ಮಳೆಗಾಲಕ್ಕಿಂತ ಮೊದಲೇ ಸಿದ್ಧವಾಗಲಿ ಮಂಗಳೂರು


Team Udayavani, Mar 10, 2019, 8:57 AM IST

10-march-10.jpg

ಮಳೆಗಾಲ ಸಮೀಪಿಸುತ್ತಿದೆ. ಇನ್ನು ಎರಡೂವರೆ ತಿಂಗಳಿನಲ್ಲಿ ಮಳೆ ಆರಂಭವಾಗಲಿದೆ. ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಸಾಕಷ್ಟು ಮುಂಚಿತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ರೂಪಿಸಬೇಕು ಮತ್ತು ಎದುರಿಸಲು ಸಮಗ್ರ ಕಾರ್ಯಯೋಜನೆ ಹಾಗೂ ಸಮರ್ಪಕ ಅನುಷ್ಠಾನಕ್ಕೆ ನಿಗಾ ವಹಿಸಬೇಕು ಎಂಬುದು ಕಳೆದ ವರ್ಷದ ಮಳೆಗಾಲ ಕಲಿಸಿದ ಪಾಠ. 

ಮಳೆಗಾಲ ಹತ್ತಿರವಾಗುವಂತೆ ಸಿದ್ಧತೆಗಳನ್ನು ಆರಂಭಿಸುವ ಬದಲು ಸಾಕಷ್ಟು ಮುಂಚಿತವಾಗಿ ಕಾರ್ಯಯೋಜನೆಗಳನ್ನು ರೂಪಿಸಿದರೆ ಇವುಗಳ ಅನುಷ್ಠಾನದಲ್ಲಿ ಕೊನೆಯ ಕ್ಷಣದ ಧಾವಂತ ತಪ್ಪುತ್ತದೆ. ಈ ಬಾರಿಯ ಇನ್ನೊಂದು ಪ್ರಮುಖ ವಿಚಾರವೆಂದರೆ ಸದ್ಯದಲ್ಲೇ ಲೋಕಸಭಾ ಚುನಾವಣೆ ಎದುರಾಗಲಿದೆ. ಆಗ ಚುನಾವಣೆ ನೀತಿ ಸಂಹಿತೆಗಳಿರುತ್ತವೆ. ಇದು ಕಾಮಗಾರಿಗಳ ಮೇಲೂ ಪರಿಣಾಮ ಬೀರುತ್ತದೆ. ಅಧಿಕಾರಿಗಳು ಕೂಡ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಳ್ಳುತ್ತಾರೆ.

ಕಳೆದ ವರ್ಷ ಮೇ 29ರಂದು ಸುರಿದ ಮಳೆ ಮಂಗಳೂರಿನ ಪಾಲಿಗೆ ನಿಶ್ಚಿತವಾಗಿಯು ಪ್ರಕೃತಿ ನೀಡಿರುವ ಮುನ್ನೆಚ್ಚರಿಕೆಯಾಗಿತ್ತು . ಸ್ಮಾರ್ಟ್‌ ನಗರವಾಗಲು ಹೊರಟಿರುವ ಮಂಗಳೂರಿನ ವಾಸ್ತವಿಕ ಸ್ಥಿತಿಯನ್ನು ( ಗ್ರೌಂಡ್‌ ರಿಯಾಲ್ಟಿ) ನಗರದ ಜನತೆ, ಆಡಳಿತ ವ್ಯವಸ್ಥೆ, ಜನಪ್ರತಿನಿಧಿಗಳ ಮುಂದೆ ತೆರೆದಿಟ್ಟಿತ್ತು. ಆಗಿರುವ ಲೋಪಗಳು ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಚ್ಚರಿಸಿದೆ.

ಮಳೆಯಿಂದ ನಗರದ ಮೇಲಾಗುವ ಪರಿಣಾಮಗಳನ್ನು ವಿಶ್ಲೇಷಣೆ ನಡೆಸಿ ಆಗಬೇಕಾಗಿರುವ ಕ್ರಮಗಳನ್ನು ತುರ್ತು ನೆಲೆಯಲ್ಲಿ ಕೈಗೊಳ್ಳುವುದರಿಂದ ಮುಂದೆ ಸಂಭವಿಸಬಹುದಾದ ಇನ್ನಷ್ಟು ಅನಾಹುತಗಳನ್ನು ತಪ್ಪಿಸುವ ಯೋಜನೆಗಳ ಬಗ್ಗೆಯೂ ಮನವರಿಕೆ ಮಾಡಿಕೊಟ್ಟಿದೆ.

