ಪೊಲೀಸರ ತಪ್ಪಿಗಾಗಿ 16 ವರ್ಷ ಜೈಲಲ್ಲಿ!
Team Udayavani, Mar 6, 2019, 12:30 AM IST
ಹೊಸದಿಲ್ಲಿ: ಕೊಲೆ ಪ್ರಕರಣದಲ್ಲಿ ತಪ್ಪಾಗಿ ದೋಷಿಗಳಾಗಿ, ಮರಣದಂಡನೆಗೆ ಗುರಿಯಾಗಿದ್ದ 6 ಮಂದಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದ್ದು, ಅವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರಕಾರಕ್ಕೆ ಸೂಚಿಸಿದೆ. ಜತೆಗೆ, ವಿನಾಕಾರಣ ಶಿಕ್ಷೆಯಾಗಿದ್ದಕ್ಕೆ ನ್ಯಾಯಾಲಯ ವಿಷಾದಿಸಿದೆ.
ಈ ಪ್ರಕರಣದಲ್ಲಿ ಬೇಜವಾಬ್ದಾರಿಯುತವಾಗಿ ತನಿಖೆ ನಡೆಸಿದ ಪೊಲೀಸರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ತನಿಖೆಯಲ್ಲಾದ ಲೋಪಕ್ಕೆ ಕಾರಣಕರ್ತರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ರಾಜ್ಯ ಮುಖ್ಯಕಾರ್ಯದರ್ಶಿಗೆ ಸೂಚಿಸಿದೆ. ಅಂಕುಶ್ ಮಾರುತಿ ಶಿಂದೆ ಸೇರಿ 6 ಜನರ ವಿರುದ್ಧ 2003 ಜೂನ್ನಲ್ಲಿ ಅತ್ಯಾಚಾರ, ಒಂದೇ ಕುಟುಂಬದ ಐವರನ್ನು ಹತ್ಯೆಗೈದ ಆರೋಪ ಹೊರಿಸಲಾಗಿತ್ತು. 2007ರಲ್ಲಿ ಅವರೆಲ್ಲರನ್ನೂ ದೋಷಿಗಳು ಎಂದು ತೀರ್ಪಿತ್ತು ಬಾಂಬೆ ಹೈಕೋರ್ಟ್ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಅವರೆಲ್ಲರೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾರಣ ಮರುವಿಚಾರಣೆ ನಡೆಸಲಾಗಿ, ಅವರು ನಿರ್ದೋಷಿಗಳೆಂದು ಸಾಬೀತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು