ಶಿವಾರಾಧನೆಗೆ ಸಜ್ಜಾದ ರಾಜಧಾನಿ


Team Udayavani, Mar 4, 2019, 5:59 AM IST

shiva-ratri.jpg

ಬೆಂಗಳೂರು: ಮಹಾ ಶಿವರಾತ್ರಿ ಆಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗಿದ್ದು, ಹಬ್ಬದ ಹಿನ್ನೆಲೆಯಲ್ಲಿ ನಗರದ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಭಜನೆ ಆಯೋಜಿಸಲಾಗಿದೆ. ಜತೆಗೆ ರಾತ್ರಿ ಜಾಗರಣೆ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳಿಂದ ನೃತ್ಯ, ನಾಟಕ ಪ್ರದರ್ಶನ, ಹಾಸ್ಯ, ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರಮುಖ ದೇವಾಲಯಗಳಾದ ಗವೀಪುರದ ಗವಿಗಂಗಾಧರೇಶ್ವರ ದೇವಾಲಯ, ಕಾಡುಮಲ್ಲೇಶ್ವರದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ, ಮಾರುಕಟ್ಟೆಯ ಶ್ರೀ ಕೋಟೆ ಜಲಕಂಠೇಶ್ವರ ದೇವಾಲಯ, ಹಳೇ ಮದ್ರಾಸ್‌ ರಸ್ತೆಯಲ್ಲಿರುವ ಶಿವ ದೇವಸ್ಥಾನ ಸೇರಿದಂತೆ ಎಲ್ಲಾ ಶಿವನ ದೇವಾಲಯದಲ್ಲಿ ಅಭಿಷೇಕ, ರುದ್ರಾಭಿಷೇಕ, ಬಿಲ್ವಪತ್ರೆ ಅರ್ಪಣೆ, ಮಹಾ ಮಂಗಳಾರತಿ, ಶಿವ ಸಹಸ್ರನಾಮ ಪಠಣ, ಸಂಕೀರ್ತನೆ, ಪುರಾ ಪಠಣ, ಉಪನ್ಯಾಸ ನಡೆಯಲಿದೆ. 

ಗವಿಗಂಗಾಧರೇಶ್ವರ ದೇವಾಲಯ: ಬಸವನಗುಡಿಯ ಗವಿಗಂಗಾಧರೇಶ್ವರ ದೇಗುಲದಲ್ಲಿ ಸೋಮ ವಾರ ಬೆಳಗ್ಗೆ 6 ಗಂಟೆಯಿಂದಲೇ ಶಿವಲಿಂಗಕ್ಕೆ ಅಭಿಷೇಕ, ವಿಶೇಷ ಪೂಜೆ ಆರಂಭವಾಗಲಿದೆ. ಭಕ್ತರಿಗೆ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ 4 ಗಂಟೆವರೆಗೂ ದರ್ಶನಕ್ಕೆ ಅವಕಾಶವಿದ್ದು, ರಾತ್ರಿ
ಜಾಗರಣೆಯಲ್ಲಿ ಸಂಗೀತ ಸೇವೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಾರುಕಟ್ಟೆಯ ಕೋಟೆ ಶ್ರೀ ಜಲಕಂಠೇಶ್ವರ ದೇವಾಲಯದಲ್ಲಿ ಸೋಮವಾರ ಬೆಳಗ್ಗೆ 6.30ರಿಂದ ಮಂಗಳವಾರ ರಾತ್ರಿ 9 ಗಂಟೆವರೆಗೆ ಶಿವರಾತ್ರಿವಿಶೇಷ ಪೂಜೆ, ಅಭಿಷೇಕ, ರುದ್ರಾಭಿಷೇಕ, ಮಹಾ ಪ್ರದೋಷ, 3 ಬಾರಿ ಯಾಮ ಪೂಜೆ ನಡೆಯಲಿದೆ. ಹಳೇ ಮದ್ರಾಸ್‌ ರಸ್ತೆಯಲ್ಲಿರುವ ಶಿವೋಹಂ ಶಿವ ದೇವಸ್ಥಾನದಲ್ಲಿ ಸೋಮವಾರ ಹಾಗೂ ಮಂಗಳವಾರ ವಿಶೇಷ ಪೂಜೆ, ಮಹಾಯಜ್ಞ, ಜತೆಗೆ ಪ್ರತಿ ಎರಡು ಗಂಟೆಗೊಮ್ಮೆ ಶಿವ ಆರತಿ ನಡೆಯಲಿದೆ. ಇವುಗಳ ಜತೆಗೆ ಭಜನೆ, ಸತ್ಯಂ ಶಿವಂ ಸುಂದರಂ ಸಂಗೀತ ಕಾರ್ಯಕ್ರಮ, ಶಿವ ಅಂತಾಕ್ಷರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಚಾಮರಾಜಪೇಟೆಯ ಈದ್ಗಾ ಮೈದಾನದ ಎದುರಿನ ಬಿಬಿಎಂಪಿ ಪಿಯು ಕಾಲೇಜು ಮೈದಾನದಲ್ಲಿ “ಅತ್ಯದ್ಭುತ ಶ್ರೀಶೈಲ ಮಲ್ಲಿಕಾರ್ಜುನ ದರ್ಶನ’ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಮಾ.2ರಂದು ಆರಂಭವಾಗಿರುವ ಕಾರ್ಯಕ್ರಮ 5ರವರೆಗೆ ನಡೆಯಲಿದೆ. ಮಲ್ಲೇಶ್ವರದ 8ನೇ ಅಡ್ಡರಸ್ತೆಯಲ್ಲಿರುವ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಮಾ.4ರಿಂದ 6ರವರೆಗೆ ಭಕ್ತರಿಗೆ “ಲೇಪಾಕ್ಷಿ ನಾಗಲಿಂಗೇಶ್ವರ ಸುಜ್ಞಾನ ಶಿವನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಆರ್ಟ್‌ ಆಫ್‌ ಲಿವಿಂಗ್‌: ಶಿವರಾತ್ರಿ ಪ್ರಯುಕ್ತ ಕನಕಪುರ ರಸ್ತೆಯಲ್ಲಿರುವ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ರವಿಶಂಕರ್‌ ಗುರೂಜಿ ಅವರೊಂದಿಗೆ ಭಜನೆ, ಸತ್ಸಂಗ ನಡೆಯಲಿದೆ.

