ಚುನಾವಣೆ ಸಿದ್ಧತೆಯಲ್ಲಿ ರಾಜ್ಯ ಬಿಜೆಪಿ ಹಿಂದೆ


Team Udayavani, Mar 6, 2019, 12:30 AM IST

yeddyurappa-621×414.jpg

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದರೂ ರಾಜ್ಯ ಬಿಜೆಪಿಯಲ್ಲಿ ಸಿದ್ದತಾ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯದಿರುವ ಬಗ್ಗೆ ಪಕ್ಷದಲ್ಲೇ ಅಪಸ್ವರವಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳು ಮಾತ್ರವಲ್ಲದೇ ಅನ್ಯ ಪಕ್ಷದ ಸರ್ಕಾರವಿರುವ ರಾಜ್ಯಗಳಲ್ಲಿನ ಬಿಜೆಪಿ ಸಿದ್ದತಾ ಕಾರ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಚುನಾವಣೆ ಸಿದಟಛಿತೆ ಸುಮಾರು ಒಂದೂವರೆ ತಿಂಗಳಿನಿಂದ ಎರಡು ತಿಂಗಳಷ್ಟು ಹಿಂದೆ ಉಳಿದಿದೆ. ಜತೆಗೆ ಲೋಕಸಭಾ ಕ್ಷೇತ್ರವಾರು ಹಾಗೂ ರಾಜ್ಯ ಮಟ್ಟದ ನಿರ್ವಹಣಾ ಸಮಿತಿಗಳ ರಚನೆ ಇನ್ನೂ ಅಂತಿಮವಾಗದ ಕಾರಣ ಯೋಜಿತ ರೀತಿಯಲ್ಲಿ ಸಂಘಟಿತವಾಗಿ ಚುನಾವಣಾ ಪೂರ್ವ ಸಿದಟಛಿತೆ ಕೈಗೊಳ್ಳುವ ಕಾರ್ಯದಲ್ಲಿ ತುಸು ಹಿನ್ನಡೆಯಾಗಿದೆ ಎಂಬ ಬಗ್ಗೆ ಪಕ್ಷದ ನಾಯಕರಲ್ಲೇ ಬೇಸರವಿದೆ ಎನ್ನಲಾಗಿದೆ.

ಚುನಾವಣೆಗೆ ಸಂಬಂಧಪಟ್ಟಂತೆ ಬಿಜೆಪಿಯು ದೇಶಾದ್ಯಂತ ಕೆಲ ತಿಂಗಳ ಹಿಂದೆಯೇ ಸಿದ್ದತಾ ಕಾರ್ಯ ಆರಂಭಿಸಿತ್ತು. ಆದರೆ ಬಿಜೆಪಿಯ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಗೆ ಸಿದಟಛಿತೆ ಆರಂಭದಿಂದಲೂ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದು ಪಕ್ಷದ ಹಲವು ನಾಯಕರಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.

ಲೋಕಸಭಾ ಕ್ಷೇತ್ರವಾರು ಸಮಿತಿಗಳು ಇಲ್ಲ: ಲೋಕಸಭಾ ಕ್ಷೇತ್ರವಾರು ನಿರ್ವಹಣಾ ಸಮಿತಿಗಳು ಸಹ ಈವರೆಗೆ ರಚನೆಯಾಗಿಲ್ಲ. ಇದರಿಂದ ಕ್ಷೇತ್ರ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸುವ ಕಾರ್ಯಕ್ಕೆ ಅಡ್ಡಿಯಾದಂತಿದೆ. 28 ಕ್ಷೇತ್ರಗಳ ಪೈಕಿ ಸುಮಾರು 12 ಕ್ಷೇತ್ರಗಳ ನಿರ್ವಹಣಾ ಸಮಿತಿಗಳ ವಿವರವಷ್ಟೇ ರಾಜ್ಯ ಬಿಜೆಪಿಗೆ ಸಲ್ಲಿಕೆಯಾಗಿವೆ. ಎಲ್ಲ ಕ್ಷೇತ್ರಗಳ ಸಮಿತಿ ವಿವರ ಸಲ್ಲಿಕೆಯಾಗುತ್ತಿದ್ದಂತೆ ರಾಜ್ಯಾಧ್ಯಕ್ಷರು ಪರಿಶೀಲಿಸಿ ಅಂತಿಮಗೊಳಿಸಲಿದ್ದಾರೆ.

