ಚುನಾವಣೆಗೂ ಮಠದ ಭೇಟಿಗೂ ಸಂಬಂಧವಿಲ್ಲ


Team Udayavani, Mar 7, 2019, 10:31 AM IST

chikk-1.jpg

ಶೃಂಗೇರಿ: ಲೋಕಸಭಾ ಚುನಾವಣೆಗೂ ಶೃಂಗೇರಿ ಪೀಠಕ್ಕೆ ಆಗಮಿಸುತ್ತಿರುವುದಕ್ಕೂ ಸಂಬಂಧವಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಇಲ್ಲಿಗೆ ಆಗಮಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು.

ಶ್ರೀ ಶಾರದಾ ಪೀಠಕ್ಕೆ ಆಗಮಿಸುವ ಮುನ್ನ ಬುಧವಾರ ಕೊರಡಕಲ್ಲಿನ ಹೆಲಿಪ್ಯಾಡ್‌ನ‌ಲ್ಲಿ ಮಾತನಾಡಿದ ಅವರು, ನಿಖೀಲ್‌ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಹಿನ್ನೆಲೆಯಲ್ಲಿ ಶಾರದಾಪೀಠಕ್ಕೆ ಬಂದಿಲ್ಲ. ಮೊದಲಿನಿಂದಲೂ ನಮ್ಮ ಕುಟುಂಬ ಶೃಂಗೇರಿಗೆ ಯಾವಾಗಲೂ ಆಗಮಿಸುತ್ತಿದೆ ಎಂದರು.

ಶ್ರೀಮಠದ ಭಕ್ತರಾಗಿರುವ ನಮ್ಮ ಕುಟುಂಬ ಮಠಕ್ಕೆ ಬರುತ್ತಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ನಾನು ಅಧಿಕಾರದಲ್ಲಿ ಇಲ್ಲದಿದ್ದಾಗಲೂ ಇಲ್ಲಿಗೆ ಬರುತ್ತಿದ್ದೆ. ಜಗದ್ಗುರುಗಳ ಹಾಗೂ ದೇವಿಯ ಆಶೀರ್ವಾದ ಪಡೆಯಲು ಶ್ರೀಮಠಕ್ಕೆ ಆಗಮಿಸಿರುವುದಾಗಿ ಹೇಳಿದರು. 

ರೈತರ ಸಾಲ ಮನ್ನಾ ವಿಷಯದಲ್ಲಿ ಪ್ರಧಾನಿ ಮೋದಿಯವರು ಸಾಲ ಮನ್ನಾ ಮಾಡುವುದು ಪಾಪದ ಕೃತ್ಯ ಎಂದು ಹೇಳಿದ್ದರು ಆದರೆ ಈಗ ಚುನಾವಣೆ ಎದುರಾಗೋ ಸಂದರ್ಭದಲ್ಲಿ ರೈತರ ಖಾತೆಗೆ 6 ಸಾವಿರ ರೂ. ಜಮಾ ಮಾಡುವುದಾಗಿ ಹೇಳುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ ಎಂದರು.
 
 ರಾಜ್ಯ ಸರಕಾರ ರೈತರ ಹಾಗೂ ಜನ ಸಾಮಾನ್ಯರ ಪರವಾಗಿ ಆಡಳಿತ ನೀಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಕಳೆದ ಐದು ವರ್ಷದಲ್ಲಿ ಏನು ಕೊಟ್ಟಿದ್ದಾರೆ ಎಂಬುದು ಜನತೆ ತೀರ್ಮಾನ ಮಾಡಲಿ. ರೈತರ ಖಾತೆಗೆ ಕೇವಲ ಅಲ್ಪ ಮೊತ್ತದ ಹಣ ನೀಡಿ ಅದನ್ನೇ ದೊಡ್ಡ ಸಾಧನೆ
ಎಂಬಂತೆ ಮಾತನಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ರೈತರ 42 ಸಾವಿರ ಕೋಟಿ ರೂ. ಮನ್ನಾ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ. 

