ಕೀಳಾಗಿ ಮಾತನಾಡಿದರೆ ಸುಮ್ಮನಿರಲ್ಲ
Team Udayavani, Mar 10, 2019, 7:47 AM IST
ಶ್ರೀರಂಗಪಟ್ಟಣ: ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗೌರವ ನೀಡುವ ಬದಲು ಸುಮಲತಾ ಅವರ ಬಗ್ಗೆ ಕೇವಲವಾಗಿ ಮಾತನಾಡಿರುವ ಸಚಿವ ರೇವಣ್ಣ ಅವರಿಂದ ಸ್ತ್ರೀಕುಲಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಆಕ್ರೋಶ ವ್ಯಕ್ತಪಡಿಸಿದರು.
ಯಾರೇ ರಾಜಕೀಯ ಮಾಡಲು ಬಂದರೂ ಎಲ್ಲರಿಗೂ ಸಮಾನವಾದ ಹಕ್ಕಿದೆ, ಭಾರತ ಸುಸಂಸ್ಕೃತ ದೇಶ. ಅದರಲ್ಲಿ ಇಂದು ಮಹಿಳಾ ದಿನಾಚರಣೆ ಹಲವಾರು ಕಡೆ ಆಚರಿಸಲಾಗುತ್ತಿದೆ. ಮಹಿಳೆಯರ ಮೇಲೆ ಶೋಷಣೆ ಮಾಡಬಾರದು ಎಂದು ಹೇಳುವ ಜನ ಸೇವೆಗೆ ಬಂದಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯೊಬ್ಬರು ಓರ್ವ ಮಹಿಳೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಗಂಡ ಸತ್ತು ಒಂದು ತಿಂಗಳಾಗಲಿಲ್ಲ ಆಗಲೆ ರಾಜಕೀಯಕ್ಕೆ ಬಂದಿದ್ದಾರೆ ಎಂದು ಉತ್ತರಿಸುವುದು ಅವರ ಘನತೆಗೆ ತಕ್ಕುದಲ್ಲ ಎಂದು ಮಾತನಾಡಿರುವುದು ಸರಿಯಲ್ಲ ಎಂದು ಖಂಡಿಸಿದರು.
ನಟ ಅಂಬರೀಶ್ ಇದ್ದಾಗ ಇವರು ಹೀಗೆ ಮಾತಾಡುತ್ತಿರಲಿಲ್ಲ. ಸಚಿವರ ಮನೆ ಹೆಣ್ಣು ಮಕ್ಕಳೂ ರಾಜಕೀಯಕ್ಕೆ ಬಂದಿದ್ದಾರೆ ಎಂಬುದನ್ನು ಮರೆಯಬಾರದು. ಹೆಣ್ಣು ಮಕ್ಕಳ ಗೌರವ ಕಾಪಾಡಬೇಕು. ದೇಶ ಆಳಿದ ಮಾಜಿ ಪ್ರಧಾನಿ ದೇವೇಗೌಡರು ಇಲ್ಲಿವರೆಗೆ ಇಂತಹ ಕೀಳುಮಟ್ಟದ ಮಾತನಾಡಿರುವ ಬಗ್ಗೆ ಎಲ್ಲೂ ಕೇಳಿಲ್ಲ. ಅವರ ಪುತ್ರ ಹೀಗೆ ಮಾತನಾಡುವುದು ಸರಿಯಲ್ಲ. ಸುಮಲತಾ ಪರವಾಗಿ ನಾವಿದ್ದೇವೆ. ಕೂಡಲೇ ಸಚಿವರು ಕ್ಷಮೆ ಯಾಚಿಸದಿದ್ದರೆ ಶನಿವಾರ ಸಚಿವ ರೇವಣ್ಣ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್