ವಾರ್ಡ್‌ ಮಟ್ಟದಲ್ಲಿ ಕಾರ್ಯಾಚರಣೆ
ನಗರ ರಾಜಕಾಲುವೆ, ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡಚಣೆಗಳು, ತೋಡುಗಳ ಒತ್ತುವರಿ, ರಸ್ತೆಗಳಲ್ಲಿ ತೆರವುಗೊಳಿಸದೆ ಇರುವ ಮಣ್ಣು, ತ್ಯಾಜ್ಯಗಳ ರಾಶಿ, ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವಂತಹ ಪ್ರದೇಶಗಳ ಪರಿಸ್ಥಿತಿ ಮುಂತಾದವುಗಳ ಬಗ್ಗೆ ಸಾಕಷ್ಟು ಮುಂಚಿತವಾಗಿ ಪರಿಶೀಲಿಸಿ ಪೂರಕ ಕ್ರಮಗಳನ್ನು ಕೈಗೊಳ್ಳುವುದು ಮುಂದೆ ಮಳೆಯಿಂದ ಸಂಭವಿಸಬಹುದಾದ ಸಮಸ್ಯೆಗಳನ್ನು ಕನಿಷ್ಠಗೊಳಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಪ್ರತಿ ವಾರ್ಡ್‌ನಲ್ಲಿ ಪಾಲಿಕೆಯ ಅಧಿಕಾರಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯ ರಚನೆ ಪೂರಕವಾಗುತ್ತದೆ.

ವಾರ್ಡ್‌ನಲ್ಲಿ ಇರುವ ತೋಡು, ಚರಂಡಿಗಳ ಸ್ಥಿತಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡಚಣೆಗಳ ವಸ್ತುಸ್ಥಿತಿಯನ್ನು ಪರಿಶೀಲನೆ ನಡೆಸಿ ಪಾಲಿಕೆಗೆ ವರದಿ ಸಲ್ಲಿಸಬೇಕು. ವರದಿಯನ್ನು ಪಾಲಿಕೆ ಆಡಳಿತ ಗಂಭೀರವಾಗಿ ಪರಿಗಣಿಸಿ ಆವಶ್ಯಕ ಕ್ರಮಗಳನ್ನು ಆದ್ಯತೆಯ ನೆಲೆಯಲ್ಲಿ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳು ಸಮರ್ಪಕವಾಗಿದೆಯೇ ಎಂಬ ಬಗ್ಗೆ ಸಮಿತಿ ನಿಗಾ ವಹಿಸಬೇಕು. ಈ ಕ್ರಮಗಳು ಮುಂದೆ ಸಂಭವಿಸಬಹುದಾದ ಸಮಸ್ಯೆಗಳಿಗೆ ಮೊದಲೇ ಪರಿಹಾರ ಕಂಡುಕೊಳ್ಳುವಲ್ಲಿ ಸಹಕಾರಿಯಾಗಬಹುದು.

ವಸ್ತು ಸ್ಥಿತಿಯ ಸಮೀಕ್ಷೆ
ಮಂಗಳೂರು ನಗರದಲ್ಲಿ ಅತ್ತಾವರ, ಕಂಕನಾಡಿ, ಕುದ್ರೋಳಿ, ಬಳ್ಳಾಲ್‌ ಭಾಗ್‌, ಜಪ್ಪಿನಮೊಗರು, ಪಂಪ್‌ ವೆಲ್‌, ಕೊಟ್ಟಾರಚೌಕಿ, ಕೋಡಿಕಲ್‌, ಮಾಲೆಮಾರ್‌, ಉಜ್ಜೋಡಿ, ಜೆಪ್ಪು ಮಹಾಕಾಳಿ ಪಡು³, ಕೊಂಚಾಡಿ, ಪಾಂಡೇಶ್ವರ ಸಹಿತ ಅನೇಕ ರಾಜಕಾಲುವೆಗಳಿವೆ. ಇದರ ಜತೆಗೆ ನಗರದಲ್ಲಿ ಹಲವಾರು ದೊಡ್ಡ ಹಾಗೂ ಸಣ್ಣ ಗಾತ್ರದ ತೋಡುಗಳಿವೆ. ಇವುಗಳ ಹೂಳೆತ್ತುವ ಕಾರ್ಯ ಪ್ರತಿವರ್ಷವೂ ನಡೆಯುತ್ತಿದೆ. ಆದರೂ ಈ ಪ್ರದೇಶಗಳಲ್ಲಿ ಕೃತಕ ನೆರೆ ಪ್ರತಿವರ್ಷ ಪುನರಾವರ್ತನೆಯಾಗುತ್ತಿದೆ. ಆದ್ದರಿಂದ ಸಮಸ್ಯೆಯ ಮೂಲವನ್ನು ಹುಡುಕಿ ಪರಿಹಾರ ಕಂಡುಕೊಳ್ಳುವ ಕಾರ್ಯ ತುರ್ತು ನೆಲೆಯಲ್ಲಿ ಪರಿಣಾಮಕಾರಿಯಾಗಿ ನಡೆಯಬೇಕಾಗಿದೆ. ಮಳೆ ನೀರು ಹರಿದು ಹೋಗುತ್ತಿದ್ದ ಅನೇಕ ಮೂಲಗಳು ಮುಚ್ಚಿವೆ, ಇಲ್ಲವೇ ಒತ್ತುವರಿಗಳು ನಡೆದಿವೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ನೀರು ಹರಿದು ಹೋಗುತ್ತಿದ್ದ ತೋಡುಗಳು ಎಲ್ಲೆಲ್ಲಿ ಮುಚ್ಚಿವೆ, ರಾಜಕಾಲುವೆಗಳು ಯಾವ ಕಡೆಗಳಲ್ಲಿ ಒತ್ತುವರಿ ಆಗಿವೆ, ಹೂಳೆತ್ತುವ ಕಾರ್ಯ ಸಮರ್ಪಕವಾಗಿ ನಡೆದಿದೆಯೇ ಎಂಬ ಪರಿಶೀಲನೆ ನಡೆದು ಪೂರಕ ಕ್ರಮಗಳು ಸಮರೋಪಾದಿಯಲ್ಲಿ ನಡೆಯಬೇಕಾಗಿದೆ.

