ಈಗ್ಲೇ ಬತ್ತುತ್ತಿದೆ ತುಂಗೆ; ಮುಂದೆ ಹ್ಯಾಂಗೆ?


Team Udayavani, Mar 6, 2019, 11:36 AM IST

shiv.jpg

ತೀರ್ಥಹಳ್ಳಿ: ಮಲೆನಾಡಿನಾದ್ಯಂತ ದಿನೇ ದಿನೇ ಬಿಸಿಲಿನ ಜಳ ಹೆಚ್ಚಾಗುತ್ತಿದೆ. ಮಲೆನಾಡಿನ ಜೀವನದಿ ತುಂಗೆಯ ಒಳ ಹರಿವು ಕ್ಷೀಣಿಸುತ್ತಿದೆ. ಮುಂದಿನ ದಿನಗಳಲ್ಲಿ ತುಂಗೆಯ ಮಡಿಲು ಬರಿದಾಗುವ ಲಕ್ಷಣ ಕಂಡು ಬಂದಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಲಕ್ಷಣಗಳ ಬಗ್ಗೆ ಮಲೆನಾಡಿಗರು ಆತಂಕ ಪಡುವಂತಾಗಿದೆ.

ತಾಲೂಕಿನಾದ್ಯಂತ ವಾತಾವರಣದಲ್ಲಿ ವೈಪರೀತ್ಯ ಕಂಡು ಬಂದಿದ್ದು, ಮುಂಜಾನೆ ಇಬ್ಬನಿ ಹೆಚ್ಚಾಗಿ ನಂತರ ಬಿಸಿಲಿನ ಕಾವು ಏರುತ್ತಿದೆ. ಪ್ರತೀ ವರ್ಷ ಮೇ ಅಂತ್ಯದಲ್ಲಿ ಕಾಣುವಂತಿದ್ದ ವಾತಾವರಣ ಈ ಬಾರೀ ಮಾರ್ಚ್‌ ಮೊದಲ ವಾರದಲ್ಲಿಯೇ ಕಂಡು ಬರುವಂತಾಗಿದೆ. ಮಲೆನಾಡಿನ ಬರಗಾಲದ ಮುನ್ಸೂಚನೆಯಂತೆ ಗೋಚರಿಸುವಂತಿದೆ. ನದಿ ಪ್ರದೇಶಗಳಲ್ಲಿ ಒಳ ಹರಿವು ಇಲ್ಲದೇ ತುಂಗಾ ನದಿ ಹಳ್ಳದಂತೆ ಗೋಚರಿಸುತ್ತಿದೆ. 

ತಾಲೂಕಿನ ಪ್ರಮುಖ ನದಿಗಳಾದ ತುಂಗೆ ಹಾಗೂ ಮಾಲತಿಯಲ್ಲಿ ಪ್ರತೀ ವರ್ಷ ಬೇಸಿಗೆ ಸಮಯದಲ್ಲಿ ನೀರಿನ ಪ್ರಮಾಣ ಎಷ್ಟೇ ಕಡಿಮೆ ಇದ್ದರೂ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ. ಆದರೆ ಈ ಬಾರಿ ಮಲೆನಾಡಿನ ಪರಿಸ್ಥಿತಿ ಭಿನ್ನವಾಗಿದೆ. ಮಲೆನಾಡು
ಭಾಗದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದು ಖಚಿತ ಎಂಬ ವಾತವರಣದ ಮುನ್ಸೂಚನೆಯ ಬಗ್ಗೆ ರೈತರು ಚಿಂತಿಸುವಂತಾಗಿದೆ.
 
