ಕಾಂಗ್ರೆಸ್‌, ಜೆಡಿಎಸ್‌ ಮೇಲೆ ಸಿ.ಟಿ.ರವಿ ವಾಗ್ಧಾಳಿ


Team Udayavani, Mar 6, 2019, 7:25 AM IST

cong-jds.jpg

ಹಾಸನ: ಕಾಂಗ್ರೆಸ್‌, ಜೆಡಿಎಸ್‌ನವರದು ಕುಟುಂಬ ರಾಜಕಾರಣ. ಕುಟುಂಬದವರ ಹೊರತು ಪಕ್ಷದ ಸಮರ್ಥ ನಾಯಕರು ಆ ಪಕ್ಷಗಳ ಮುಖಂಡರಿಗೆ ಕಾಣಿಸುವುದೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ವಾಗ್ಧಾಳಿ ನಡೆಸಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜಿಲ್ಲಾ ಬಿಜೆಪಿ ಏರ್ಪಡಿಸಿದ್ದ  ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಬಿಜೆಪಿಯಲ್ಲಿ ಸಾಮರ್ಥಯವಿರುವವರು ಉನ್ನತ ಹುದ್ದೆಗೆ ಏರುತ್ತಾರೆ. ಹಾಗಾಗಿಇ ಬಿಜೆಪಿಯಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದು. ಆದರೇ ಮಕ್ಕಳು ಹಾಗೂ ಮೊಮ್ಮಗನನ್ನು ರಾಜಕಾರಣದಲ್ಲಿ ಬೆಳೆಸುವ  ಕುಟುಂಬದ ರಾಜಕಾರಣ ರಾಜ್ಯದಲ್ಲಿ ಒಂದು ಕುಟುಂಬಕ್ಕೆ ಸೀಮಿತವಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಮೇಲೆ ಹರಿಹಾಯದರು. 

ಮೋದಿಗೆ ಸಾಮರ್ಥ್ಯವಿದೆ: ನರೇಂದ್ರಮೋದಿ ಅವರು ಅದೃಷ್ಟದಿಂದ ಪ್ರಧಾನಿ ಆಗಲಿಲ್ಲ. ಅವರು ಅನುಭವ ಮತ್ತು ಸಾಮರ್ಥ್ಯದ ಮೇಲೆ ಪ್ರಧಾನಿ ಹುದ್ದೆಗೇರಿದರು. ದೇಶದ 130 ಕೋಟಿ ಜನರಲ್ಲಿ ಯಾರು ಬೇಕಾದರೂ ಪ್ರಧಾನಿ ಆಗಬಹುದು ಎಂಬುದು ಬಿಜೆಪಿ ಸಿದ್ಧಾಂತ. ಆದರೇ ಒಂದೆ ಕುಟುಂಬದ ಸದಸ್ಯರನ್ನು ಪ್ರಧಾನಿಯಾಗಿ ಮಾಡುವುದು ಬಿಜೆಪಿ ಸಿದ್ಧಾಂತವಲ್ಲ ಎಂದು ಕಾಂಗ್ರೆಸ್‌ ಪಕ್ಷದ ಧೋರಣೆಯನ್ನೂ ಟೀಕಿಸಿದರು. 

ಅಟಲ್‌ಜೀ ಉತ್ತಮ ಪ್ರಧಾನಿ: ಅಟಲ್‌ ಬಿಹಾರಿ ವಾಜಪೇಮಿ ಅವರನ್ನು ಉತ್ತಮ ಪ್ರಧಾನಿ ಎಂದು ದೇಶದ ಜನರು ಕರೆದರು.  ಈಗ ಇನ್ನು ಉತ್ತಮ ಪ್ರಧಾನಿಯಾಗಿ ಮೋದಿಯವರು ಬಂದಿದ್ದಾರೆ ಎಂದ ಅವರು, ಈ ಹಿಂದೆ ಕಾಂಗ್ರೆಸ್‌ ಪಕ್ಷ  ಕುಟುಂಬದ ರಾಜಕಾರಣ ಮಾಡಿಕೊಂಡು ದೇಶದಲ್ಲಿ ಆಳ್ವಿಕೆ ನಡೆಸಿದರೆ ಕರ್ನಾಟಕದಲ್ಲಿ ಜೆಡಿಎಸ್‌ ಪಕ್ಷದ ಎಚ್‌.ಡಿ. ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ. ರೇವಣ್ಣ, ಪುತ್ರರಾದ  ಪ್ರಜ್ವಲ್‌, ನಿಖೀಲ್‌  ಹೀಗೆ ಕುಟುಂಬ ರಾಜಕಾರಣ ನಡೆಯುತ್ತಿದೆ.

ಬಿಜೆಪಿಯಲ್ಲಿ  ಭಾರತ್‌ ಮಾತಾಕೀ,  ಜೈ ಎಂದು ಘೋಷಣೆ ಕೂಗಿದರೇ, ಜೆಡಿಎಸ್‌ನಲ್ಲಿ ಪ್ರಜ್ವಲ್‌ಕಿ ಜೈ ಎನ್ನಬೇಕಾಗಿದೆ ಎಂದು ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರಮೋದಿ ಅವರಂತಹ ಉತ್ತಮ ನಾಯಕ ಸಿಗುವುದು ವಿರಳ.  ದೇಶ ಆಳಲು ಯಾರು  ಯೋಗ್ಯರು ಎಂಬುದನ್ನು ಮೊದಲು ಚಿಂತಿಸಬೇಕು. ಪ್ರಪಂಚದಲ್ಲಿ ಭಾರತವನ್ನು ಆರ್ಥಿಕವಾಗಿ 6ನೇ ಸ್ಥಾನಕ್ಕೆ ನರೇಂದ್ರ ಮೋದಿಯವರು ಕೊಂಡೊಯ್ದಿದ್ದಾರೆ ಎಂದರು. 

