ಲೋಕ ಸಮರಕ್ಕೂ ಮೊದಲೇ ದೋಸ್ತಿಗಳ ಕುಸ್ತಿ  


Team Udayavani, Mar 10, 2019, 6:21 AM IST

loka.jpg

ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಈ ಬಾರಿ ಅಧಿಕಾರ ಹಿಡಿಯಲೇಬೇಕೆಂಬ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕೆಂಬ ಜಪ ರಾಜ್ಯದ ಆಡಳಿತರೂಢ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌, ಜೆಡಿಎಸ್‌ಗಳಲ್ಲಿ ಕೇಳಿ ಬರುತ್ತಿದ್ದರೆ, ಇತ್ತ ಚಿಕ್ಕಬಳ್ಳಾಪುರ  ಕ್ಷೇತ್ರದಲ್ಲಿ ಮಾತ್ರ ಚುನಾವಣೆಗೂ ಮೊದಲೇ ದೋಸ್ತಿಗಳ ನಡುವೆ ಕುಸ್ತಿ ಆರಂಭಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಕೆ.ಸುಧಾಕರ್‌ ನಿಗಮ ಮಂಡಳಿ ಕೈ ತಪ್ಪಿದ್ದಕ್ಕೆ ಬಹಿರಂಗವಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಮರ ಸಾರಿದ್ದು, ನಿಗಮ ಮಂಡಳಿ ನನಗೆ ಪುಟಗೋಸಿಗೆ ಸಮ ಎಂದು ಆಕ್ರೋಶ ಹೊರ ಹಾಕಿದ್ದರು. ಇದರ ಬೆನ್ನಲ್ಲೇ ಜೆಡಿಎಸ್‌ ನಾಯಕರು ಕೂಡ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿ ಅವರನ್ನು ಅವಹೇಳನ ಮಾಡುವುದು ನಿಲ್ಲಿಸದಿದ್ದರೆ ಪ್ರತಿಭಟನೆಗೆ ಇಳಿಯುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ. 

ಕ್ಷೇತ್ರದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮಿತ್ರ ಪಕ್ಷಗಳಲ್ಲಿಯೇ ಕಿತ್ತಾಟ ಬೀದಿಗೆ ಬಂದಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಹೇಳುವುದಕ್ಕೆ ಆಗದು. ಚುನಾವಣೆಯನ್ನು ಮೈತ್ರಿ ಪಕ್ಷಗಳು ಕ್ಷೇತ್ರದಲ್ಲಿ ಒಟ್ಟಾಗಿ ಎದುರಿಸುತ್ತವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಅಸಮಾಧಾನ: ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಜೆಡಿಎಸ್‌ ಪಟ್ಟು ಹಿಡಿದಿರುವುದು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೇಳುವಂತೆ ಮಾಡಿದ್ದು, ಈ ವಿಚಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರಲ್ಲಿ ಪರಸ್ಪರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. 

ಪಕ್ಷದ ವಿರುದ್ಧ ಕೆಲಸ: ಸ್ಥಳೀಯ ಜೆಡಿಎಸ್‌ ನಾಯಕರು ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್‌ಗೆ ಬಿಟ್ಟು ಕೊಡದಂತೆ ಪಕ್ಷದ ವರಿಷ್ಠರ ಮೇಲೆ ತೀವ್ರ ಒತ್ತಡ ತಂದಿದ್ದಾರೆ. ಕಾಂಗ್ರೆಸ್‌ ಕೂಡ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡದಂತೆ ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದು, ಇತ್ತೀಚೆಗೆ ಶಾಸಕ ಸುಧಾಕರ್‌ ಬಹಿರಂಗವಾಗಿಯೇ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ದಳದ ವಿರುದ್ಧ ಕೆಲಸ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. 

ಪಟಾಕಿ ಸಿಡಿಸಿ ವಿಜಯೋತ್ಸವ: ಕಳೆದೊಂದು ವಾರದಿಂದ ಕ್ಷೇತ್ರದಲ್ಲಿ ನಡೆಯುವ ಪ್ರತಿ ಸಭೆ, ಸಮಾರಂಭಗಳಲ್ಲಿ ಕ್ಷೇತ್ರಕ್ಕೆ ಅನುದಾನ ಕೊಡುತ್ತಿಲ್ಲ, ಮೆಡಿಕಲ್‌ ಕಾಲೇಜಿಗೆ ನಯಾಪೈಸೆ ಕೊಡಲಿಲ್ಲ, ಎತ್ತಿನಹೊಳೆ ಯೋಜನೆಗೆ ಭೂ ಸ್ವಾಧೀನವಾಗಿಲ್ಲ, ನೀರಾವರಿ ಯೋಜನೆಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರ ನಡುವೆ ಶಾಸಕ ಸುಧಾಕರ್‌ಗೆ ನಿಗಮ ಮಂಡಳಿ ಕೈತಪ್ಪಿದ್ದಕ್ಕೆ ವಿರೋಧಿ ಪಾಳೆಯ ಅದರಲ್ಲೂ ಜೆಡಿಎಸ್‌ ಮುಖಂಡರು ನಗರದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿರುವುದು ಶಾಸಕ ಸುಧಾಕರ್‌ ಆಕ್ರೋಶಕ್ಕೆ ಕಾರಣವಾಗಿದೆ.

ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಪಕ್ಷಗಳು ಬಿಜೆಪಿಯನ್ನು ಮಣಿಸಲು ತಂತ್ರ, ಪ್ರತಿ ತಂತ್ರಗಳನ್ನು ಹೂಡುತ್ತಾ ಸೀಟು ಹೊಂದಾಣಿಕೆ ಮೂಲಕ ಒಟ್ಟಾಗಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಮುಂದಾಗಿದ್ದಾರೆ. ಕ್ಷೇತ್ರದಲ್ಲಿ ಮಾತ್ರ ನಾನೊಂದು ತೀರಾ ನೀನೊಂದು ತೀರ ಎನ್ನುವಂತೆ ಚುನಾವಣೆಗೂ ಮೊದಲೇ ಉಭಯ ಪಕ್ಷಗಳ ಸಂಬಂಧ ಹಾವು, ಮುಂಗುಸಿಯಂತೆ ಆಗಿದೆ. 

ಕ್ಲೈಮಾಕ್ಸ್‌ ತಲುಪಿದ ಸೀಟು ಹಂಚಿಕೆ ವಿಚಾರ: ಕ್ಷೇತ್ರಕ್ಕಾಗಿ ರಾಜ್ಯ ಕಾಂಗ್ರೆಸ್‌,ಜೆಡಿಎಸ್‌ ನಾಯಕರಲ್ಲಿ ಹಗ್ಗಜಗ್ಗಾಟ ಮುಂದುವರಿದಿದ್ದು, ಯಾವ ಪಕ್ಷಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಿಗಲಿದೆ ಎಂಬುದು ಮಾತ್ರ ಕೊನೆ ಗಳಿಗೆಯವರೆಗೂ ಹೇಳದ ಸ್ಥಿತಿ ನಿರ್ಮಾಣವಾಗಿದೆ. ಒಂದು ವೇಳೆ ಮಾಜಿ ಪ್ರಧಾನಿ ದೇವೇಗೌಡರೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಇಚ್ಛಿಸಿದರೆ ಅನಿವಾರ್ಯವಾಗಿ ಕಾಂಗ್ರೆಸ್‌ ಬಿಟ್ಟು ಕೊಡಬೇಕಾಗುತ್ತದೆ. ಆದರೆ ದೇವೇಗೌಡರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಹಾಗೂ ಅವರ ರಾಜಕೀಯ ಒಳತಂತ್ರ ಇನ್ನೂ ನಿಗೂಢವಾಗಿರುವುದು ಕುತೂಹಲ ಕೆರಳಿಸಿದ್ದು, ನಾಲ್ಕೈದು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಲಾಗುತ್ತಿದೆ.
 
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್‌ ಒಮ್ಮೆ ಬಿಟ್ಟರೆ ಎಂದೂ ಗೆಲುವು ಸಾಧಿಸಿಲ್ಲ. ಈ ಭಾಗಕ್ಕೆ ಯಾವ ಸರ್ಕಾರವು ರೂಪಿಸದ  ನೀರಾವರಿ ಯೋಜನೆಗಳನ್ನು ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುಮೋದನೆ ಪಡೆದು ಅನುಷ್ಠಾನಗೊಳಿಸಲು ಹಾಲಿ ಸಂಸದ ವೀರಪ್ಪ ಮೊಯ್ಲಿ ಅವರು ಶ್ರಮಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಮೊಯ್ಲಿಯವರೇ ಅಭ್ಯರ್ಥಿ ಆಗಬೇಕು.
-ಮರಳಕುಂಟೆ ಕೃಷ್ಣಮೂರ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟರೂ ಶಾಸಕ ಸುಧಾಕರ್‌ ಕೆಲಸ ಮಾಡುವುದಿಲ್ಲ. ಕ್ಷೇತ್ರದಲ್ಲಿ  ಕಾಂಗ್ರೆಸ್‌ ಸೋತರೆ ಜೆಡಿಎಸ್‌ಗೆ ಕೆಟ್ಟ ಹೆಸರು ಬರುತ್ತದೆ. ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ನೂರಕ್ಕೆ ನೂರರಷ್ಟು ಜೆಡಿಎಸ್‌ ಗೆಲುವು ಸಾಧಿಸುತ್ತದೆ. ಈ ಬಾರಿ ಜೆಡಿಎಸ್‌ಗೆ  ಕ್ಷೇತ್ರ ಬಿಟ್ಟುಕೊಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇವೆ.
-ಕೆ.ಎಂ.ಮುನೇಗೌಡ, ಜಿಪಂ ಸದಸ್ಯ (ಜೆಡಿಎಸ್‌)

* ಕಾಗತಿ ನಾಗರಾಜಪ್ಪ 

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.