ಉಡುಪಿ ಜಿಲ್ಲೆ: 1,111 ಬೂತ್‌ಗಳು, 9.9 ಲಕ್ಷ ಮತದಾರರು


Team Udayavani, Mar 9, 2019, 12:30 AM IST

udupi-dc-hepsiba-rani-2.jpg

ಉಡುಪಿ: ಉಡುಪಿ ಜಿಲ್ಲೆಯಲ್ಲಿ 1,111 ಮತಗಟ್ಟೆಗಳಿದ್ದು 9,90,773 ಮತದಾರರಿದ್ದಾರೆ. ಇವರಲ್ಲಿ 4,77,243 ಪುರುಷರು, 5,13,514 ಮಹಿಳೆಯರು, 16 ತೃತೀಯ ಲಿಂಗಿಗಳು ಇದ್ದಾರೆಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತ್ತು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬೈಂದೂರಿನಲ್ಲಿ 2,22,542 ಮತದಾರರು (1,08,252 ಪುರುಷರು, 1,14,289 ಮಹಿಳೆಯರು), ಕುಂದಾಪುರದಲ್ಲಿ 2,00,101 (96,164 ಪು, 1,03,937 ಮ), ಉಡುಪಿಯಲ್ಲಿ 2,05,566 (99,598 ಪು, 1,05,966 ಮ), ಕಾಪುವಿನಲ್ಲಿ 1,81,178 (86,308 ಪು, 94,858 ಮ), ಕಾರ್ಕಳದಲ್ಲಿ 1,81,386 (86,921 ಪು, 94,464 ಮ) ಮತದಾರರಿದ್ದಾರೆ ಎಂದರು.

– ಈ ಬಾರಿ 16,525 ಯುವ ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,584 ದೈಹಿಕ ದುರ್ಬಲ ಮತದಾರರನ್ನು ಗುರುತಿಸಲಾಗಿದೆ. ಗುರುತಿಸದೆ ಇರುವವರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. 
– 255 ಮತಗಟ್ಟೆಗಳನ್ನು ಕ್ರಿಟಿಕಲ್‌, 37ನ್ನು ದುರ್ಬಲ ವರ್ಗಗಳ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಇಲ್ಲಿಗೆ ವಿಶೇಷ ಭದ್ರತೆ ಮಾಡಲಾಗುವುದು. 
– ಜಿಲ್ಲೆಯಲ್ಲಿ ಶೇ. 100 ಎಪಿಕ್‌ ಕಾರ್ಡ್‌ (ಗುರುತಿನ ಚೀಟಿ) ಕೊಡಲಾಗಿದೆ. ಹೊಸ ಮತದಾರರಿಗೆ ಎಪಿಕ್‌ ಕಾರ್ಡ್‌ ಕೊಡಲಾಗುವುದು.
– ವಿದ್ಯುನ್ಮಾನ ಮತ ಯಂತ್ರ, ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆಗಳನ್ನು ವಿವಿಧೆಡೆ ಮಾಡಲಾಗುತ್ತಿದೆ. ಅಗತ್ಯಕ್ಕಿಂತ ಶೇ.5 ಹೆಚ್ಚು ಮತಯಂತ್ರ, ವಿವಿ ಪ್ಯಾಟ್‌ಗಳನ್ನು ಇರಿಸಿಕೊಳ್ಳಲಾಗುವುದು. 
– 1,400 ಮತದಾರರಿಗಿಂತ ಹೆಚ್ಚಿನ ಮತಗಟ್ಟೆಗಳಿದ್ದರೆ ಹೆಚ್ಚುವರಿ ಮತಗಟ್ಟೆ ತೆರೆಯಲಾಗುವುದು. ಕಳೆದ ಚುನಾವಣೆಯಲ್ಲಿದ್ದ 33 ಹೆಚ್ಚುವರಿ ಮತಗಟ್ಟೆಗಳನ್ನು ಈ ಬಾರಿ ಸಾಮಾನ್ಯ ಮತಗಟ್ಟೆಗಳಾಗಿ ಪರಿವರ್ತಿಸಲಾಗಿದೆ. ಈ ಬಾರಿಯೂ ಕೊನೆಯ ಹಂತದಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಬಹುದು.

