ಕೋಟಿಲಿಂಗ ಅತಿಥಿ ಗೃಹದ ಕೀಲಿ ಕಾರ್ಯದರ್ಶಿ ಕೈಗೆ


Team Udayavani, Mar 5, 2019, 7:45 AM IST

kot-gruha.jpg

ಬಂಗಾರಪೇಟೆ: ಕೋಟಿಲಿಂಗ ದೇವಾಲಯದ ಆವರಣದಲ್ಲಿ ಕಾರ್ಯದರ್ಶಿ ಕೆ.ವಿ.ಕುಮಾರಿಗೆ ಅತಿಥಿಗೃಹದ ಕೀಲಿ ನೀಡಲು ಶ್ರೀಗಳ ಪುತ್ರ ಡಾ.ಶಿವಪ್ರಸಾದ್‌ ನಿರಾಕರಣೆ ಮಾಡಿದ್ದರಿಂದ ತಹಶೀಲ್ದಾರ್‌ ಕೆ.ರಮೇಶ್‌ ತಾಕೀತು ಮಾಡಿ ಕೀಲಿ ಕೊಡಿಸಿದ ಪ್ರಸಂಗ ನಡೆಯಿತು.

ಕಳೆದ 3 ದಿನಗಳ ಹಿಂದೆ ಡಿವೈಎಸ್‌ಪಿ, ಪರಮೇಶ್ವರ್‌ಹೆಗಡೆ, ಕೋಲಾರ ಉಪವಿಭಾಗಾಧಿಕಾರಿ ಸೋಮಶೇಖರ್‌, ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌ ನೇತೃತ್ವದಲ್ಲಿ ಹಲವಾರು ಬಾರಿ ಈ ಎರಡೂ ಗುಂಪುಗಳಿಗೆ ಮಾತುಕತೆ ಮೂಲಕ ಬುದ್ಧಿವಾದ ಹೇಳಿ ಮಹಾಶಿವರಾತ್ರಿ ಜಾತ್ರೆ ಸುಸೂತ್ರವಾಗಿ ನಡೆಸಲು ಸೂಚನೆ ನೀಡಿದ್ದರು. 

ದೇವಾಲಯದಲ್ಲಿ ಸುಮಾರು 6 ದಿನ ಜಾತ್ರೆ ನಡೆಯುವುದರಿಂದ ಕೆ.ವಿ.ಕುಮಾರಿ ಹಾಗೂ ಡಾ.ಶಿವಪ್ರಸಾದ್‌ ಹೊಂದಾಣಿಕೆಯಿಂದ ಕಾರ್ಯಕ್ರಮಗಳನ್ನು ನಡೆಸುವಂತೆ ಅಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆದರೆ, ಕಾರ್ಯದರ್ಶಿ ಕೆ.ವಿ.ಕುಮಾರಿಗೆ ಅತಿಥಿಗೃಹದ ಬೀಗ ನೀಡದೇ ಸತಾಯಿಸುತ್ತಿದ್ದರಿಂದ ತಹಶೀಲ್ದಾರ್‌ ಕೆ.ರಮೇಶ್‌, ಕಂದಾಯ ಅಧಿಕಾರಿಗಳು ಸೋಮವಾರ ಬೆಳಗ್ಗೆ 7ಕ್ಕೆ ಆಗಮಿಸಿ ಶ್ರೀಗಳ ಪುತ್ರ ಡಾ.ಶಿವಪ್ರಸಾದ್‌ರಿಗೆ ಬೀಗ ನೀಡುವಂತೆ ಸೂಚನೆ ನೀಡಿದರು.

ಆದರೆ, ಶಿವಪ್ರಸಾದ್‌ ವಿರೋಧ ವ್ಯಕ್ತಪಡಿಸಿದರು. ಇದರಿಂದ ಕೋಪಗೊಂಡ ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌, ಅತಿಥಿಗೃಹದ ಕೀಲಿ ನೀಡದೇ ಹೋದಲ್ಲಿ ತಾವು ಇರುವ ಅತಿಥಿಗೃಹವನ್ನು ಖಾಲಿ ಮಾಡುವಂತೆ ತಾಕೀತು ಮಾಡಿದರು. ಅಲ್ಲದೇ, ದೇವಾಲಯದ ಆಸ್ತಿ ವಿವಾದ ಏನೇ ಇದ್ದರೂ ಕೋರ್ಟ್‌ನಲ್ಲಿಟ್ಟುಕೊಳ್ಳಿ.

