ಖಾಸಗಿ ಬಸ್‌ ಪರವಾನಿಗೆ ಸ್ಥಗಿತ ನಿರ್ಧಾರ: ವಿರೋಧ


Team Udayavani, Mar 10, 2019, 12:30 AM IST

pr-bus.jpg

ಮಂಗಳೂರು: ರಾಜ್ಯದಲ್ಲಿ ಎಲ್ಲ ಸಾರಿಗೆ ಮಾರ್ಗಗಳನ್ನು ರಾಷ್ಟ್ರೀಕರಣಗೊಳಿಸಿ ಸರಕಾರ ಹೊರಡಿಸಿರುವ ಆದೇಶ ಮತ್ತು ರಾಜ್ಯದಲ್ಲಿ ಖಾಸಗಿ ಬಸ್‌ಗಳಿಗೆ ಹೊಸದಾಗಿ ಪರ್ಮಿಟ್‌ ನೀಡದಿರುವ ನಿರ್ಧಾರವನ್ನು ರಾಷ್ಟ್ರೀಯ ಬಸ್‌ ಹಾಗೂ ಕಾರು ನಿರ್ವಾಹಕರ ಒಕ್ಕೂಟ (ಬೊಕಿ) ವಿರೋಧಿಸಿದೆ.

ಒಕ್ಕೂಟದ ಅಧ್ಯಕ್ಷ ಪ್ರಸನ್ನ ಪಟವರ್ಧನ್‌ ಅವರು ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದೇಶದಲ್ಲಿ ಸರಕಾರಿ ಮತ್ತು ಖಾಸಗಿ ಸಹಭಾಗಿತ್ವ ಪರಿಕಲ್ಪನೆ ಹೆಚ್ಚುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯ ಸರಕಾರ ಎಲ್ಲ ಸಾರಿಗೆ ಮಾರ್ಗಗಳನ್ನು ರಾಷ್ಟ್ರೀಕರಣ ಮಾಡಹೊರಟಿರುವುದು ಆಶ್ಚರ್ಯವುಂಟು ಮಾಡಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಕ್ಷೇತ್ರದಲ್ಲಿ ಏಕಸ್ವಾಮ್ಯ ಪ್ರತಿಕೂಲ ಪರಿಣಾಮಗಳನ್ನುಂಟು ಮಾಡುತ್ತದೆ. ಸ್ಪರ್ಧೆ ಇದ್ದಾಗ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಸಿಗಲು ಸಾಧ್ಯವಾಗುತ್ತದೆ ಎಂದರು.

ಉತ್ತರ ಕರ್ನಾಟಕ ಸೇರಿದಂತೆ ಕೆಲವು ಭಾಗಗಳ ಮಾರ್ಗಗಳಲ್ಲಿ ಸರಕಾರಿ ಬಸ್‌ಗಳ ಏಕಸ್ವಾಮ್ಯ ಇದೆ. ಆದರೆ ಅವು ನಷ್ಟದಲ್ಲಿ ಸಾಗುತ್ತಿವೆ ಎಂಬುದನ್ನು ಗಮನಿಸಬೇಕಾಗಿದೆ. ಸರಕಾರಿ ಬಸ್‌ಗಳಿಗೆ ಇಲಾಖೆ ಕೆಲವು ರಿಯಾಯಿತಿಗಳನ್ನು ನೀಡಲಾಗುತ್ತದೆ. ಆದರೆ ಖಾಸಗಿ ಬಸ್‌ಗಳಿಗೆ ಇದ್ಯಾವುದನ್ನೂ ನೀಡುತ್ತಿಲ್ಲ. ಬದಲಿಗೆ ಹೆಚ್ಚುವರಿಯಾಗಿ ಆನೇಕ ನಿಯಮಗಳನ್ನು ಹೇರಲಾಗುತ್ತದೆ ಎಂದವರು ಹೇಳಿದರು.

