ಪೊಳಲಿಯ ವಿನ್ಯಾಸ ನಿಜಕ್ಕೂ ಅದ್ಭುತ: ಡಾ.ಹೆಗ್ಗಡೆ


Team Udayavani, Mar 10, 2019, 12:30 AM IST

0903malalim21.jpg

ಪೊಳಲಿ: ಲೋಹ ಮರ ಶಿಲೆಗಳ ಸುಂದರ ಕೆತ್ತನೆಗಳಿಂದ ನವೀಕರಣಗೊಂಡಿರುವ ಪೊಳಲಿ ದೇವಸ್ಥಾನದ ವಿನ್ಯಾಸವನ್ನು ನೋಡಿ ನಿಜಕ್ಕೂ ಬೆರಗುಗೊಂಡಿದ್ದೇನೆ. ಇದಕ್ಕೆ ಕಾರಣೀಭೂತರಾದ ಶಿಲ್ಪಿಗಳನ್ನು, ಕಾರ್ಮಿಕರನ್ನು, ಸ್ವಯಂಸೇವಕರನ್ನು, ದಾನಿಗಳನ್ನು ಅಭಿನಂದಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಭೆಯ ನ್ನುದ್ದೇಶಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಾಗಿದ್ದರೆ ಇಷ್ಟು ಸುಂದರವಾಗಿ ವಿನ್ಯಾಸಗೊಳಿಸಲು 20ರಿಂದ 30 ವರ್ಷಗಳೇ ಬೇಕಿತ್ತು. ಆದರೆ ಯಾಂತ್ರೀಕರಣದಿಂದಾಗಿ ಇಷ್ಟು ವರ್ಷಗಳಲ್ಲಿ ಆಗಬೇಕಾದ ಕೆಲಸವು ಕೇವಲ ಎರಡು ವರ್ಷಗಳಲ್ಲಿ ಪೂರ್ಣಗೊಂಡಿದೆ ಎಂದರು.

ಕಳೆದ 150 ವರ್ಷಗಳ ಮುಂಚೆ ಬಿದ್ದು ಹೋದ ಅನೇಕ ದೇವಸ್ಥಾನಗಳು, ಜೈನಪೀಠಗಳು ಇವೆ. 70 ವರ್ಷಗಳ ಮುಂಚಿನ ಯಜಮಾನಿಕೆ ಕಾಲದಲ್ಲಿ ಬಡತನ ಇದ್ದುದರಿಂದ ದೇವಸ್ಥಾನದ ಜೀರ್ಣೋದ್ಧಾರ ನಡೆಯುತ್ತಿರಲಿಲ್ಲ. ಆದರೆ ಇಂದಿನ ಕಾಲಘಟ್ಟದಲ್ಲಿ ಬಡವರಿಗೂ ದಾನ ಮಾಡುವಷ್ಟು ಶಕ್ತಿ ಬಂದಿರುವುದರಿಂದ ದೇವಸ್ಥಾನ ನವೀಕರಣಗೊಳ್ಳುತ್ತಿದೆ. ಪೊಳಲಿ ಮಾತೆಯು ಎಲ್ಲರ ತಾಯಿಯಾಗಿದ್ದು, ಪ್ರಸನ್ನಗೊಂಡಿರುವುದನ್ನು ಇಲ್ಲಿ ಕಂಡುಕೊಳ್ಳಲು ಸಾಧ್ಯ ಎಂದರು.

