ಸತ್ತ ಉಗ್ರರ ಲೆಕ್ಕ ಕೊಡಿ: ಪ್ರಕಾಶ ಅಂಬೇಡ್ಕರ್
Team Udayavani, Mar 10, 2019, 12:42 AM IST
ಬೆಳಗಾವಿ: ನಿಜವಾಗಿಯೂ ವಾಯು ದಾಳಿಯಾಗಿದ್ದರೆ ಕೇಂದ್ರ ಸರ್ಕಾರ ಕೂಡಲೇ ಈ ದಾಳಿಯಲ್ಲಿ ಸತ್ತಿರುವ ಉಗ್ರರ ಲೆಕ್ಕವನ್ನು ದೇಶದ ಜನರಿಗೆ ಕೊಡಬೇಕು ಎಂದು ಪ್ರಕಾಶ ಅಂಬೇಡ್ಕರ್ ಒತ್ತಾಯಿಸಿದರು.
ಸುದ್ದಿಗಾರರ ಜೊತೆ ಮಾತನಾಡಿ, ಪಾಕಿಸ್ತಾನದ ಮೇಲೆ ನಡೆದ ವಾಯು ದಾಳಿಯಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಎಷ್ಟು ಎಂಬ ಬಗ್ಗೆ ದೇಶದ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಭಾರತೀಯ ವಾಯು ಸೇನೆ ಪಾಕಿಸ್ತಾನದ ಎಷ್ಟು ಉಗ್ರರನ್ನು ಹತ್ಯೆಗೈದಿದೆ ಎಂಬುದು ಹಲವು ದಿನಗಳಿಂದ ಪ್ರತಿಪಕ್ಷಗಳು ಪ್ರಶ್ನಿಸುತ್ತಿದ್ದರೂ ಕೇಂದ್ರ ಮೌನವಾಗಿದೆ ಎಂದರು.
ಫುಲ್ವಾಮಾ ದಾಳಿಯ ನಂತರ ಬಾಲಕೋಟ್ ಮೇಲೆ ಭಾರತೀಯ ವಾಯುಪಡೆ ನಡೆಸಿದ ದಾಳಿಯ ಬಗ್ಗೆ ಹಲವಾರು ದೇಶಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಇದನ್ನು ಭಾವನಾತ್ಮಕ ವಿಷಯವನ್ನಾಗಿ ಮಾಡಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮುಜುಗರ ವನ್ನುಂಟು ಮಾಡಿದ್ದಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