ಜು.25-17ರಂದು ಸಿಡ್ಕೊ
ನವಿಮಂಬಯಿಯ ಸಿಡ್ಕೊ ಕನ್ವೆನ್ಶನ್‌ ಸೆಂಟರ್‌ನಲ್ಲಿ ಜು. 25ರಿಂದ 27ರ ವರೆಗೆ ಬಸ್‌ ಹಾಗೂ ಕಾರು ಟ್ರಾವೆಲ್‌ ಶೋ ಪ್ರವಾಸ್‌ ಎರಡನೇ ಬಾರಿಗೆ ಆಯೋಜನೆಗೊಳ್ಳುತ್ತಿದೆ. ದೇಶಾದ್ಯಂತದ ಬಸ್‌ ಹಾಗೂ ಕಾರು ನಿರ್ವಾಹಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಚಾರಸಂಕಿರಣಗಳನ್ನು ಹಮ್ಮಿಕೊಂಡಿದ್ದು, ಬಸ್‌ ನಿರ್ವಾಹಕರು ಹಾಗೂ ಕಾರು ನಿರ್ವಾಹಕರು ಎದುರಿಸುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಚರ್ಚೆಯಾಗುವ ಒಟ್ಟು ವಿಚಾರಗಳನ್ನು ಕ್ರೋಢೀಕರಿಸಿ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವಶ್ಯ ಪರಿಹಾರ ಕ್ರಮಗಳನ್ನು ಒಳಗೊಂಡ ವರದಿಯೊಂದನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದವರು ತಿಳಿಸಿದರು.

ಪ್ರಸ್ತುತ ಸರಕಾರಗಳು ಸಾರಿಗೆ ಸುಧಾರಣೆಗೆ ಒತ್ತು ನೀಡುತ್ತಿವೆ. ಇದರ ಬದಲಿಗೆ ಪ್ರಯಾಣಿಕರನ್ನು ಕೇಂದ್ರೀಕರಿಸಿಕೊಂಡು ಸುಧಾರಣೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ. ರೈಲ್ವೇ, ವಿಮಾನ, ಬಸ್‌ ಸಂಚಾರಗಳನ್ನು ಒಳಗೊಂಡು ಒಂದು ಸಮಗ್ರ ವ್ಯವಸ್ಥೆ ರೂಪುಗೊಳ್ಳುವುದು ಅವಶ್ಯ. ಪ್ರಸ್ತುತ ನಮ್ಮಲ್ಲಿ ರೈಲ್ವೇ, ಬಸ್‌, ವಿಮಾನ ಸಾರಿಗೆ ವ್ಯವಸ್ಥೆಗಳು ಒಂದಕ್ಕೊಂದು ಸಂಬಂಧವಿಲ್ಲದಂತೆ ಕಾರ್ಯಾಚರಿಸುತ್ತಿವೆ. ರೈಲ್ವೇ, ವಿಮಾನ ನಿಲ್ದಾಣಗಳಿಂದ ನಗರಗಳಿಗೆ ಬಸ್‌ ಸಂಪರ್ಕ ಇರುವುದಿಲ್ಲ. ಆದರೆ ವಿದೇಶಗಳಲ್ಲಿ ಇವು ಒಂದಕ್ಕೊಂದು ಪೂರಕವಾಗಿ ಕಾರ್ಯನಿರ್ವಹಿಸುತ್ತವೆ ಎಂದರು. ಒಕ್ಕೂಟದ ಚೇರ್‌ಮನ್‌ ಕೆ.ಟಿ. ರಾಜಶೇಖರ್‌, ಪ್ರಧಾನ ಕಾರ್ಯದರ್ಶಿ ಎ. ಅಫ್ಜಲ್‌ ಉಪಸ್ಥಿತರಿದ್ದರು.

ಮಾಹಿತಿ ಸಭೆ
ಪ್ರವಾಸ್‌ ಬಗ್ಗೆ ಮಂಗಳೂರಿನ ಮರವೂರಿನಲ್ಲಿ ಮಾಹಿತಿ ಸಭೆ ಶುಕ್ರವಾರ ಜರಗಿತು. ರಾಷ್ಟ್ರೀಯ ಬಸ್‌ ಹಾಗೂ ಕಾರು ನಿರ್ವಾಹಕರ ಒಕ್ಕೂಟ (ಬೊಕಿ) ಅಧ್ಯಕ್ಷ ಪ್ರಸನ್ನ ಪಟವರ್ಧನ್‌, ಚೆಯರ್‌ಮ್ಯಾನ್‌ ಕೆ.ಟಿ. ರಾಜಶೇಖರ್‌, ಪ್ರ. ಕಾರ್ಯದರ್ಶಿ ಎ. ಅಫ್ಜಲ್‌, ಒಕ್ಕೂಟದ ಪದಾಧಿಕಾರಿಗಳು, ರಾಜ್ಯ ಬಸ್‌ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌, ಮಾಜಿ ಸಚಿವ ಅಭಯಚಂದ್ರ, ಸದಾನಂದ ಛಾತ್ರ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಉಪಸ್ಥಿತರಿದ್ದರು. ಖಾಸಗಿ ಬಸ್‌ ಮಾಲಕರು, ಕಾರು ನಿರ್ವಾಹಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.