ಮುಗಿಯದ ಗೊಂದಲ: ರಾಜ್ಯದ ಚುನಾವಣಾ ಪ್ರಭಾರಿ, ಸಹಪ್ರಭಾರಿಗಳ ನೇಮಕ ಈ ಹಿಂದೆಯೇ ಆಗಿದ್ದರೂ ಹಲವು ಬಾರಿ ಬದಲಾವಣೆಯಾಗಿ ಗೊಂದಲ ಮುಂದುವರಿದಿದೆ ಎಂದು ಬಿಜೆಪಿ ಮುಖಂಡರೊಬ್ಬರು ಬೇಸರ ವ್ಯಕ್ತಪಡಿಸಿದರು.

ರಚನೆಯಾಗದ ರಾಜ್ಯಮಟ್ಟದ ನಿರ್ವಹಣಾ ಸಮಿತಿ
ಚುನಾವಣೆಗೆ ಸಂಬಂಧಪಟ್ಟಂತೆ ರಾಜ್ಯ ಮಟ್ಟದ ನಿರ್ವಹಣಾ ಸಮಿತಿ ಈವರೆಗೆ ರಚನೆ ಯಾಗಿಲ್ಲ. ಇದರಿಂದ ರಾಜ್ಯಮಟ್ಟದಲ್ಲಿ ತಂಡೋಪಾದಿಯಲ್ಲಿ ಸಂಘಟಿತವಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಕ್ಕೆ ತುಸು ಹಿನ್ನಡೆಯಾಗಿದೆ. ಈ ಹಿಂದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿದ್ದ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ರಾಜ್ಯ ಮಟ್ಟದ ನಿರ್ವಹಣಾ ಸಮಿತಿ ಸಂಚಾಲಕ ಸ್ಥಾನಕ್ಕೆ ಆಸಕ್ತಿ ತೋರಿದ್ದಾರೆ ಎನ್ನಲಾಗಿದ್ದು, ಇದಕ್ಕೆ ರಾಜ್ಯ ಬಿಜೆಪಿ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ವಿಧಾನಸಭೆ ಚುನಾವಣೆಗೆ 5 ತಿಂಗಳ ಹಿಂದೆ ರಚನೆ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಗೆ ನಿರ್ವಹಣಾ ಸಮಿತಿ ಸೇರಿ ಇತರೆ ಸಿದ್ಧತಾ ಕಾರ್ಯಗಳ ಬಗ್ಗೆ ಸಮಿತಿ
ಐದು ತಿಂಗಳ ಹಿಂದೆಯೇ ರಚನೆಯಾಗಿತ್ತು. ಆದರೆ ಲೋಕಸಭಾ ಚುನಾವಣೆಗೆ ಎರಡು ತಿಂಗಳಷ್ಟೇ ಬಾಕಿ ಇದ್ದರೂ
ಈವರೆಗೆ ಸಮಿತಿಗಳು ರಚನೆಯಾಗಿಲ್ಲ. ಈ ನಡುವೆ ಕೇಂದ್ರ ಬಿಜೆಪಿ ಸೂಚನೆಯಂತೆ ನಡೆದ ಕಮಲ ಜ್ಯೋತಿ ಸಂಕಲ್ಪ,
“ಮೇರಾ ಬೂತ್‌ ಸಬ್‌ಸೆ ಮಜಬೂತ್‌’, ಪ್ರಧಾನಿಯವರು ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದ, ಬಿಜೆಪಿ
ಕಾರ್ಯಕರ್ತರ ಮನೆಗಳ ಮೇಲೆ ಧ್ವಜ ಹಾರಿಸುವ ಕಾರ್ಯಕ್ರಮ, ಬೈಕ್‌ ರ್ಯಾಲಿ ಕಾರ್ಯಕ್ರಮಗಳಿಗೆ ಉಸ್ತುವಾರಿ
ಸಮಿತಿಗಳನ್ನಷ್ಟೇ ರಚಿಸಿ ನಡೆಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಅಮಿತ್‌ ಶಾ ಹಾಗೂ ರಾಮಲಾಲ್‌ ಅವರ ರಾಜ್ಯ ಭೇಟಿ ಬಳಿಕ ಸಿದಟಛಿತಾ ಕಾರ್ಯ ವೇಗ ಪಡೆದು ಕೊಂಡಿದೆ. ಸರ್ವ ರೀತಿಯಲ್ಲೂ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದ್ದು, ಇನ್ನಷ್ಟು ಚುರುಕುಗೊಳ್ಳಲಿವೆ.
● ಸಿ.ಟಿ. ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಎಂ. ಕೀರ್ತಿ ಪ್ರಸಾದ್‌

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.