ಮಹಿಳೆಗಿದೆ ಉನ್ನತ ಸಮಾಜ ಕಟ್ಟುವ ಶಕ್ತಿ


Team Udayavani, Mar 9, 2019, 7:16 AM IST

dvg-1.jpg

ದಾವಣಗೆರೆ: ಮಹಿಳೆಯರು ಈಗ ಮಾತ್ರವಲ್ಲ, ಮುಂದಿನ ದಿನಗಳಿಗೂ ಅತ್ಯಗತ್ಯವಾದ ಉನ್ನತ ಸಮಾಜ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ಮನವಿ ಮಾಡಿದ್ದಾರೆ.

ಶುಕ್ರವಾರ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸ್ತ್ರೀಶಕ್ತಿ ಸಮಾವೇಶ-2019ರ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಉನ್ನತ ಸಮಾಜ ಕಟ್ಟುವಂತಹ ಅಪ್ರತಿಮ ಬುದ್ಧಿಮತ್ತೆ, ಚಾಣಾಕ್ಷತೆ, ಮುಂದಾಲೋಚನೆ, ಶಕ್ತಿ ಇದೆ. ತಾವು ಬೆಳೆಯುವ ಜೊತೆಗೆ ಮುಂದಿನ ದಿನಗಳಿಗೂ ಅಗತ್ಯವಾದ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಆಶಿಸಿದರು.

ಮಹಿಳೆ ಎಂದರೆ ಪ್ರಕೃತಿ. ಹಾಗಾಗಿಯೇ ಮಹಿಳೆಯನ್ನು ತಾಯಿ, ಭೂಮಿ, ಇಳೆ.. ಎನ್ನುವ ಮೂಲಕ ಗೌರವದಿಂದ ಕಾಣಲಾಗುತ್ತದೆ. ಮಹಿಳೆಯರು ಪುರುಷರಗಿಂತಲೂ ದೈಹಿಕವಾಗಿ ಶಕ್ತಿಶಾಲಿ ಅಲ್ಲದೇ ಇರಬಹುದು. ಜೈವಿಕ ಮತ್ತು ವೈಜ್ಞಾನಿಕವಾಗಿ ಎಲ್ಲರಗಿಂತಲೂ ಹೆಚ್ಚಿನ ಶಕ್ತಿಶಾಲಿಗಳು. ಪುರುಷರು ಸದಾ ಸ್ವಾರ್ಥಿಗಳಾದರೆ ತಮ್ಮ ಬಾಲ್ಯದಿಂದಲೇ ಹೋರಾಟವನ್ನು ನಡೆಸುವಂತಹ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತ್ಯಾಗಿಯಾಗಿ ಸಾಗುತ್ತಾರೆ. ತಮ್ಮ ತ್ಯಾಗದ ಮೂಲಕ ಭಾವಕೋಶವನ್ನ ಜಗತ್ತಿನಾದ್ಯಂತ ಪಸರಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಒಂದು ಸದೃಢ ಸಮಾಜವನ್ನು ಕಟ್ಟುವ ಶಕ್ತಿ-ದಾಷ್ಟ್ರಾತೆ ಇರುವುದು ಮಹಿಳೆಯರಲ್ಲಿ. ಮಹಿಳೆ ವ್ಯಕ್ತಿಯಲ್ಲ. ದೈವಿಕವಾಗಿ ಆಕೆಯೊಂದು ಪ್ರಕೃತಿ. ತಾಯಿ, ಅಕ್ಕ-ತಂಗಿ, ಹೆಂಡತಿ, ದೇವಿ ಹೀಗೆ ಜೈವಿಕವಾಗಿ, ವೈಜ್ಞಾನಿಕವಾಗಿ ಅಷ್ಟೊಂದು ಅವತಾರಗಳಲ್ಲಿ ಕಾಣಲು ಹೆಣ್ಣಿಗೆ ಮಾತ್ರ ಸಾಧ್ಯ. ಪುರುಷ ಬಲ ಢಾಂಬಿಕವಾದದು. ಮಹಿಳೆಯರು ನಿಜಕ್ಕೂ ಕಲೆಗಾರ್ತಿಯರು. ಅವರಷ್ಟು ಹೊಂದಾಣಿಕೆಯ ಶಕ್ತಿ ಬೇರೆ ಯಾರಲ್ಲೂ ಇರುವುದಿಲ್ಲ.

ತಮ್ಮ ಬದುಕನ್ನ ಕಟ್ಟಿಕೊಳ್ಳುವ ಜೊತೆಗೆ ತನ್ನವರ ಬದುಕನ್ನ ಕಟ್ಟುವಂತಹ ಕಲೆ ಅವರಿಗೆ ಸಿದ್ಧಿಸಿದೆ. ಮದುವೆಯಾಗುವ ತನಕ ತವರು ಮನೆಯಲ್ಲಿ ಒಳ್ಳೆಯ ವಾತಾವರಣ ಉಂಟು ಮಾಡುವ ಮಹಿಳೆಯರು ಗಂಡನ ಮನೆಯಲ್ಲಿ ಕೆಲವೇ ದಿನಗಳಲ್ಲಿ ಎಲ್ಲರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಅಂತಹ ಹೊಂದಾಣಿಕೆ ಪುರುಷರಲ್ಲಿ ಸಾಧ್ಯವೇ ಇಲ್ಲ ಎಂದರು.

