ಎಎಸ್‌ಐ ಎದೆಗೆ ಒದ್ದ ಆಟೋ ಚಾಲಕ ಸೆರೆ


Team Udayavani, Mar 9, 2019, 6:27 AM IST

arrest.jpg

ಬೆಂಗಳೂರು: ಆಟೋಗೆ ದುಪ್ಪಟ್ಟು ಬಾಡಿಗೆ ಕೇಳಿದ್ದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕನೊಬ್ಬ ಎಎಸ್‌ಐ ಎದೆಗೆ ಕಾಲಿನಿಂದ ಒದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್‌ 6ರಂದು ರಾತ್ರಿ ಬಾಳೆಕುಂದ್ರಿ ಸರ್ಕಲ್‌ನಲ್ಲಿ ಘಟನೆ ನಡೆದಿದೆ.

ಈ ಕುರಿತು ನಗರ ಅಪರಾಧ ದಾಖಲಾತಿಗಳ ಸಂಗ್ರಹ ಘಟಕದ (ಸಿಸಿಆರ್‌ಬಿ) ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಕರಿಯಣ್ಣ ವಿ. (57)  ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಮುಜಾಹಿದ್‌ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎಎಸ್‌ಐ ಕರಿಯಣ್ಣ ಶಿವಾಜಿನಗರದಲ್ಲಿ ವಾಸವಿದ್ದು, ಬುಧವಾರ ರಾತ್ರಿ 8.30ರ ಸುಮಾರಿಗೆ ತಮ್ಮ ಸೊಸೆಯನ್ನು ಬಾಣಸವಾಡಿಯ ಆಸ್ಪತ್ರೆಗೆ ಕರೆದೊಯ್ಯಲು ಬಾಳೆಕುಂದ್ರಿ ಸರ್ಕಲ್‌ಗೆ ಬಂದು, ಮುಜಾಹಿದ್‌ನ ಆಟೋ ಹತ್ತಿದ್ದರು. ಈ ವೇಳೆ ಮುಜಾಹಿದ್‌, 200 ರೂ. ಆಗುತ್ತದೆ ಎಂದಿದ್ದಾನೆ. ನಿಗದಿತ ಬಾಡಿಗೆಗಿಂತ ದುಪ್ಪಟ್ಟು ಹಣ ಕೇಳುವುದೇಕೆ ಎಂದು ಎಎಸ್‌ಐ ಪ್ರಶ್ನಿಸಿದ್ದಾರೆ.

ಇಷ್ಟಕ್ಕೇ ಎಎಸ್‌ಐ ಮೇಲೆರಗಿದ ಮುಜಾಯಿದ್‌, ಕರಿಯಣ್ಣ ಅವರ ಎದೆಗೆ ಎರಡು ಬಾರಿ ಕಾಲಿನಿಂದ ಒದ್ದಿದ್ದಾನೆ. ಇದನ್ನು ಗಮನಿಸಿದ ಇನ್ನಿಬ್ಬರು ಆಟೋಚಾಲಕರು ಅಲ್ಲಿಗೆ ಬಂದು ಎಎಸ್‌ಐಗೇ ದಬಾಯಿಸಿ ಮುಜಾಯಿದ್‌ನನ್ನು ಅಲ್ಲಿಂದ ಕರೆದೊಯ್ದಿದ್ದಾರೆ.

ಘಟನೆಯಿಂದ ಆತಂಕಗೊಂಡ  ಕರಿಯಣ್ಣ ಅವರ ಸೊಸೆ, ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕುಟುಂಬ ಸದಸ್ಯರು, ಕರಿಯಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಎಎಸ್‌ಐ ನೀಡಿದ ದೂರು ಆಧರಿಸಿ, ಆರೋಪಿ ಡಿ.ಜೆ.ಹಳ್ಳಿಯ ನಿವಾಸಿ ಮುಜಾಯಿದ್‌ನನ್ನು ಬಂಧಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕುಡಿತದ ಅಮಲಿನಲ್ಲಿ ಕೃತ್ಯ: ಘಟನೆ ನಡೆದಾಗ ಆರೋಪಿ, ಮುಜಾಯಿದ್‌ ಮದ್ಯ ಸೇವಿಸಿದ್ದ. ದುಪ್ಪಟ್ಟು ಹಣ ಕೊಡಲು ಒಪ್ಪದೆ ಎಎಸ್‌ಐ ಕರಿಯಣ್ಣ ಅವರು ಬೇರೆ ಆಟೋದಲ್ಲಿ ಹೋಗಲು ಸಿದ್ಧರಾದರೂ ಬಿಟ್ಟಿರಲಿಲ್ಲ. ಜತೆಗೆ, “ಇವರನ್ನು ಆಟೋ ಹತ್ತಿಸಬೇಡಿ’ ಎಂದು ಇತರೆ ಆಟೋ ಚಾಲಕರಿಗೆ ಹೇಳಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.