ನಿಲ್ಲದ ಪಾಕ್‌ ಕಳ್ಳಾಟ


Team Udayavani, Mar 6, 2019, 12:30 AM IST

z-28.jpg

ಇಸ್ಲಾಮಾಬಾದ್‌/ಹೊಸದಿಲ್ಲಿ: ಪುಲ್ವಾಮಾ ದಾಳಿಯ ಬಗ್ಗೆ ಭಾರತ ಕೊಟ್ಟ ಸಾಕ್ಷ್ಯವನ್ನು ತಿರಸ್ಕರಿಸಿರುವ ಪಾಕಿಸ್ಥಾನವು ಮಂಗಳವಾರ ಮತ್ತೂಂದು ಕಳ್ಳಾಟ ಶುರು ಮಾಡಿದೆ. ಉಗ್ರ ಸಂಘಟನೆಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಭಾರತ, ಅಮೆರಿಕ ಸಹಿತ ವಿಶ್ವದ ಪ್ರಮುಖ ರಾಷ್ಟ್ರಗಳಿಂದ ಒತ್ತಡ ತೀವ್ರಗೊಳ್ಳುತ್ತಿರುವಂತೆಯೇ ಜೈಶ್‌- ಎ- ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌ನ ಪುತ್ರ, ಸಹೋದರ ಸಹಿತ 44 ಮಂದಿ ಉಗ್ರರನ್ನು “ಬಂಧಿಸಿದೆ’ ಎಂದು ಹೇಳಿಕೊಂಡಿದೆ. ಮತ್ತೂಂದೆಡೆ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಸುನೀಲ್‌ ಲಾಂಬಾ ಮಾತನಾಡಿ, ಸಾಗರದ ಮೂಲಕ ಪಾಕ್‌ ಉಗ್ರರು ಭಾರತದ ಮೇಲೆ ದಾಳಿ ಮಾಡುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮತ್ತೂಂದು ಕಳ್ಳಾಟ
ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಸಹೋದರ ರವೂಫ್ ಅಸ್ಗರ್‌, ಅಜರ್‌ನ ಪುತ್ರ ಹಮ್ಮದ್‌ ಅಜರ್‌ ಸೇರಿ 44 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ “ಬಂಧಿಸಲಾಗಿದೆ’ ಎಂದು ಹೇಳಿಕೊಂಡಿದೆ. ಆದರೆ ಇದು ಕಳ್ಳಾಟದಂತೆ ಕಾಣಿಸುತ್ತಿದೆ. ಜೈಶ್‌ ಉಗ್ರ ಸಂಘಟನೆಯ ಕೃತ್ಯದ ಕುರಿತ ಪುರಾವೆಗಳನ್ನು ಭಾರತವು 2 ದಿನಗಳ ಹಿಂದೆ ಪಾಕಿಸ್ಥಾನಕ್ಕೆ ಸಲ್ಲಿಸಿದ್ದು, ಪಾಕ್‌ನಲ್ಲಿ ಜೆಇಎಂ ಉಗ್ರರ ಶಿಬಿರಗಳು ಅಸ್ತಿತ್ವ ದಲ್ಲಿರುವ ಬಗ್ಗೆ, ಮಸೂದ್‌ ಅಜರ್‌ ಮತ್ತು ಆತನ ಕುಟುಂಬವು ಪಾಕ್‌ನಲ್ಲಿ ಪಡೆಯುತ್ತಿರುವ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗಿತ್ತು. ಈ ದಾಖಲೆಯಲ್ಲಿ ಉಗ್ರರಾದ ಮುಫ್ತಿ ರವೂಫ್ ಮತ್ತು ಹಮ್ಮದ್‌ ಅಜರ್‌ನ ಹೆಸರನ್ನೂ ಸೇರಿಸಲಾಗಿತ್ತು.