ತುಂಗೆಯ ಮಡಿಲು ಬರಿದಾಗಲು ಕಾರಣ ಏನು ಎಂಬುದರ ಬಗ್ಗೆ ಮಲೆನಾಡಿಗರೇ ಯೋಚಿಸಬೇಕಾಗಿದೆ. ಮಲೆನಾಡಿನಲ್ಲಿ ಕಡಿಮೆಯಾಗುತ್ತಿರುವ ಮಳೆಯ ಪ್ರಮಾಣ, ಅಭಿವೃದ್ಧಿಯ ಹೆಸರಿನಲ್ಲಿ ಮಾಡುತ್ತಿರುವ ನೈಸರ್ಗಿಕ ಕಾಡುಗಳ ಮಾರಣ ಹೋಮ, ತುಂಗೆ ಹಾಗೂ ಮಾಲತಿ ನದಿಯ ದಡಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ನೈಸರ್ಗಿಕ ಅರಣ್ಯಕ್ಕೆ ಬೆಂಕಿ ಇಟ್ಟು ಲಾಭ ಮಾಡುವ ದೃಷ್ಟಿಯಿಂದ ಬೆಳೆಸುತ್ತಿರುವ ಅಕೇಶಿಯ ಹಾಗೂ ನೀಲಗಿರಿ ಪ್ಲಾಂಟೇಶನ್‌ಗಳು ಮಲೆನಾಡಿನ ಭೂ ಗರ್ಭದ ಅಂತರ್ಜಲವನ್ನೇ ಬರಿದಾಗಿಸಿದೆ ಎಂಬುದು ತಜ್ಞರ ಅನಿಸಿಕೆಯಾಗಿದೆ. 

ಇನ್ನೊಂದೆಡೆ ಸುಪ್ರೀಂ ಕೋರ್ಟ್‌ ಅಕೇಶಿಯಾ ಬೆಳೆಯಲು ನಿಷೇಧ ಹೇರಿದ್ದರೂ ಮುಂದುವರಿದಿರುವ ನಾಟಾ ವ್ಯವಹಾರವು ದುಡ್ಡು ಮಾಡುವ ದಂಧೆಯಾಗಿದೆ. ಜೊತೆಗೆ ಅಗತ್ಯಕ್ಕಿಂತ ಅತಿಯಾಗಿ ಪಂಪ್‌ಸೆಟ್‌ಗಳ ಬಳಕೆಯಿಂದ ನದಿಯಿಂದ ನೀರೆತ್ತುತ್ತಿರುವುದು ಹೆಚ್ಚಾಗುತ್ತಿದೆ ಎಂದು ಪರಿಸರವಾದಿಗಳ ಅಭಿಪ್ರಾಯ ಕೇಳಿಬಂದಿದೆ.
 
ಒಟ್ಟಾರೆ ಮಲೆನಾಡಿನಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡು ಬರಗಾಲದ ಮುನ್ಸೂಚನೆ ಕಂಡುಬರುತ್ತಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚಿಂತಿಸುವ ಅವಶ್ಯಕತೆಯಿದೆ. ಮಲೆನಾಡಿಗರು ಸಹ ನೀರಿನ
ಉಪಯೋಗದ ಬಗ್ಗೆ ಜಾಗೃತಿ ವಹಿಸಿ ಬಳಕೆ ಮಾಡಬೇಕಾದ ತುರ್ತು ಅಗತ್ಯವಿದೆ.

ತೀರ್ಥಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಕಳೆದ ಬಾರಿ ಕೆಲವು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಪ್ರಸ್ತುತ ಪಟ್ಟಣ ವ್ಯಾಪ್ತಿಯಲ್ಲಿ 24×7 ಕುಡಿಯುವ ನೀರಿನ ಯೋಜನೆ ಕಾರ್ಯರೂಪದಲ್ಲಿದೆ. ಆದರೂ ಪಟ್ಟಣದ ನಾಗರಿಕರು ನೀರನ್ನು ಹೆಚ್ಚು ವ್ಯರ್ಥ ಮಾಡದೇ ಉಪಯೋಗಿಸುವ ಬಗ್ಗೆ ಜಾಗೃತಿ ವಹಿಸಬೇಕಾಗಿದೆ.
 ಸಂದೇಶ್‌ ಜವಳಿ, ಪಪಂ ಅಧ್ಯಕ್ಷ

ತಾಲ್ಲೂಕಿನ ಗ್ರಾಪಂ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಇಲ್ಲಿಯ ತನಕ ಯಾವುದೇ ದೂರು ಕೇಳಿ ಬಂದಿಲ್ಲ. ಈಗಾಗಲೇ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಳಕೆ ಹಾಗೂ ವ್ಯರ್ಥ ಮಾಡುವ ವಿಚಾರದಲ್ಲಿ ಪಿಡಿಒ ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಚರ್ಚಿಸಲಾಗಿದೆ.
 ಧನರಾಜ್‌, ತಾಪಂ ಕಾರ್ಯ ನಿರ್ವಹಣಾಧಿಕಾರಿ

ರಾಂಚಂದ್ರ ಕೊಪ್ಪಲು

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.