ಅತಿಥಿ ಗೃಹದ ಬೀಗದ ಕೀಲಿ ನೀಡದೇ ಇದ್ದಲ್ಲಿ ನೀವೂ ಖಾಲಿ ಮಾಡಿ ಬೇರೆಡೆಗೆ ಹೋಗುವಂತೆ ಖಡಕ್‌ ಆಗಿ ಎಚ್ಚರಿಕೆ ನೀಡಿದರು. ನಂತರ ತಹಶೀಲ್ದಾರ್‌ ಕೆ.ರಮೇಶ್‌ರ ಆದೇಶಕ್ಕೆ ಮಣಿದು ಅತಿಥಿ ಗೃಹದ ಬೀಗದ ಕೀಲಿ ನೀಡಿದರು. ನಂತರ ತಹಶೀಲ್ದಾರ್‌ ತಮ್ಮ ಸಿಬ್ಬಂದಿಯಿಂದಲೇ ಬೀಗ ತೆಗೆದು ಸುಮಾರು ಒಂದು ಗಂಟೆಗಳ ಕಾಲ ಕುಳಿತು ದೇಗುಲದಲ್ಲಿ ನಡೆಯುತ್ತಿರುವ ಪೂಜಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಈ ಹಿಂದೆಯೂ ಕಾರ್ಯದರ್ಶಿಗೆ ಕೀಲಿ ನೀಡಲು ಸೂಚನೆ: ಕಮ್ಮಸಂದ್ರದ ಶ್ರೀಕೋಟಿಲಿಂಗೇಶ್ವರ ದೇಗುಲದ ಆವರಣದಲ್ಲಿರುವ ಅತಿಥಿಗೃಹದಲ್ಲಿ ಡಾ.ಶಿವಪ್ರಸಾದ್‌ ತನ್ನ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದಾರೆ. ಅಲ್ಲದೇ, ಕಲ್ಯಾಣ ಮಂಟಪದ ಪಕ್ಕದ ಮತ್ತೂಂದು ಅತಿಥಿ ಗೃಹಕ್ಕೆ ಡಾ.ಶಿವಪ್ರಸಾದ್‌ ಬೀಗ ಜಡಿದು ಯಾರನ್ನೂ ಒಳಬಿಟ್ಟಿರಲಿಲ್ಲ. ಈ ಹಿಂದೆ ಕೆ.ವಿ.ಕುಮಾರಿಗೆ ಅತಿಥಿಗೃಹದ ಬೀಗ ನೀಡುವಂತೆ ಬೇತಮಂಗಲ ಸಬ್‌ ಇನ್ಸ್‌ಪೆಕ್ಟರ್‌ ಸುನೀಲ್‌ಕುಮಾರ್‌ ಹಲವು ಬಾರಿ ಚರ್ಚಿಸಿ ತಿಳಿಸಿದ್ದರೂ ಶ್ರೀಗಳ ಪುತ್ರ ಶಿವಪ್ರಸಾದ್‌ ಮನ್ನಣೆ ನೀಡಿರಲಿಲ್ಲ.

ಇಬ್ಬರಿಗೂ ಸಂಸದರಿಂದ ಬುದ್ಧಿವಾದ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಸಂಸದ ಕೆ.ಎಚ್‌.ಮುನಿಯಪ್ಪ ಕಮ್ಮಸಂದ್ರದ ಶ್ರೀಕೋಟಿಲಿಂಗ ದೇಗುಲಕ್ಕೆ ಸೋಮವಾರ ಭೇಟಿ ನೀಡಿದ್ದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಬ್ರಹ್ಮ ರಥೋತ್ಸವ ವೀಕ್ಷಿಸಿದರು. ನಂತರ ಲಿಂಗೈಕ್ಯರಾದ ಶ್ರೀಗಳು ವಾಸವಿದ್ದ ಜಾಗಕ್ಕೆ ಬಂದು ನಮಿಸಿದರು. ಬಳಿಕ,  ಶ್ರೀಗಳ ಪುತ್ರ ಡಾ.ಶಿವಪ್ರಸಾದ್‌ರನ್ನು ಕರೆಸಿ ಕೆ.ವಿ.ಕುಮಾರಿ ಸುಮಾರು 30 ವರ್ಷಗಳಿಂದ ದೇಗುಲದ ಅಭಿವೃದ್ಧಿಗಾಗಿ ಶ್ರೀಗಳ ಜೊತೆ ಶ್ರಮಿಸಿದ್ದಾರೆ.

ನಿಮಿಗಿನ್ನೂ ಅನುಭವದ ಕೊರತೆ ಇದೆ. ಕೆ.ವಿ.ಕುಮಾರಿ ಅವರನ್ನು ಜೊತೆಯಲ್ಲಿಟ್ಟುಕೊಂಡು ಯಾವುದೇ ವಿವಾದ ಮಾಡಿಕೊಳ್ಳದೇ ಒಗ್ಗಟ್ಟಿನೊಂದಿಗೆ ದೇವರ ಕೆಲಸ ಮಾಡಿ. ನೀವಿಬ್ಬರೂ ಕಿತ್ತಾಡುವುದರಿಂದ ದೇಗುಲದ ಪ್ರತೀತಿಗೆ ಕೆಟ್ಟ ಹೆಸರು ಬರುತ್ತದೆ. ನಿಮ್ಮಿಬ್ಬರ ನಡುವೆ ಕೆಲವರು ವಿವಿಧ ಕಾರಣಗಳಿಗಾಗಿ ತಪ್ಪು ಸಂದೇಶಗಳನ್ನು ರವಾನೆ ಮಾಡುತ್ತಿರುವುದು ತಿಳಿದು ಬಂದಿದೆ. ಇವೆಲ್ಲಾ ನಡೆಯದಂತೆ ಎಚ್ಚರ ವಹಿಸಬೇಕೆಂದು ಬುದ್ಧಿವಾದ ಹೇಳಿದರು.

* ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.