ವಾಯುಪಡೆ, ಮೋದಿ ಸರಕಾರಕ್ಕೆ ಆರೆಸ್ಸೆಸ್ ಮೆಚ್ಚುಗೆ
Team Udayavani, Mar 9, 2019, 12:30 AM IST
ಗ್ವಾಲಿಯರ್: ಪಾಕಿಸ್ಥಾನದಲ್ಲಿ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದಕ್ಕೆ ವಾಯುಪಡೆ ಮತ್ತು ನರೇಂದ್ರ ಮೋದಿ ಸರಕಾರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೊಗಳಿದೆ. ಈ ಸಂಬಂಧ ಗ್ವಾಲಿಯರ್ನಲ್ಲಿ ನಡೆಯುತ್ತಿರುವ ಅಖೀಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ನಿಲುವಳಿ ಕೈಗೊಳ್ಳಲಾಗಿದೆ. ಪಾಕಿಸ್ಥಾನದಲ್ಲಿ ಸಿಕ್ಕಿಬಿದ್ದು, ಭಾರತಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ಗೆ ಗೌರವಾರ್ಥವಾಗಿ ಈ ನಿಲುವಳಿಗೆ ಅಭಿನಂದನ ಪ್ರಸ್ತಾವ ಎಂದು ಹೆಸರಿಸಲಾಗಿದೆ. ದೇಶವಿರೋಧಿ ಶಕ್ತಿಗಳ ವಿರುದ್ಧ ಶ್ರಮಿಸಲು ಸರಕಾರ ತೆಗೆದುಕೊಂಡ ನಿರ್ಧಾರ ಸರಿಯಾಗಿದೆ. ಭಾರತೀಯರು ಇಂಥ ಶಕ್ತಿಗಳ ಬಗ್ಗೆ ಎಚ್ಚರಿಕೆ ಹೊಂದಿರಬೇಕು ಎಂದು ಆರ್ಎಸ್ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಮನಮೋಹನ ವೈದ್ಯ ಹೇಳಿದ್ದಾರೆ.
ಹುತಾತ್ಮರಾದ ಯೋಧರಿಗೆ ಸಂತಾಪವನ್ನೂ ಈ ಸಭೆಯಲ್ಲಿ ಸೂಚಿಸಲಾಗಿದ್ದು, ಭಾರತದ ಸಹಿಷ್ಣುತೆಯನ್ನು ಬಲಹೀನತೆ ಎಂದು ಪರಿಗಣಿಸಬಾರದು ಎಂದು ವೈದ್ಯ ಹೇಳಿದ್ದಾರೆ. ಪ್ರತಿನಿಧಿ ಸಭೆಯಲ್ಲಿ ಸುಮಾರು 1400 ಸದಸ್ಯರು ಭಾಗವಹಿಸಿದ್ದಾರೆ. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!