ಜನಧನ ಖಾತೆ: ಬ್ಯಾಂಕ್‌ ಕಡೆ ಹೆಜ್ಜೆ ಹಾಕದವರಿಗೆಲ್ಲಾ ಜನಧನ ಬ್ಯಾಂಕ್‌ ಖಾತೆ ಆರಂಭಿಸಿ ಬ್ಯಾಂಕ್‌ ಕಡೆ ಬರುವಂತೆ ಪ್ರಧಾನಿ ಮೋದಿ ಅವರು ಮಾಡಿದರು. ರಸಗೊಬ್ಬರ ಕಾಳಸಂತೆ ತಪ್ಪಿಸಿದ ಮೋದಿ ಅವರು  ಬೇನಾಮಿ ಆಸ್ತಿ ಮಾಡಿಕೊಳ್ಳುವರಿಗೂ ಸಿಂಹಸ್ವಪ್ನವಾದರು. ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಆಡಳಿತದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಯೇ ವಂಚನೆ  ನಡೆಯುತ್ತಿತ್ತು.

ವಿಜಯಮಲ್ಯ ಸೇರಿದಂತೆ ಹಲವು ಉದ್ಯಮಿಗಳು ಸಾವಿರಾರು ಕೋಟಿಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದು ದೇಶ ಬಿಡುತ್ತಿದ್ದರು. ಮೋದಿಯವರು ಅಧಿಕಾರಕ್ಕೆ  ಬಂದ ಮೇಲೆ ಆರ್ಥಿಕ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಿದರು. ಹಿಂದೆ ಭ್ರಷ್ಟಾಚಾರ ಎಂದರೆ  ಪ್ರಧಾನಿ ಕಾರ್ಯಾಲಯವೇ ಕೇಂದ್ರವಾಗಿರುತ್ತಿತ್ತು. ಈಗ ಸಂಪೂರ್ಣ ಬದಲಾವಣೆಯಾಗಿದೆ. ಸುಧಾರಣೆ ತರಲಾಗಿದೆ ಎಂದು ಕೇಂದ್ರ ಸರ್ಕಾರದ ಜನಪ್ರ ಕಾರ್ಯಕ್ರಮಗಳ ವಿವರ ನೀಡಿದರು. 

ಬಿಜೆಪಿಯಿಂದ ಅಭಿವೃದ್ಧಿ: ಕೇಂದ್ರ ಸರ್ಕಾರದ ಅನುದಾನ ಪುರಸಭೆ ಹಾಗೂ ಗ್ರಾಮ ಪಂಚಾಯತಿಗೆ ನೇರವಾಗಿ ಹೋಗುವಂತೆ ಮಾಡಲಾಗಿದೆ. ಹಿಂದಿನ ಯುಪಿಎ ಸರ್ಕಾರ  ವೋಟಿ ಗಾಗಿ ಕೆಲಸ ಮಾಡಿದರೇ ಇಂದಿನ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದ ಅವರು,  ವಿಶ್ವ ಯೋಗ ದಿನವನ್ನು ಮೋದಿ ಮಾರ್ಗದರ್ಶನದಲ್ಲಿ ಆರಂಭಿಸಿ ಭಾರತ ಸಂಸ್ಕೃತಿಗೆ ಗೌರವ ಸಿಗುವಂತೆ ಮಾಡಿದ ಕೀರ್ತಿ ಎನ್‌ಡಿಎ ಸರ್ಕಾರದ್ದು ಎಂದರು. 

ಪ್ರಬುದ್ಧರನ್ನು ಆಯ್ಕೆ ಮಾಡಿ: ಇಷ್ಟೆಲ್ಲಾ ಮಾಡಿರುವ ಮೋದಿ ನೇತೃತ್ವದ ಸರ್ಕಾರ  ಇನ್ನು ಮುಂದಿನ ದಿಗಳಲ್ಲಿ ವಸತಿ ರಹಿತರಿಗೆಲ್ಲಾ  ಮನೆ ಸಿಗುವಂತೆ ಮಾಡುವ  ಗುರಿ ಹೊಂದಿದೆ ಎಂದರು.  ಮುಂದಿನ ಚುನಾವಣೆಯಲ್ಲಿ ದೇಶದ ಜನರು ಸಮರ್ಥ ಆಡಳಿತಗಾರರನ್ನು ಆಯ್ಕೆ ಮಾಡಿಕೊಳ್ಳುವ ಪ್ರಬುದ್ಧತೆ ತೋರಬೇಕು ಎಂದು ಮನವಿ ಮಾಡಿದರು.

ಸಂವಾದ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡಿದ್ದ ಸಿ.ಟಿ.ರವಿ ಅವರು ಸಭಿಕರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಶಾಸಕ ಪ್ರೀತಂ ಜೆ.ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಯೋಗಾರಮೇಶ್‌, ರಾಜ್ಯ ರೈತ ಮೋರ್ಚಾದ  ಅಧ್ಯಕ್ಷ ರೇಣುಕುಮಾರ್‌  ಮತ್ತಿತರರು ಉಪಸ್ಥಿತರಿದ್ದರು.  ಜಿಲ್ಲಾ ಬಿಜೆಪಿ ಕಾರ್ಯದರ್ಶಿ  ವೇಣುಗೋಪಾಲ್‌ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.