ಚಾ.ನಗರ, ಮೈಸೂರಿನಲ್ಲಿ ಬಿಎಸ್ಪಿ ಪ್ರಬಲ ಅಭ್ಯರ್ಥಿ ಕಣಕ್ಕೆ 


Team Udayavani, Mar 6, 2019, 7:25 AM IST

chamaraja.jpg

ಚಾಮರಾಜನಗರ: ಪಕ್ಷದ ವರಿಷ್ಠೆ ಮಾಯಾವತಿ ಆದೇಶದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಎನ್‌.ಮಹೇಶ್‌ ತಿಳಿಸಿದರು.

ನಗರದ ವರ್ತಕರ ಭವನದಲ್ಲಿ ಬಹುಜನ ಸಮಾಜ ಪಕ್ಷದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಚುನಾವಣೆಯ ಕಣಕ್ಕಿಳಿಸಲಾಗುವುದು.

ಕಳೆದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾದರಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ಮಾಡಿ ಗೆಲ್ಲುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅದಕ್ಕಾಗಿ ಇಂದಿನಿಂದ ಕಾರ್ಯಕರ್ತರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಚಾಮರಾಜನಗರ ಕ್ಷೇತ್ರದಲ್ಲಿ 3 ಲಕ್ಷ ಮತ ಪಡೆದರೆ ಗೆಲುವು ನಮ್ಮದಾಗುತ್ತದೆ ಎಂದರು. 

ಚಾಮರಾಜನಗರ, ಚಿಕ್ಕಬಳ್ಳಾಪುರ, ಬೀದರ್‌, ಕಲಬುರಗಿ, ಮೈಸೂರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಪ್ರಬಲ ಸ್ಪರ್ಧೆವೊಡ್ಡಲಿದೆ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರ ಮತ ಪಡೆಯಬೇಕಿದೆ ಎಂದರು. 

15 ರಂದು ಸಮಾವೇಶ: ಮಾ. 15ರಂದು ಚಾಮರಾಜನಗರದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ 32 ಹೋಬಳಿಗಳಿಂದ ತಲಾ 500 ಕಾರ್ಯಕರ್ತರಂತೆ ಒಟ್ಟು 1600 ತರಬೇತಿ ಪಡೆದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದರು. 

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಪಕ್ಷದ ಕಾರ್ಯಕರ್ತರು ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ. ಕಡಿಮೆ ಖರ್ಚಿನಲ್ಲಿ ವಿಭಿನ್ನ ರೀತಿ ಚುನಾವಣಾ ಪ್ರಚಾರ ಕೈಗೊಳ್ಳುವ ತಂತ್ರ ರೂಪಿಸಲಾಗಿದೆ. ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ತನು, ಮನ, ಧನ ಕೊಟ್ಟು  ಶಕ್ತಿ ಪ್ರದರ್ಶನ ತೋರಿಸಬೇಕಿದೆ. ಕಾಂಗ್ರೆಸ್‌, ಬಿಜೆಪಿಯವರು ಪಕ್ಷದ ಕಾರ್ಯಕರ್ತರನ್ನು ಖರೀದಿಸಲು ಸಾಧ್ಯವೇ ಇಲ್ಲ ಎಂದರು.

ತಾಲೂಕು ಅಧ್ಯಕ್ಷ ಆಲೂರುಮಲ್ಲು ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಶಾಸಕ ಮಹೇಶ್‌ ಇದ್ದು, ಉಳಿದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬೂತ್‌ಮಟ್ಟದಿಂದ ಸಂಘಟನೆ ಮಾಡಿದರೆ ಪಕ್ಷದ ಅಭ್ಯರ್ಥಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಬಹುದು ಎಂದರು.

ಸಭೆಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ರಾಜ್ಯ ಕಾರ್ಯದರ್ಶಿ ಮಾದೇಶ್‌ ಉಪ್ಪಾರ್‌, ಮೈಸೂರು ವಲಯ ಉಸ್ತು¤ವಾರಿ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಮಾದಪ್ಪ, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್‌, ಹಿರಿಯ ಮುಖಂಡ ಕೃಷ್ಣಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಪ್ರಕಾಶ್‌, ಜಿಲ್ಲಾ ಖಜಾಂಚಿ ರಮೇಶ್‌, ನಗರ ಘಟಕ ಅಧ್ಯಕ್ಷ ಚಿನ್ನಸ್ವಾಮಿ, ಕಣ್ಣೇಗಾಲ ಮಹದೇವನಾಯಕ, ಎಸ್‌.ಪಿ.ಮಹೇಶ್‌, ನಂಜುಂಡಸ್ವಾಮಿ, ಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.