ಗರಿಗೆದರಿದ ವಿಮಾನ ನಿಲ್ದಾಣ ಕನಸು


Team Udayavani, Mar 7, 2019, 11:18 AM IST

7-mach-18.jpg

ಭಟ್ಕಳ: ಉತ್ತರ ಕನ್ನಡದಲ್ಲಿ ವಿಮಾನ ನಿಲ್ದಾಣ ಬೇಕು ಎನ್ನುವ ಕನಸು ಇಂದು ನಿನ್ನೆಯದಲ್ಲ. ಈ ಹಿಂದೆ ಬೈಂದೂರಿನ ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಪ್ರಸ್ತಾವನೆ ಇತ್ತಾದರೂ ಅದು ಕೈಗೂಡದೇ ಇರುವುದರಿಂದ ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡದ ಜನತೆ ತೀವ್ರ ಅಸಾಮಾಧಾನಗೊಂಡಿದ್ದರು. ಕಾರವಾರದ ನೌಕಾನೆಲೆ ಬಳಸಿ ನಾಗರಿಕ ವಿಮಾನಯಾನ ಆರಂಭಿಸುವ ಕುರಿತು ಬೇಡಿಕೆ ಇದೆಯಾದರೂ ಇನ್ನೂ ತನಕ ಯಾವುದೂ ಕಾರ್ಯಗತವಾಗದೇ ಇರುವುದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.

ಪಟ್ಟಣವು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ ಮಧ್ಯವರ್ತಿ ಪ್ರದೇಶವಾಗಿದ್ದು, ಇಲ್ಲಿ ವಿಮಾನ ನಿಲ್ದಾಣ ಆರಂಭಿಸಿದರೆ ಉಭಯ ಜಿಲ್ಲೆಯ ಜನತೆಗೂ ಅನುಕೂಲವಾಗುತ್ತದೆ ಎನ್ನುವ ಕೂಗು ಬಹಳ ವರ್ಷಗಳಿಂದ ಕೇಳಿ ಬಂದಿದೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇರುವುದರಿಂದ ಚಾಲನೆ ದೊರೆತಿಲ್ಲ. ಆದರೆ ಈಗ ಕಾರವಾರದ ಸಂಜಯ ರೇವಣ್‌ಕರ್‌ ಅವರು ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸುವ ಮೂಲಕ ಉಭಯ ಜಿಲ್ಲೆಯವರ ವಿಮಾನ ನಿಲ್ದಾಣದ ಕನಸಿಗೆ ಮತ್ತೆ ಜೀವ ತುಂಬಿದ್ದಾರೆ.

ಸರಕಾರಕ್ಕೆ ನೋಟಿಸ್‌ ಜಾರಿ
ಉಚ್ಚ ನ್ಯಾಯಾಲಯದಲ್ಲಿ ಹಿರಿಯ ನ್ಯಾಯವಾದಿ ಆರ್‌.ಜಿ. ಕೊಲ್ಲೆ ಅವರು ವಾದ ಮಂಡಿಸಿ ಪ್ರವಾಸೋದ್ಯಮ ತಾಣವಾಗಿರುವ ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿ ಹೊಂದಲು ವಿಮಾನ ನಿಲ್ದಾಣ ಅನಿವಾರ್ಯವಾಗಿದೆ ಎಂದಿದ್ದಾರೆ. ಭಟ್ಕಳದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಿಸಲೂ ಅವರು ಕೋರಿಕೆ ಸಲ್ಲಿಸಿದ್ದರಿಂದ ಪರಿಶೀಲನೆಗೆ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಉಚ್ಚ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ. 

ವರದಾನವಾಗಿರುವ ಉಡಾನ್‌ ಯೋಜನೆ
ಭಾರತ ಸರಕಾರದ ಉಡಾನ್‌ ಯೋಜನೆಯು ನಾಗರಿಕ ವಿಮಾನ ಸೇವೆ ಕಲ್ಪಿಸಲು ಒಂದು ವರದಾನವಾಗಿದ್ದು, ದೇಶದ ಪ್ರತಿಯೊಬ್ಬ ನಾಗರಿಕರಿಗೂ ಈ ಸೌಲಭ್ಯ ದೊರೆಯುವಂತೆ ಮಾಡುವುದೇ ಇದರ ಉದ್ದೇಶವಾಗಿದೆ. ದೇಶವ ಒಬ್ಬ ಸಾಮಾನ್ಯ ನಾಗರಿಕನೂ ಕೂಡಾ ವಿಮಾನ ಸೇವೆ ಪಡೆಯುವಂತಾಗಬೇಕು, ಹೆಚ್ಚು ಹೆಚ್ಚು ಗ್ರಾಮೀಣ ಭಾಗಗಳು ಇದರಲ್ಲಿ ಸೇರಿಸಬೇಕು ಎನ್ನುವುದು ಉಡಾನ್‌ ಯೋಜನೆ ಮುಖ್ಯ ಉದ್ದೇಶವಾಗಿದೆ. ವಿಮಾನ ನಿಲ್ದಾಣಕ್ಕೆ ಕನಿಷ್ಠ ರನ್‌ ವೇ 6000 ಅಡಿ (1829 ಮೀ) ಉದ್ದವು ಸುಮಾರು 2,00,000 ಎಲ್‌.ಬಿ.ಎಸ್‌(90,728 ಕೆ.ಜಿ) ತೂಕದ ವಿಮಾನಗಳಿಗೆ ಸಾಕಾಗುತ್ತದೆ. ಇದಕ್ಕೂ ದೊಡ್ಡ ಹಾಗೂ ಅಗಲವಿರುವ ವಿಮಾನಗಳಿಗೂ ಕೂಡಾ 8000 ಅಡಿ (2438 ಮೀ) ರನ್‌ವೇ ಸಾಕಾಗುತ್ತದೆ ಹಾಗೂ ತೃಪ್ತಿದಾಯಕವಾಗಿತ್ತದೆ.

ಮುಂಡಳ್ಳಿ ಗುಡ್ಡ ಪ್ರಾಶಸ್ತ್ಯ  ಜಾಗಾ
ತಾಲೂಕಿನಲ್ಲಿ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ಮಾಡಲು ಮುಂಡಳ್ಳಿಯ ಗುಡ್ಡ ಪ್ರಶಸ್ತ್ಯ ಸ್ಥಳವಾಗಿದ್ದು, ಸುಮಾರು 1000 ಎಕರೆ ಪ್ರದೇಶ ಒಂದೇ ಕಡೆಯಲ್ಲಿ ದೊರೆಯುವುದಲ್ಲದೇ ಇದು ರನ್‌ ವೇ ನಿರ್ಮಾಣಕ್ಕೆ ಕೂಡಾ ಅತ್ಯಂತ ಸೂಕ್ತವಾಗಿದೆ. ಸಮುದ್ರದಿಂದ ಎತ್ತರದಲ್ಲಿದ್ದು, ಸುತ್ತಲೂ ಹಸಿರು ಕೂಡಿರುವುದರಿಂದ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣಕ್ಕೆ ಅತ್ಯಂತ ಸೂಕ್ತ ಸ್ಥಳ ಎನ್ನುವುದು ಮಾತ್ರ ಸತ್ಯ.

„ಆರ್‌.ಕೆ. ಭಟ್ಕಳ 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.