ಕರ್ನಾಟಕದ ಗಣಿಗಾರಿಕೆ ದೇಶಕ್ಕೆ ಮಾದರಿ: ಡಾ| ರಾವ್
Team Udayavani, Mar 6, 2019, 10:41 AM IST
ಸಂಡೂರು: ಗಣಿಗಾರಿಕೆ ನಮ್ಮ ಪುರಾತನರಿಂದ ಬಂದಿರುವ ಉದ್ಯಮ. ಗಣಿಗಾರಿಕೆ ಹಾಗೂ ಮನುಷ್ಯನ ನಡುವೆ ಅವಿನಾಭಾವ ಸಂಬಂಧ ಹೊಂದಿದೆ ಎಂದು ಕೇಂದ್ರ ಗಣಿಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ| ಕೆ.ರಾಜೇಶ್ವರ ರಾವ್ ಅಭಿಪ್ರಾಯಪಟ್ಟರು.
ಪಟ್ಟಣದ ಸ್ಮಯೋರ್ ಗಣಿಕಂಪನಿ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಗಣಿ ಪರಿಸರ ಮತ್ತು ಪರಿಸರ ಸಪ್ತಾಹದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಪ್ತಾಹದ ಮುಖ್ಯ ಉದ್ದೇಶ ಪರಿಸರ ಸಂರಕ್ಷಣೆಯೊಂದಿಗೆ ಉತ್ತಮ ಗಣಿಗಾರಿಕೆ ಮಾಡುವುದಾಗಿದೆ. ಅಲ್ಲದೆ, ಎಂ.ವೈ. ಘೋರ್ಪಡೆಯವರು ಈ ಹಿಂದೆ ಸಾಮಾಜಿಕ ಮೌಲ್ಯಗಳೊಂದಿಗೆ ಗಣಿಗಾರಿಕೆ ನಡೆಸಿದ್ದು, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.
ಕರ್ನಾಟಕದ ಗಣಿಗಾರಿಕೆ ದೇಶಕ್ಕೆ ಮಾದರಿಯಾಗಿದೆ. ದೇಶದ ಖನಿಜ ಸಂಪತ್ತು ನಾಶವಾಗದಂತೆ ಮುಂದಿನ ಪೀಳಿಗೆಗೆ ಉಳಿಯುವ ಕಾರ್ಯ ಮಾಡಬೇಕು. ಪರಿಸರ ನಾಶ ಮಾಡಿದರೆ ನಮ್ಮ ನಾಶ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರ ಗಣಿ ನೀತಿಯಲ್ಲಿ ಹಲವಾರು ಬದಲಾವಣೆಗಳನ್ನು ಜಾರಿಗೆ ತರುವ ಮೂಲಕ ಪಾರದರ್ಶಕತೆ ಉಂಟು ಮಾಡಿದೆ. ದೇಶದ ಆರ್ಥಿಕ ವ್ಯವಸ್ಥೆಗೆ ಅತಿ ಹೆಚ್ಚು ಆದಾಯ ತರುವಂತಹ ಉದ್ಯಮವಾಗಿ ಬೆಳೆಯುತ್ತಿರುವುದು ಶುಭ ಸಂಕೇತವಾಗಿದೆ. ಮಾನವ ಸಂಪನ್ಮೂಲ ಬಳಕೆ,
ಸರಿಯಾದ ಲೆಕ್ಕಾಚಾರ, ಉತ್ತಮ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ತಿಳಿಸಿದರು.
ಇ-ಟೆಂಡರ್ ವ್ಯವಸ್ಥೆಯಲ್ಲಿ ಸಮಸ್ಯೆ ಇದೆ ಎಂದು ತಿಳಿದು ಬಂದಿದೆ. ಇದು ಜಾರಿಗೆ ಬಂದು ಕೇವಲ ಮೂರು ವರ್ಷಗಳಾಗಿವೆ. ಇದರಲ್ಲಿ ಬಹಳಷ್ಟು ಬದಲಾವಣೆಗಳನ್ನು ತರಲಾಗುತ್ತಿದೆ. ಅಲ್ಲದೆ, ಕೆಲವು ಗಣಿಗಾರಿಕೆ ನಿಂತಿವೆ. ಇದಕ್ಕೆ ತಾಂತ್ರಿಕ ತೊಂದರೆ, ಪರಿಸರ ಮಾಲಿನ್ಯದ ತೊಂದರೆ ಕಾರಣವಾಗಿದೆ.
ಯಾವುದೇ ಕಾರಣಕ್ಕೂ ಗಣಿಗಾರಿಕೆಯನ್ನು ನಾವು ಕಡೆಗಣಿಸುವಂತಿಲ್ಲ. ಹರಪ್ಪಾ, ಮೆಹಂಜೋದಾರ್ ದಿಂದಲೂ ಇದೆ. ಅದರಲ್ಲಿ ಭಾರತ ಜಗತ್ತಿನಲ್ಲಿಯೇ ಅತಿ ಹೆಚ್ಚು ಹಾಗೂ ಉತ್ತಮ ಗಣಿಗಾರಿಕೆಗೆ ಪ್ರಸಿದ್ಧಿಯಾಗಿದೆ. ಮುಂದಿನ ಆರ್ಥಿಕ ವರ್ಷಗಳಲ್ಲಿ ಗಣಿಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿಂದೆ 11 ಫೈಸ್ಟಾರ್ ಗಣಿಗಳು ಇದ್ದವು. 6 ಫೋರ್ ಸ್ಟಾರ್ ಇದ್ದವು. ಆದರೆ ಇಂದು ಹೆಚ್ಚಿವೆ. ದೇಶದಲ್ಲಿ 58ಕ್ಕೂ ಹೆಚ್ಚು ಕಂಪನಿಗಳು ಉತ್ತಮ ಗುಣಮಟ್ಟದ ಉತ್ಪಾದನೆಗೆ ನಾಂದಿಯಾಡಿವೆ. ಬೇಡಿಕೆಗೆ ತಕ್ಕಂತೆ ಉತ್ಪಾದನೆ ಮಾಡಿ ದೇಶದ ಅಭಿವೃದ್ಧಿಗೆ ನಾಂದಿಯಾಡೋಣ ಎಂದರು.
ಸ್ಮಯೋರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನಾಜೀಮ್ ಶೇಖ್, ಸ್ಮಯೋರ್ ಕಂಪನಿಯ ಛರನ್ ಎಸ್. ವೈ.ಘೋರ್ಪಡೆ, ಕಂಟ್ರೋಲರ್ ಆಫ್ ಮೈನ್ಸ್ ಜೆ.ಆರ್. ಚೌದರಿ, ರಿಜಿನಲ್ ಕಂಟ್ರೋಲರ್ ಆಫ್ ಮೈನ್ಸ್ ಜಿ.ಸಿ. ಮೀನಾ, ಎಂ.ಡಿ. ಅಬ್ದುಲ್ ಸಲೀಂ, ಅರುಣ್ಕುಮಾರ್, ವಿ.ಜಯಪ್ರಕಾಶ್, ಶ್ರೀಧರ ಹೆಗಡೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್