ಯೋಧರ ಮೇಲೆ ಶಂಕೆ ಖೇದಕರ
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮಾತನಾಡಿ ವೃತ್ತಿಧರ್ಮ, ರಾಜಧರ್ಮಗಳನ್ನು ಪಾಲನೆ ಮಾಡಿ ದರೆ ದೇಶ ಸುಭಿಕ್ಷ ಸ್ಥಿತಿಯಲ್ಲಿರುತ್ತದೆ. ಇತಿಹಾಸಗಳು ರಾಜಧರ್ಮವನ್ನು ಬೋಧನೆ ಮಾಡಿವೆ. ರಾಜಕಾರಣಿ ಗಳು ರಾಜಧರ್ಮ ಪಾಲಿಸಿದರೆ ಧರ್ಮಾಧಾರಿತ ವ್ಯವಸ್ಥೆ ಜಾರಿಗೊಂಡು ಭ್ರಷ್ಟಾಚಾರ ಕಡಿಮೆಯಾಗುತ್ತದೆ. ದೇಶದ ಜನರು ಧರ್ಮಕ್ಕೆ ಬದ್ಧರಾಗಿರ ಬೇಕು. ಆದರೆ ಇಂದು ದೇಶಧರ್ಮದ ಬಗ್ಗೆಯೇ ಚರ್ಚೆ ನಡೆಯುತ್ತಿದ್ದು, ನಮ್ಮನ್ನು ರಕ್ಷಿಸುತ್ತಿರುವ ಯೋಧರನ್ನೇ ಸಂಶಯದಿಂದ ನೋಡುತ್ತಿರುವ ಪ್ರವೃತ್ತಿ ಉಂಟಾಗುತ್ತಿರುವುದು ನಿಜಕ್ಕೂ ಖೇದಕರ ಎಂದು ಹೇಳಿದರು.

ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿ, ಒಂದು ತಿಂಗಳ ಉತ್ಸವ ಇರುವ ಪೊಳಲಿಯು ಅತ್ಯಂತ ಪುಣ್ಯ ಸ್ಥಳವಾಗಿದ್ದು, ಎಲ್ಲರೂ ಕೃತಜ್ಞತೆಯಿಂದ ದೇವಿಯ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಆನಂದ ಸಿಗಬೇಕಾದರೆ ದೇವರ ಸಾನಿಧ್ಯದಲ್ಲಿರಬೇಕು ಎಂದು ನುಡಿದರು.

ಸಚಿವ ಯು.ಟಿ. ಖಾದರ್‌ ಮಾತಾಡಿ, ದೇವಸ್ಥಾನದಂಥ ಶ್ರದ್ಧಾಕೇಂದ್ರಗಳು ಸರ್ವಧರ್ಮದ ಜನರಿಗೂ ಸಮಾನತೆಯ ಭಾವನೆಯನ್ನು ಕಲಿಸಲಿ ಎಂದು ಹೇಳಿದರು. ಬ್ರಹ್ಮಶ್ರೀ ಕುಂಟಾರು ರವೀಶ್‌ ತಂತ್ರಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಡಾಣ ಎಂ. ದೇಜಪ್ಪ ದಲ್ಲೋಡಿ ವಿರಚಿತ “ಶ್ರೀ ರಾಜರಾಜೇಶ್ವರಿ ದರ್ಶನಂ’ ಎನ್ನುವ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಐವನ್‌ ಡಿ’ಸೋಜಾ, ಶಾಸಕ ಸುಕುಮಾರ್‌ ಶೆಟ್ಟಿ, ರಮಾನಾಥ ರೈ, ರಾಜೇಶ್‌ ನಾಯ್ಕ, ಯು.ಟಿ. ಆಳ್ವ, ಮಂಜಯ್ಯ ಶೆಟ್ಟಿ, ಚೇರ ಸೂರ್ಯನಾರಾಯಣ ರಾವ್‌, ನಾಗರಾಜ್‌ ಶೆಟ್ಟಿ, ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಕೋಡಿಮಜಲು ಅನಂತಪದ್ಮನಾಭ, ಪ್ರವೀಣ್‌ ಮುಂತಾದವರು ಉಪಸ್ಥಿತರಿದ್ದರು. 

ಶಿಲೆಶಿಲ್ಪಿ ಜಯಂತ್‌ ಪಿ. ಕಾರ್ಕಳ, ಸಂದೀಪ್‌ ಪೊಳಲಿ, ಗ್ರಾನೈಟ್‌ ಗುತ್ತಿಗೆದಾರ ಮನೀಷ್‌, ಸುಮೇಶ್‌ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.