ಸಾಗರ ಮಾರ್ಗದಿಂದಲೂ ದಾಳಿ?
ಪಾಕಿಸ್ಥಾನವು ಮತ್ತೂಂದೆಡೆ ಸದ್ದಿಲ್ಲದೆ ಭಾರತದ ಮೇಲೆ ದಾಳಿ ಮಾಡಲು ಉಗ್ರರಿಗೆ ಅವಕಾಶ ಕಲ್ಪಿಸುತ್ತಿರುವ ಮಾಹಿತಿಯೂ ಹೊರಬಿದ್ದಿದೆ. ಪುಲ್ವಾಮಾ ದಾಳಿಯ ಅನಂತರ ಸಮುದ್ರ ಮಾರ್ಗದಿಂದಲೂ ಭಾರತದ ಮೇಲೆ ದಾಳಿ ನಡೆಸಲು ಉಗ್ರರು ಸಜ್ಜಾಗಿದ್ದಾರೆ ಎಂದು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಸುನೀಲ್‌ ಲಾಂಬಾ ಮಾಹಿತಿ ನೀಡಿದ್ದಾರೆ. ಇಂಡೋ-ಪೆಸಿಫಿಕ್‌ ಪ್ರಾಂತೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ನೆರೆ ರಾಷ್ಟ್ರದ ಕೃಪಾಪೋಷಣೆಯಲ್ಲಿ ಬೆಳೆದು ನಿಂತಿರುವ ಉಗ್ರವಾದಿಗಳು ಭಾರತವನ್ನು ಅಸ್ಥಿರಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇಂತಹ ಸವಾಲುಗಳನ್ನು ಎದುರಿಸಲು ಸೇನೆ ಸರ್ವ ಸನ್ನದ್ಧವಾಗಿದೆ ಎಂದು ಹೇಳಿದರು. ಇದೇ ವೇಳೆ, ಭಯೋತ್ಪಾದನೆ ಎಂಬ ಅನಿಷ್ಟವು ಕ್ಷಿಪ್ರವಾಗಿ ಜಗತ್ತನ್ನು ಹರಡಿಕೊಳ್ಳುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದ ಲಾಂಬಾ, ಒಂದು ನಿರ್ದಿಷ್ಟ ಭಯೋತ್ಪಾದಕ ಸಂಘಟನೆಯು ಮುಂಬರುವ ದಿನಗಳಲ್ಲಿ ಜಗತ್ತಿಗೇ ಕಂಟಕಪ್ರಾಯವಾಗಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದರು.