ರಿಮೋಟ್‌ ಕಂಟ್ರೋಲ್‌ ಮುಖ್ಯಮಂತ್ರಿ ಎಂದು ಮೋದಿ ವ್ಯಾಖ್ಯಾನಿಸಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಅನೇಕ ಮುಖಂಡರ ಸಲಹೆ, ಸಹಕಾರ ಪಡೆಯುತ್ತಿದ್ದೇನೆ. ಅದನ್ನು ರಿಮೋಟ್‌ ಕಂಟ್ರೋಲ್‌ ಎಂದು ಹೇಳುವುದು ಸರಿಯಲ್ಲ. ದೇವೇಗೌಡ ಕುಟುಂಬ ಗೌಡ ಜನಾಂಗವನ್ನು ಜಿಪಿಎ ಎಂದು ಭಾವಿಸಿದೆ ಎಂಬ ಶಾಸಕ ಪ್ರೀತಂಗೌಡ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಈ ರೀತಿ ಊಹೆ ಮಾಡಿಕೊಂಡರೆ ನಾನೇನು ಮಾಡಲಿ. ಅವರ ಮಾತು ಹುಡುಗಾಟಿಕೆಯದ್ದು. ಜನರ ಪ್ರೀತಿ ವಿಶ್ವಾಸದಿಂದ ನಮ್ಮ ಕುಟುಂಬ ರಾಜಕೀಯದಲ್ಲಿದ್ದು,ಜನರ ಸೇವೆ ಮಾಡುವ ಅವಕಾಶ ದೊರಕಿದೆ ಎಂದರು.

ಮುಖ್ಯಮಂತ್ರಿಗಳೊಂದಿಗೆ ಮಾಜಿ ಪ್ರದಾನಿ ಎಚ್‌ .ಡಿ.ದೇವೇಗೌಡ, ಚನ್ನಮ್ಮ, ಅನಿತಾಕುಮಾರಸ್ವಾಮಿ, ನಿಖೀಲ್‌ಗೌಡ ಆಗಮಿಸಿದ್ದರು. ಮುಖ್ಯಮಂತ್ರಿಗಳನ್ನು  ಹೆಲಿಪ್ಯಾಡಿನಲ್ಲಿ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಎಚ್‌.ಜಿ.ವೆಂಕಟೇಶ್‌, ಬಿ.ಬಿ.ನಿಂಗಯ್ಯ, ಜಿಲ್ಲಾಧಿಕಾರಿ ಡಾ|ಗೌತಮ್‌ ಮತ್ತಿತರರು ಇದ್ದರು.

ಶ್ರೀ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಶ್ರೀಮಠದ ಆಡಳಿತಾಧಿಕಾರಿ ಡಾ|ಗೌರಿಶಂಕರ್‌ ಪೂರ್ಣಕುಂಭ ಸ್ವಾಗತ ನೀಡಿದರು. ಗುರುವಾರ ಮುಖ್ಯಮಂತ್ರಿಗಳ ಕುಟುಂಬ ಶ್ರೀಮಠದಲ್ಲಿ ವೀಶೇಷ ಪೂಜೆ ನೆರವೇರಿಸಲಿದ್ದು, ನಂತರ ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ
ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ.

ರೈತರ ಸಾಲ ಮನ್ನಾ ವಿಷಯದಲ್ಲಿ ಪ್ರಧಾನಿ ಮೋದಿಯವರು ಸಾಲ ಮನ್ನಾ ಮಾಡುವುದು ಪಾಪದ ಕೃತ್ಯ ಎಂದು ಹೇಳಿದ್ದರು
ಆದರೆ ಈಗ ಚುನಾವಣೆ ಎದುರಾಗೋ ಸಂದರ್ಭದಲ್ಲಿ ರೈತರ ಖಾತೆಗೆ 6 ಸಾವಿರ ರೂ. ಜಮಾ ಮಾಡುವುದಾಗಿ ಹೇಳುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ
 ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತಿ

ಟಾಪ್ ನ್ಯೂಸ್

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.