ಮಹಿಳೆಯರಿಗೆ ಅನೇಕಾನೇಕ ವರ್ಷಗಳ ಕಾಲ ಶೈಕ್ಷಣಿಕ ಜ್ಞಾನ ಮತ್ತು ಅವಕಾಶ ನೀಡದ ಏಕೈಕ ಕಾರಣಕ್ಕೆ ಮುಂಚೂಣಿಗೆ ಬರಲಿಲ್ಲ. ಶಿಕ್ಷಣದ ಜೊತೆಗೆ ಎಲ್ಲಾ ರೀತಿಯ ಅವಕಾಶ ದೊರೆಯಲಾರಂಭಿಸಿದ ನಂತರ ಈಗ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಬರೀ ಮುಂಚೂಣಿಯಲ್ಲಿರುವುದು ಮಾತ್ರವಲ್ಲ, ಹಲವಾರು ಸಾಧನೆ ಮಾಡುತ್ತಿದ್ದಾರೆ. ಸಮಾಜ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ಒದಗಿಸುವ ಮೂಲಕ ಬೆಳೆಸುವ ಅಗತ್ಯವೇ ಇಲ್ಲ. ಮೀಸಲಾತಿ ಇಲ್ಲದೆಯೂ ಮಹಿಳೆಯರು ಬೆಳೆಯುತ್ತಿರುವುದು ನಿಜಕ್ಕೂ ಹೊಸ ಬದಲಾವಣೆ ಎಂದು ಹರ್ಷ ವ್ಯಕ್ತಪಡಿಸಿದರು.
 
12ನೇ ಶತಮಾನದಲ್ಲಿ ಮಹಾನ್‌ ದಾರ್ಶನಿಕ ಬಸವಣ್ಣನವರು ಮಹಿಳಾ ಸಮಾನತೆ ಮತ್ತು ಸ್ವಾತಂತ್ರ್ಯಾಕ್ಕಾಗಿ ಶ್ರಮಿಸಿದರು. ಜಗತ್ತಿನ ಮೊಟ್ಟ ಮೊದಲ ಸಂಸತ್‌ ಎಂದೇ ಕರೆಯಲ್ಪಡುವ ಅನುಭವ ಮಂಟಪದಲ್ಲಿ ಅಕ್ಕಮಹಾದೇವಿ, ಆಯ್ದಕ್ಕಿ ಲಕ್ಕಮ್ಮ, ಸೂಳೆ ಸಂಕವ್ವ, ತಾಳವ್ವ… ಮುಂತಾದವರಿಗೆ ಅವಕಾಶ ಮಾಡಿಕೊಟ್ಟರು. ಅವರು ವಚನಕಾರ್ತಿಯರಾಗಿ ಸಮಾಜಕ್ಕೆ ಸಾಹಿತ್ಯದ ಮೂಲಕ ಸೇವೆ ಸಲ್ಲಿಸಿದರು. ಅಂದು ಬಸವಣ್ಣನವರು ಕಂಡಂತಹ ಮಹಿಳಾ ಸಮಾನತೆ ಮತ್ತು ಸ್ವಾತಂತ್ರ್ಯದ ಕನಸು 800-900 ವರ್ಷಗಳ ನಂತರ ನನಸಾಗುತ್ತಿದೆ ಎಂದು ತಿಳಿಸಿದರು.

ಇಂದಿನ ಆಧುನಿಕ, ವೈಜ್ಞಾನಿಕ ಯುಗದಲ್ಲೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಕೆಲವಾರು ಸಾಮಾಜಿಕ ಅನಿಷ್ಟಗಳ ಸುಳಿಯಲ್ಲಿ ಇರುವುದು ಕಂಡು ಬರುತ್ತದೆ. ಹಿಂದಿನಂತೆ ಅನ್ಯಾಯದ ವಿರುದ್ಧ ಸುಮ್ಮನಿರದೆ ಧ್ವನಿ ಎತ್ತಿ ಹೋರಾಟ ಮಾಡುತ್ತಿರುವುದು ಹೆಮ್ಮೆಯ ವಿಷಯ. ಮಹಿಳೆಯರು ತಮ್ಮಲ್ಲಿನ ಕೀಳರಿಮೆಯ ಬಿಟ್ಟು ಅನುಭವ, ಚಾಣಾಕ್ಷತೆ, ಮುಂದಾಲೋಚನೆಯಿಂದ ಸಮಾಜದಲ್ಲಿ ಒಳ್ಳೆಯ ಹೆಜ್ಜೆ ಗುರುತು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ತಿಳಿಸಿದರು. 

ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಿ.ಎನ್‌. ಶೈಲಜಾ ಬಸವರಾಜ್‌ ಮಾತನಾಡಿ, ಇಂದು ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮಹಿಳೆಯರು ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಮಹಿಳೆಯರು ಪ್ರೀತಿ ಮತ್ತು ಗೌರವದಿಂದ ಸಾಗಿದಾಗ ಯಾವುದೇ ರೀತಿಯ ಸಮಸ್ಯೆಗಳಲ್ಲಿ ಸಿಲುಕುವುದೇ ಇಲ್ಲ. ಪುರುಷರ ಬೆಂಬಲದಿಂದ ಕೌಟಂಬಿಕ ಜೀವನದಂತೆಯೇ ಆಡಳಿತ ಕ್ಷೇತ್ರದಲ್ಲೂ ಮುನ್ನಡೆಯಬೇಕು. ಅತ್ಯುನ್ನತ ಭಾರತೀಯ ಸಂಸ್ಕೃತಿಯನ್ನ ವಿಶ್ವ ಸಂಸ್ಕೃತಿಯನ್ನಾಗಿ ಬೆಳೆಸಬೇಕು. ಮಹಿಳೆಯರ ದಿನಾಚರಣೆ ಕೇವಲ ಮಹಿಳೆಯರಿಗೆ ಸೀಮಿತವಾಗದೆ ಕುಟುಂಬದ, ಸಮಾಜದ ಎಲ್ಲ ಪುರುಷರೂ ಸೇರಿ ಮಹಿಳೆಯರ ದಿನವನ್ನು ಆಚರಿಸುವಂತಾಗಬೇಕು ಎಂದು ಆಶಿಸಿದರು. 

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಹಿರಿಯ ಕಾರ್ಮಿಕ ಮುಖಂಡ ಎಚ್‌. ಕೆ. ರಾಮಚಂದ್ರಪ್ಪ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಜಿ. ಮಂಗಳಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಭ, ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್‌.ಡಿ. ನೀಲಾಂಬಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ವಿಜಯ್‌ಕುಮಾರ್‌ ಇತರರು ಇದ್ದರು. ಶೃತಿ ನಿರೂಪಿಸಿದರು ಪರಿಚಯಿಸಿಕೊಂಡ ಡಿಸಿ ನಾನು ಜಿ.ಎನ್‌. ಶಿವಮೂರ್ತಿ. ಈಚೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಅದರಲ್ಲೂ ಮಹಿಳಾ ದಿನಾಚರಣೆಯಲ್ಲಿ ಮಾತನಾಡುತ್ತಿರುವುದು ಒಂದು ಸುಸಂದರ್ಭ ಎಂದು ತಮ್ಮನ್ನು ಪರಿಚಯಿಸಿಕೊಂಡ ಜಿಲ್ಲಾಧಿಕಾರಿಗಳು, ಶುಕ್ರವಾರ ಬೆಳಗ್ಗೆ ದೂರವಾಣಿಯಲ್ಲಿ ತಮ್ಮ ಪತ್ನಿಯೊಂದಿಗೆ ಮಹಿಳಾ ದಿನಾಚರಣೆ ಕುರಿತಂತೆ ನಡೆದ ಸಂಭಾಷಣೆಯ ವಿವರ ಹಂಚಿಕೊಳ್ಳುವ ಜೊತೆಗೆ ಎಲ್ಲರಿಗೂ ಮಹಿಳಾ ದಿನದ ಶುಭ ಕೋರಿದರು.

ಸನ್ಮಾನಿತರು ಉತ್ತಮ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಾದ ದಾವಣಗೆರೆಯ ವಿಜಯನಗರದ ಆರ್‌.ಎಸ್‌. ಲೀಲಾವತಿ, ಹರಿಹರದ ಯಲವಟ್ಟಿ-ಸಿ ಅಂಗನವಾಡಿ ಕೇಂದ್ರದ ಕವಿತಾ, ಜಗಳೂರಿನ ಐನಳ್ಳಿ ಅಂಗನವಾಡಿ ಕೇಂದ್ರದ ಲಲಿತಮ್ಮ, ಹರಪನಹಳ್ಳಿಯ ನೀಲಗುಂದ ಅಂಗನವಾಡಿ ಕೇಂದ್ರದ ಸುಮ, ಹೊನ್ನಾಳಿಯ ಮಾದನಬಾವಿ-1 ನೇ ಅಂಗನವಾಡಿ ಕೇಂದ್ರದ ಸಾಕಮ್ಮ, ಚನ್ನಗಿರಿ 2ನೇ ಅಂಗನವಾಡಿ ಕೇಂದ್ರದ ಸಿ. ಭಾರತಿ, ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಜಗಳೂರು ತಾಲೂಕಿನ ಪಲ್ಲಾಗಟ್ಟೆಯ ಶೃತಿ ಸ್ತ್ರೀಶಕ್ತಿ ಒಕ್ಕೂಟದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.