ಶ್ರೀ ಶ್ರೀ ಬದಲು ತಟಸ್ಥ ಸಂಧಾನಕಾರ : ಅಸಾದುದ್ದೀನ್ ಓವೈಸಿ ಆಗ್ರಹ
Team Udayavani, Mar 8, 2019, 10:47 AM IST
ಹೊಸದಿಲ್ಲಿ : ದಶಕಗಳಿಂದ ನನೆಗುದಿಗೆ ಬಿದ್ದಿರುವ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದವನ್ನು ಸಂಧಾನದ ಮೂಲಕ ಬಗೆ ಹರಿಸುವ ಯತ್ನದಲ್ಲಿ ಸುಪ್ರೀಂ ಕೋರ್ಟ್ ಇಂದು ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿ ಶಂಕರ್ ಅವರನ್ನು ಓರ್ವ ಸಂಧಾನಕಾರರನ್ನಾಗಿ ನೇಮಿಸಿರುವುದಕ್ಕೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶ್ರೀ ಶ್ರೀ ರವಿಶಂಕರ್ ಬದಲು ಸುಪ್ರೀಂ ಕೋರ್ಟ್ ತಟಸ್ಥ ಸಂಧಾನಕಾರರೋರ್ವರನ್ನು ನೇಮಿಸಿದ್ದರೆ ಒಳ್ಳೆಯದಿತ್ತು ಎಂದು ಓವೈಸಿ ಹೇಳಿದ್ದಾರೆ.
ರವಿಶಂಕರ್ ಅವರು ಈ ಹಿಂದೆ ಅಯೋಧ್ಯೆ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವ ಯತ್ನದಲ್ಲಿ “ಮುಸ್ಲಿಮರು ಆಯೋಧ್ಯೆ ಮೇಲಿನ ಹಕ್ಕನ್ನು ಬಿಟ್ಟುಕೊಡದಿದ್ದರೆ ಭಾರತ ಇನ್ನೊಂದು ಸಿರಿಯ ಆದೀತು’ ಎಂದು ಹೇಳಿದ್ದರು ಎಂಬುದನ್ನು ನೆನಪಿಸಿಕೊಟ್ಟಿರುವ ಓವೈಸಿ, ಸುಪ್ರೀಂ ಕೋರ್ಟ್ ರವಿಶಂಕರ್ ಬದಲು ತಟಸ್ಥ ಸಂಧಾನಕಾರನನ್ನು ನೇಮಿಸಬೇಕು ಎಂದು ಎಎನ್ಐ ಸುದ್ದಿ ಸಂಸ್ಥೆ ಜತೆಗೆ ಮಾತನಾಡುತ್ತಾ ಹೇಳಿದರು.
ಸುಪ್ರೀಂ ಕೋರ್ಟ್ ಇಂದು ಮೂವರು ಸದಸ್ಯರನ್ನು ಒಳಗೊಂಡ ಅಯೋಧ್ಯೆ ಸಂಧಾನ ಮಂಡಳಿಗೆ ಶ್ರೀ ಶ್ರೀ ರವಿಶಂಕರ್, ಹಿರಿಯ ವಕೀಲ ಶ್ರೀರಾಮ್ ಪಂಚು ಮತ್ತು ಮಂಡಳಿಯ ನೇತೃತ್ವ ವಹಿಸುವ ಎಫ್ ಎಂ ಐ ಕಲೀಫುಲ್ಲಾ ಅವರನ್ನು ನೇಮಿಸಿತ್ತು.
ನಾವೆಲ್ಲರೂ ಒಗ್ಗೂಡಿ ಸಾಮಾಜಿಕ ಸಾಮರಸ್ಯವನ್ನು ಕಾಯ್ದುಕೊಂಡು ದೀರ್ಘಕಾಲದಿಂದ ಬಾಕಿ ಉಳಿದಿರುವ ಅಯೋಧ್ಯೆ ಭೂವಿವಾದವನ್ನು ಸಂತಸದಿಂದ ಬಗೆ ಹರಿಸುವತ್ತ ಸಾಗಬೇಕು ಎಂದು ಶ್ರೀ ಶ್ರೀ ರವಿಶಂಕರ್ ಅವರಿಂದ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