಸುವ ಮೂಲಕ ಮೋದಿ ಪಾಕಿಸ್ತಾನದ ಮಿಲಿಟರಿ ಹಾಗೂ ರಾಜಕೀಯ ನಾಯಕತ್ವದ ಶಕ್ತಿ ದುರ್ಬಲವಾಗಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ರಾಹುಲ್‌ ಗಾಂಧಿ , ಪ್ರಕಾಶ್‌ರಾಜ್‌ ಅವರಂತವರ ಬಗ್ಗೆ ಜನ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮೋದಿಯನ್ನು ಮತ್ತೂಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.

ಸ್ಥಳೀಯ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷ ವರಸದ್ಯೋಜಾತ ಸ್ವಾಮೀಜಿ ಮಾತನಾಡಿ, ಧಾರ್ಮಿಕತೆಯ ದೇಶವಾದ ಭಾರತವನ್ನು ಕೇವಲ ಬಲಾಡ್ಯ ಆರ್ಥಿಕ ಶಕ್ತಿಯನ್ನಾಗಿ ಬಿಂಬಿಸದೇ ಒಂದು ಆಧ್ಯಾತ್ಮಿಕ ಕೇಂದ್ರವನ್ನಾಗಿ ಪ್ರಧಾನಿ ಮೋದಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವಿಶ್ವದ ಅನೇಕ ರಾಷ್ಟ್ರಗಳ ಮನ್ನಣೆಗೆ ಮುನ್ನುಡಿ ಬರೆದಿದ್ದಾರೆ ಎಂದರು. ನರೇಂದ್ರ ಮೋದಿಯವರು ವಿದ್ಯಾರ್ಥಿಗಳ ಜೊತೆ ಸಂವಾದ, ಬಡಜನರ ಸಹಾಯಕ್ಕೆ ಮೊದಲ ಅದ್ಯತೆ ನೀಡಿ, ಮನ್‌ ಕೀ ಬಾತ್‌ನಂತಹ ಹಲವಾರು ಯೋಜನೆಗಳು ಜನರ ಮನ-ಮನೆಗಳಲ್ಲಿ ಮನೆ ಮಾಡಿವೆ. ಹಲವಾರು ಯೋಜನೆಗಳನ್ನು ಸಮಾಜದ ಮಡಿಲಿಗೆ ಹಾಕಿ ಹಿಂದೆಂದೂ ಕಾಣದ ಅಭಿವೃದ್ಧಿಗೆ ಅಭಯದ ಮಾರ್ಗ ತೋರಿದ ಮೋದಿಯವರನ್ನು ಯಾರು ಮರೆಯುವಂತಿಲ್ಲ ಎಂದರು. ಟೀ ಮೋದಿ ತಾಲೂಕು ಸಂಚಾಲಕ ಲಿಂಗನಗೌಡ ಇತರರಿದ್ದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.