ಕೊಡವ ಭಾಷಿಕ ಸಮುದಾಯಗಳ ಕೂಟ  ಮನವಿ


Team Udayavani, Mar 8, 2019, 1:00 AM IST

kodava-bashika.jpg

ಮಡಿಕೇರಿ: ಕೊಡವ ಭಾಷೆ ಮಾತನಾಡುವ 20 ಭಾಷಿಕ ಸಮುದಾಯ ಬಾಂಧವರ ಅಭ್ಯುದಯಕ್ಕಾಗಿ ಪೂರ್ಣ ಪ್ರಮಾಣದ ತಜ್ಞರ ಸಮಿತಿಮತ್ತು ಸತ್ಯಶೋಧನಾ ಸಮಿತಿಯನ್ನು ರಚಿಸಿ ಅಗತ್ಯ ನೆರವನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾ ಅವರಿಗೆ ಮನ ಸಲ್ಲಿಸಲಾಯಿತು.

ಇತ್ತೀಚೆಗೆ ಬಸವನಹಳ್ಳಿಗೆ ಮುಖ್ಯ ಮಂತ್ರಿಗಳು ಭೇಟಿ ನೀಡಿದ್ದ ಸಂದರ್ಭ ಕೂಟದ ಸಂಚಾಲಕ ಡಾ.ಮೇಚೀರ ಸುಭಾಷ್‌ ನಾಣಯ್ಯ ಹಾಗೂ ಪದಾಧಿಕಾರಿಗಳು ಕೊಡವ ಭಾಷೆ ಮಾತನಾಡುವ 20 ಭಾಷಿಕ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಕೊಡವ ಭಾಷಿಕ ಮೂಲನಿವಾಸಿಗಳು ಪೂರ್ವಿಕರ ಕಾಲದಿಂದಲೇ ಪಕೃತಿಯನ್ನು ಆರಾಧ್ಯದೈವವೆಂದು ನಂಬಿ ಅನಾನು ಭಾವ ಸಂಬಂಧ ಹೊಂದಿಕೊಂಡು ಬಂದಿ ರುವುದು ಇತಿಹಾಸದಿಂದ ತಿಳಿಯುತ್ತದೆ. ಈ ಭೂಪ್ರದೇಶವನ್ನು ಆಳಿದ ಅದೇಷ್ಟೋ ರಾಜಮಹಾರಾಜರು, ಬ್ರಿಟಿಷರು, ಕೃಷಿಗೆ ಒತ್ತು ಕೊಟ್ಟು ಇಲ್ಲಿನ ಜನಸಮುದಾಯಕ್ಕೆ ಜಮ್ಮ, ಉಂಬಳಿ ಜಾಗ, ಭೂಮಿ ಕೊಟ್ಟು ಜೀವನೋಪಾಯಕ್ಕೆ ನೆರವಾಗಿದ್ದರು. ಆದರೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಜೀವನ‌ಮಟ್ಟ ಸುಧಾರಣೆ ಕಾಣದಿರುವುದು ವಿಷಾದನೀಯ.

ಕೊಡಗು ವನಸಂಪತ್ತಿನಿಂದ ಕಂಗೊಳಿ  ಸುತ್ತಿದ್ದು, ಅದರ ಪೋಷಣೆ, ಪಾಲನೆ ಈ ನಾಡಿನ ಮೂಲ ನಿವಾಸಿಗಳಿಗೆ ಹೆಮ್ಮೆಯ ವಿಷಯ. 

ಆಧುನಿಕತೆಯ ಭರಾಟೆಯಲ್ಲಿ ಪರಕೀ ಯರ ಅನ್ಯಮನಸ್ಸಿನ  ವಿಕೃತ ಧಾಳಿಯಿಂದ ಅವೆಷ್ಟೋ ಭೂಪ್ರದೇಶ ಹಾನಿಗೊಂಡಿದೆ. 

ಆದರೂ ಇವೆಲ್ಲವನ್ನು ಸಹಿಸಿಕೊಂಡು ಕೊಡವ ಭಾಷೆ ಮಾತನಾಡುವ ಅಮ್ಮಕೊಡವ, ಹೆಗ್ಗಡೆ, ಐರಿ, ಕೊಯವ, ಕೆಂಬಟ್ಟಿ, ಕುಡಿಯ, ಪಣಿಕ, ನಾಂದ, ನಾಯರ್‌, ಕೋಲೆಯ, ಗೊಲ್ಲ, ಮಡಿವಾಳ, ಮಲಿಯ, ಕಣಿಯ, ಮೇದ, ಬಣ್ಣ, ಕಾಪಾಳ, ಬೂಣೆಬಟ್ಟ, ಬಾಣಿಯ, ಮಾರಂಗಿ ಸಮುದಾಯ ಕೊಡಗಿನಲ್ಲಿ ಜೀವನ ಸಾಗಿಸುತ್ತಿದೆ.

1974-75 ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಲ್‌.ಜಿ. ಹಾವನೂರು ಅವರ ಮುತುವರ್ಜಿಯಿಂದ ಪ್ರಪ್ರಥಮವಾಗಿ ಸಮಗ್ರ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಯಿತು. ನಂತರ ಬಂದ ಯಾವುದೇ ಆಯೋಗ ಕೊಡಗಿನ ಅತೀ ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ನಿರೀಕ್ಷಿತ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ನ್ಯಾಯ ಒದಗಿಸದೆ ಎಡವಿರುವುದು ವಿಷಾದನೀಯವೆಂದು ಸುಭಾಷ್‌ ನಾಣಯ್ಯ ಮುಖ್ಯಮಂತ್ರಿಗಳ ಗಮನ ಸೆಳೆದರು.

ಬೇಡಿಕೆಗಳು
ಸುಮಾರು 82 ಸಾವಿರ ಜನಸಂಖ್ಯೆಯಿರುವ ಸಮುದಾಯಕ್ಕೆ ಸಮುದಾಯ ಭವನವನ್ನು ಮಂಜೂರು ಮಾಡಿ ಕನಿಷ್ಠ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯದ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯ ನೀಡಬೇಕು, ಸರಕಾರದ ವತಿಯಿಂದ ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿ ಪ್ರಕ್ರಿಯೆ ಆರಂಭಿಸಬೇಕು. 

ಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಭಾಷೆಯನ್ನು ಮಾತನಾಡುವ ಸಮುದಾಯಗಳನ್ನು (ಹಿಂದುಳಿದ ವರ್ಗ, ಪ.ಜಾ, ಪ.ಪಂಗಡ) ಭಾಷಾ ಅಲ್ಪಸಂಖ್ಯಾಕರೆಂದು ಘೋಷಿಸಬೇಕು, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಜವಾಹರ್‌ ನವೋದಯ ಶಾಲೆ ಮಾದರಿಯಲ್ಲಿ ವಸತಿ ಶಾಲೆಯನ್ನು ನಿರ್ಮಿಸಿ ಶಿಕ್ಷಣ ಸೌಲಭ್ಯ ಒದಗಿಸಬೇಂಕೆಬ ಬೇಡಿಕೆಯನ್ನು   ಕೊಡವ ಭಾಷಿಕ ಸಮುದಾಯಗಳ ಕೂಟ ಇಟ್ಟಿವೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.