ಸಹಾಯಕ ಚುನಾವಣಾಧಿಕಾರಿಗಳು
ಬೈಂದೂರು ಕ್ಷೇತ್ರಕ್ಕೆ ಭೂದಾಖಲೆಗಳ ಉಪನಿರ್ದೇಶಕ ಕುಸುಮಾಧರ ಗೌಡ, ಕುಂದಾಪುರಕ್ಕೆ ಸಹಾಯಕ ಕಮಿಷನರ್‌ ಡಾ| ಎಸ್‌.ಎಸ್‌. ಮಧುಕೇಶ್ವರ, ಉಡುಪಿಗೆ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಕಾಪುವಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ನಾಗರಾಜ್‌, ಕಾರ್ಕಳಕ್ಕೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷಕುಮಾರ್‌ ಸಹಾಯಕ ಚುನಾವಣಾಧಿಕಾರಿಗಳು. 

ಅಕ್ರಮ ಹಣ ಪ್ರಕರಣದ ಪ್ರಗತಿ
ಕಳೆದ ಚುನಾವಣೆಗಳಲ್ಲಿ ಸಿಕ್ಕಿದ ಲೆಕ್ಕವಿಲ್ಲದ ಹಣದ ಬಗ್ಗೆ ಕೇಳಿದಾಗ, ನ್ಯಾಯಾಲಯದ ಪ್ರಕ್ರಿಯೆಯಲ್ಲಿದೆ. ಪ್ರತಿ ವಾರ ಚುನಾವಣಾ ಆಯೋಗದ ಜತೆ ನಡೆಯುವ ವೀಡಿಯೋ ಕಾನ್ಫರೆನ್ಸ್‌ನಲ್ಲಿಯೂ ಎಸ್‌ಪಿಯವರು ಪಾಲ್ಗೊಳ್ಳುತ್ತಿದ್ದು ಅವರು ಇದರ ಬಗ್ಗೆ ನಿಗಾ ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಿಂಚಿನ ನೋಂದಣಿಗೆ 12,500 ಮತದಾರರು
ಎಲ್ಲ ಮತಗಟ್ಟೆಗಳಲ್ಲಿ ಮಾ. 2-3ರಂದು ನಡೆದ ಮಿಂಚಿನ ನೋಂದಣಿ ಕಾರ್ಯಕ್ರಮದಲ್ಲಿ ಸುಮಾರು 12,500 ಮತದಾರರು ಹೆಸರು ನೋಂದಾಯಿಸಿದ್ದಾರೆ. ಈ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಚುನಾವಣೆಯಲ್ಲಿ ನಾಮಪತ್ರ ಸ್ವೀಕರಿಸಲು ಆರಂಭವಾಗುವವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಕೆಲಸ ನಡೆಯಲಿದೆ. 

ಪಿಂಕ್‌ ಮತಗಟ್ಟೆ ಹೆಸರಿಲ್ಲ
ಹಿಂದಿನ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಪಿಂಕ್‌ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಬಾರಿ ಮಹಿಳೆಯರು ಮತ್ತು ಅಂಗವಿಕಲ ಮತದಾರರನ್ನು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಯಾದರೂ ಮತಗಟ್ಟೆಗಳಿಗೆ ಪಿಂಕ್‌ ಮತಗಟ್ಟೆ ಎಂದು ಹೆಸರು ಇರುವುದಿಲ್ಲ. 

ಅಂಗವಿಕಲರಿಗೆ ಸೌಲಭ್ಯ
ಅಂಗವಿಕಲ ಮತದಾರರು ಅರ್ಜಿ ಸಲ್ಲಿಸಿದರೆ ಅವರನ್ನು ಮತಗಟ್ಟೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗುವುದು. ದೃಷ್ಟಿದೋಷವುಳ್ಳವರಿಗೆ ಭೂತಗನ್ನಡಿ ವ್ಯವಸ್ಥೆ ಕಲ್ಪಿಸಲಾಗುವುದು. ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ರ್‍ಯಾಂಪ್‌, ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಗತ್ಯವಿದ್ದರೆ ಫ್ಯಾನ್‌, ಆರೋಗ್ಯ ನಿಗಾ ವ್ಯವಸ್ಥೆಗಳಿಗೂ ಆದ್ಯತೆ ಕೊಡಲಾಗುವುದು.

ಸಹಾಯವಾಣಿ, ಆ್ಯಪ್‌
– ಎಲ್ಲ ಜಿಲ್ಲೆಗಳಲ್ಲಿ 1950 ಸಹಾಯವಾಣಿಯನ್ನು ತೆರೆಯಲಾಗಿದೆ.
– cVigi ಆ್ಯಪ್‌ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಕುರಿತು ದೂರು ಸಲ್ಲಿಸಬಹುದು. 
– voterhelpline  ಮತ್ತು  chunavana ಆ್ಯಪ್‌ ಮೂಲಕ ಮತದಾರರ ಮಾಹಿತಿಗಳನ್ನು ಪಡೆಯಬಹುದು. 

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.