ಅಜ್ಞಾನ, ಅಂಧಕಾರ, ಪಾಪವನ್ನು ತೊಡೆಯುವ ಆಚರಣೆ ಶಿವರಾತ್ರಿ


Team Udayavani, Mar 5, 2019, 7:45 AM IST

ajnana.jpg

ರಾಮನಗರ: ಮಹಾಶಿವರಾತ್ರಿ ಎನ್ನುವುದು ಅಜ್ಞಾನ, ಅಂಧಕಾರ, ಪಾಪವನ್ನು ತೊಡೆಯುವ ಆಚರಣೆ ಎಂದು ತಾಲೂಕಿನ ಅವ್ವೆರಹಳ್ಳಿಯ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ದಾಸೋಹ ಮಠದ ಬಸವಲಿಂಗರಾಜ ಶಿವಾಚಾರ್ಯಹೇಳಿದರು.

ತಾಲೂಕಿನ ಅವ್ವೆರಹಳ್ಳಿಯ ಎಸ್‌.ಆರ್‌.ಎಸ್‌. ಕ್ಷೇತ್ರದ ದಾಸೋಹ ಮಠದ ಆವರಣದಲ್ಲಿರುವ ಶ್ರೀ ರೇಣುಕಾಚಾರ್ಯ ಪ್ರತಿಮೆ ಎದರು ಶಾಂತಲಾ ಚಾರಿಟಬಲ್‌ ಟ್ರಸ್ಟ್‌ ಶಿವರಾತ್ರಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಶಿವರಾತ್ರಿ ವೈಭವ ಗೀತಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿವನಿಗೂ ರಾತ್ರಿಗೂ ನಿಕಟ ಸಂಬಂಧವಿದೆ. ಒಂದು ರಾತ್ರಿಯು ಸಾಮಾನ್ಯವಾಗಿ ನಾವು ನೋಡುವ ರಾತ್ರಿ. ಆದರೆ ಮಹಾಶಿವರಾತ್ರಿ ಎನ್ನುವುದು ಅಜ್ಞಾನ, ಅಂಧಕಾರ, ಪಾಪವನ್ನು ತೊಡೆಯುವ ಪವಿತ್ರವಾದ ರಾತ್ರಿ. ಅಜ್ಞಾನವೇ ರಾತ್ರಿ ಎಂಬ ಸಂದೇಶವನ್ನು ಈ ಆಚರಣೆ ಸಾರುತ್ತದೆ ಎಂದರು.        
      
ಮಠದ ಕಿರಿಯ ಶ್ರೀಗಳಾದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಭಾರತ ಹಲವು ಹಬ್ಬ ಆಚರಣೆಗಳ ತವರೂರು. ವಿವಿಧ ದೇವರುಗಳನ್ನು ಪೂಜಿಸುವ ಇಲ್ಲಿ ಶ್ರೀಮಂತವಾದ ಪುರಾಣಕತೆಗಳಿವೆ. ಪ್ರತಿಯೊಂದು ಆಚರಣೆಯ ಹಿಂದೆಯೂ ಅದರದ್ದೇ ಆದ ಇತಿಹಾಸ, ನಂಬಿಕೆ ಮತ್ತು ಮಹತ್ವವಿದೆ.

ದೇವರ ಜತೆಗೆ ಪ್ರಕೃತಿಯನ್ನೂ ಆರಾಧಿಸುವ ನಾವು ಜಗತ್ತಿನಲ್ಲಾಗುವ ಬದಲಾವಣೆಗೆ ನಮ್ಮದೇ ಆದ ಕಾರಣಗಳನ್ನೂ ಕೊಡುತ್ತೇವೆ ಎಂದು ತಿಳಿಸಿದರು. ಶಿವರಾತ್ರಿಗೂ ವಿಜ್ಞಾನಕ್ಕೂ ಸಂಬಂಧವಿದೆ. ಶಿವರಾತ್ರಿ ಹಬ್ಬದ ಸಮಯದಲ್ಲಿ ಚಳಿಗಾಲ ಮುಗಿದು ಬೇಸಿಗೆಕಾಲ ಪ್ರಾರಂಭಗೊಳ್ಳುತ್ತದೆ.

ಅಂದರೆ ಈ ದಿನದಂದು ಚಳಿ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿದೆ. ಪ್ರಕೃತಿಯಲ್ಲಿ ವ್ಯತ್ಯಯಾಗುವ ಸಮಯದಲ್ಲಿ ನಮ್ಮ ದೇಹದಲ್ಲೂ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ ಬರುವುದು.

ಹಾಗಾಗಿ ಇಂಥ ಸಂದರ್ಭದಲ್ಲಿ ಬರುವ ಶಿವರಾತ್ರಿಯಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತವಾಗಿದೆ ಎಂದು ಶಿವರಾತ್ರಿ ಆಚರಣೆಯ ಹಿಂದಿನ ವೈಜ್ಞಾನಿಕ ಮಹತ್ವವನ್ನು ತಿಳಿಸಿದರು. ಇದೇ ವೇಳೆ ಇಷ್ಟಲಿಂಗ ತಯಾರಕರಾದ ಮಹದೇವಸ್ವಾಮಿ, ಶಿವಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು.

ನೃತ್ಯ ಕಲಾವಿದೆ ಚಿತ್ರರಾವ್‌ ಮತ್ತು ತಂಡ ಹಾಗೂ ಶಾಂತಲಾ ಕಲಾ ಕೇಂದ್ರದ ಮಕ್ಕಳು ನೃತ್ಯ ಮತ್ತು ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕ ಕೆ.ಎಸ್‌. ಧನಂಜಯ, ಶಿಕ್ಷಕರಾದ ನೇ. ರ. ಪ್ರಭಾಕರ್‌, ಎಂ.ಎಸ್‌. ಚನ್ನವೀರಪ್ಪ, ಶಾಂತಲಾ ಚಾರಿಟಬಲ್‌ ಟ್ರಸ್ಟಿನ ಸಂಸ್ಥಾಪಕಿ ಕವಿತಾರಾವ್‌, ಗಾಯಕ ಮಲ್ಲಪ್ಪ, ಬಿ.ಟಿ. ರಾಜೇಂದ್ರ, ನೃತ್ಯ ನಿರ್ದೇಶಕ ರೇಣುಕಾಪ್ರಸಾದ್‌ ಇದ್ದರು. 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.