ಜಯನಗರ ಮಹಾಶಿವರಾತ್ತಿ ಉತ್ಸವ: ಜೆ.ಪಿ.ನಗರ 2ನೇ ಹಂತದ ದುರ್ಗಾಪರಮೇಶ್ವರಿ ಆಟದ ಮೈದಾನದಲ್ಲಿ ಸಂಜೆ 6 ಗಂಟೆಯಿಂದ “ಜಯನಗರ ಮಹಾಶಿವರಾತ್ತಿ ಉತ್ಸವ’ ಹಮ್ಮಿಕೊಳ್ಳಲಾಗಿದೆ. ಜಾನಪದ ಕಲಾ ತಂಡಗಳ ಪ್ರದರ್ಶನ, ನೃತ್ಯ ಸಂಗೀತ ಕಾರ್ಯಕ್ರಮ, ಗುಂಡೂರಾವ್‌ ಅವರನಗೆಹೊನಲು, ಪುಣ್ಯಕೊಟಿ ಗೀತಗಾಯನ, ಕೃಷ್ಣಸಂಧಾನ ಹಾಸ್ಯ ನಾಟಕ ಪ್ರದರ್ಶನ ಸೇರಿ ನಾನಾ ಕಾರ್ಯಕ್ರಮಗಳು ನಡೆಯಲಿವೆ. ಆರ್‌.ಟಿ.ನಗರದ ಆನಂದಗಿರಿ ಬೆಟ್ಟ, ಚೋಳನಾಯಕನಹಳ್ಳಿಯ ಆನಂದಲಿಂಗೇಶ್ವರಕ್ಷೇತ್ರದಲ್ಲಿ ಆನಂದ ಲಿಂಗೇಶ್ವರ ಕ್ಷೇತ್ರ ಟ್ರಸ್ಟ್‌ ವತಿಯಿಂದ ಸೋಮವಾರ 108 ಲೀಟರ್‌ ಕ್ಷೀರಾಭಿಷೇಕ, ರುದ್ರಾಭಿಷೇಕ, ನಂತರ ವಿವಿಧ ಅಲಂಕಾರ ನೆರವೇರಲಿವೆ.

ಶಿವೋತ್ಸವಂ; ಶಿವಭಕ್ತ ಸರ್ವಶಕ್ತ
ಮಹಾಶಿವರಾತ್ರಿ ಪ್ರಯುಕ್ತ ಹನುಮಂತ ನಗರದಲ್ಲಿ ಶ್ರೀ ಶೇಷ ಮಹಾಬಲಮುರಿ ಗಣಪತಿ ಸೇವಾ ಸಮಿತಿ ಟ್ರಸ್ಟ್‌ ವತಿಯಿಂದ ಭೂ ಕೈಲಾಸ ಮಾದರಿಯನ್ನು ನಿರ್ಮಿಸಲಾಗಿದೆ. “ಶಿವೋತ್ಸವಂ’ ಶಿವಭಕ್ತ ಸರ್ವಶಕ್ತ ಶೀರ್ಷಿಕೆಯಡಿ ವಿಶೇಷ ಪೂಜೆ ಸೇರಿದಂತೆ ನಾನಾ ಧಾರ್ಮಿಕ ಕೈಂಕರ್ಯಗಳು ನೆರವೇರಲಿವೆ. ಸೋಮವಾರ ಬೆಳಗ್ಗೆ 6 ಗಂಟೆಗೆ ಏಕಾವಾರ ರುದ್ರಾಭಿಷೇಕ ನಡೆಯಲಿದ್ದು, 8 ಗಂಟೆಯಿಂದ ಶಿವಲಿಂಗಕ್ಕೆ ಕ್ಷೀರಾಭಿಷೇಕ ಮಾಡಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 7, 12 ಮತ್ತು 2 ಗಂಟೆ ಹಾಗೂ ಬೆಳಗಿನ ಜಾವ 4 ಗಂಟೆಗೆ ಯಾಮದ ಪೂಜೆಗಳು ನಡೆಯಲಿವೆ. ಇದರೊಂದಿಗೆ ನಾನಾ ಸಂಘ ಸಂಸ್ಥೆಗಳಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.