ಮತ್ತೆ ಸುಳ್ಳಿನ ಮೊರೆ ಹೋದ ಪಾಕ್‌
ಪದೇ ಪದೆ ತಿರುಚಿದ ವೀಡಿಯೋ, ಹಳೆಯ ಘಟನೆಗಳ ಫೋಟೋಗಳನ್ನು ಹಾಕಿ “ಸಾಹಸ’ ಪ್ರದರ್ಶನ ಮಾಡುತ್ತಿರುವ ಪಾಕಿಸ್ಥಾನ ಮತ್ತೆ ಸುಳ್ಳಿನ ಮೊರೆ ಹೋಗಿದೆ. ಆದರೆ ಈ ಸುಳ್ಳಿನ ಮುಖವಾಡವನ್ನೂ ಭಾರತ ಯಶಸ್ವಿಯಾಗಿ ಕಳಚಿದೆ. ನಮ್ಮ ಜಲಗಡಿಯನ್ನು ಉಲ್ಲಂ ಸಿ ಒಳಬರಲು ಯತ್ನಿಸಿದ ಭಾರತದ ಜಲಾಂತರ್ಗಾಮಿಯನ್ನು ನೌಕಾಪಡೆ ಹಿಮ್ಮೆಟ್ಟಿಸಿದೆ ಎಂದು ಪಾಕ್‌ ಘೋಷಿಸಿತ್ತು. ಅಲ್ಲದೆ, ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿತ್ತು. ಭಾರತದ ಜಲಾಂತರ್ಗಾಮಿ ಪಾಕ್‌ ಪ್ರವೇಶಿಸದಂತೆ ನಾವು ತಡೆದಿದ್ದೇವೆ. ಅದನ್ನು ನಾವು ಟಾರ್ಗೆಟ್‌ ಮಾಡಿ ನಾಶ ಮಾಡಬಹುದಿತ್ತು. ಆದರೆ ಪಾಕಿಸ್ಥಾನದ ಶಾಂತಿಯ ನೀತಿಗೆ ತಲೆಬಾಗಿ ನಾವು ಹಾಗೆ ಮಾಡಲಿಲ್ಲ  ಎಂದೂ ನೌಕಾಪಡೆ ತಿಳಿಸಿತ್ತು. ಇದಾದ ಸ್ವಲ್ಪ ಸಮಯದಲ್ಲೇ ಆ ವೀಡಿಯೋದ ಸತ್ಯಾಸತ್ಯತೆಯನ್ನು ಭಾರತ ಹೊರಗೆಳೆದಿದೆ. ಇದು 2016ರ ನ.18ರಂದು ಚಿತ್ರೀಕರಿಸಲಾದ ದೃಶ್ಯವಾಗಿದ್ದು, ಅದನ್ನು ತಿರುಚಿ, ದಿನಾಂಕವನ್ನು ಬದಲಿಸಿ ಪಾಕಿಸ್ಥಾನವು ಈಗಿನ ದೃಶ್ಯವೆಂದು ಬಿಡುಗಡೆ ಮಾಡಿದೆ ಎಂಬುದನ್ನು ಭಾರತ ಬಹಿರಂಗಪಡಿಸಿದೆ.

ಸೇನಾ ದಾಳಿ ಆಗಿರಲಿಲ್ಲ: ರಕ್ಷಣಾ ಸಚಿವೆ ನಿರ್ಮಲಾ
ಬಾಲಾಕೋಟ್‌ ದಾಳಿ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, “ಜೈಶ್‌ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತದ ವಾಯುಪಡೆ ನಡೆಸಿದ ದಾಳಿಯು ಸೇನಾ ದಾಳಿಯಾಗಿರಲಿಲ್ಲ. ಹೀಗಾಗಿ ನಾಗರಿಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ಸಾವು-ನೋವಿನ ಸಂಖ್ಯೆ ಬಹಿರಂಗ ಪಡಿಸಲು ಅದು ನಮ್ಮಲ್ಲಿಲ್ಲ. ವಿದೇಶಾಂಗ ಕಾರ್ಯದರ್ಶಿ ಗೋಖಲೆ ಅವರೂ ಸಾವಿನ ಅಂಕಿ ಸಂಖ್ಯೆಯನ್ನು ನೀಡಿಲ್ಲ’ ಎಂದು ಹೇಳಿದ್ದಾರೆ.

ವಾಯುಪಡೆಯ ದಾಳಿಗೆ ಸಾ  ಕೇಳುತ್ತಿರುವ ವಿಪಕ್ಷಗಳು ಪಾಕಿಸ್ಥಾನದ ಪೋಸ್ಟರ್‌ ಬಾಯ್‌ಗಳಾಗಿದ್ದಾರೆ. ಅವರ ಹೇಳಿಕೆಗಳು ಪಾಕ್‌ ಪತ್ರಿಕೆಗಳಲ್ಲಿ ಹೆಡ್‌ಲೈನ್‌ಗಳಾಗಿ ಮಿಂಚುತ್ತಿವೆ. ಅವರೆಲ್ಲರೂ ಪಾಕಿಸ್ಥಾನವನ್ನು ಶಾಂತಿಯ ದೇವತೆಯಂತೆ ನೋಡುತ್ತಿದ್ದಾರೆ. ದೇಶವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ.
– ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.