ಅಡಚಣೆಗಳ ನಿವಾರಣೆ
ಮಂಗಳೂರು ನಗರದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಕಾಂಕ್ರೀ ಟ್‌ ಕಾಮಗಾರಿಗಳು ಬಹುತೇಕ ಮುಗಿದಿವೆ. ಕೆಲವು ಕಡೆ ಚರಂಡಿ, ಫುಟ್‌ಪಾತ್‌ಗಳು ನಿರ್ಮಾಣವಾಗಿವೆ. ಇನ್ನು ಕೆಲವು ಕಡೆ ಕಾಮಗಾರಿಗಳು ನಡೆಯುತ್ತಿವೆ. ಚರಂಡಿ ನಿರ್ಮಾಣವಾಗಿರುವ ಕಡೆಗಳಲ್ಲೂ ನೀರು ಚರಂಡಿಯಲ್ಲಿ ಹೋಗದೆ ರಸ್ತೆಯಲ್ಲೇ ಹರಿಯುತ್ತಿದೆ. ಜ್ಯೋತಿ ವೃತ್ತ, ಬಂಟ್ಸ್‌ಹಾಸ್ಟೆಲ್‌, ಕದ್ರಿ ಕಂಬಳ, ಬಿಜೈ, ಕೆ.ಎಸ್‌.ಆರ್‌. ರಾವ್‌ ರಸ್ತೆ, ಎಂ.ಜಿ. ರಸ್ತೆ ಮುಂತಾದೆಡೆಗಳಲ್ಲಿ ಮಳೆಗಾಲದಲ್ಲಿ ರಸ್ತೆಯೇ ತೋಡು ಆಗಿ ಪರಿವರ್ತನೆಗೊಳ್ಳುತ್ತಿದೆ. ಸಂಚಾರವೂ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿ ಪೂರಕ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯ. 

ಕಂಟ್ರೋಲ್‌ ರೂಮ್‌ ಹೆಚ್ಚು ಸದೃಢಗೊಳಿಸುವುದು
ನಗರದಲ್ಲಿ ಕಳೆದ ವರ್ಷ ಮಳೆಯಿಂದ ಕೃತಕ ನೆರೆ ಸಂಭವಿಸಿದ ಸಂದರ್ಭದಲ್ಲಿ ಕಂಟ್ರೋಲ್‌ ರೂಮ್‌ಗಳು ಸಮರ್ಪವಾಗಿ ಸ್ಪಂದಿಸಿಲ್ಲ ಎಂಬ ಬಗ್ಗೆ ಬಹಳಷ್ಟು ಜನರಿಂದ ದೂರುಗಳು ವ್ಯಕ್ತವಾಗಿದ್ದವು. ಆದ್ದರಿಂದ ಮಳೆಗಾಲದ ನಾಲ್ಕು ತಿಂಗಳು ಕಾಲ ಕಂಟ್ರೋಲ್‌ ರೂಮ್‌ನಲ್ಲಿ ಹೆಚ್ಚಿನ ಸಿಬಂದಿ ಹಾಗೂ ದೂರವಾಣಿಗಳನ್ನು ಅಳವಡಿಸಿ ಸುವ್ಯವಸ್ಥಿತಗೊಳಿಸಬೇಕು ಮತ್ತು ಹೆಚ್ಚು ಸಕ್ರಿಯವಾಗಿಸಲು ಈಗಾಗಲೇ ಕಾರ್ಯಯೋಜನೆಗಳನ್ನು ರೂಪಿಸುವುದು ಅಗತ್ಯ.

ಗ್ಯಾಂಗ್‌ಗಳ ರಚನೆ
ಪಾಲಿಕೆ 60 ವಾರ್ಡ್‌ಗಳಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಗಳಲ್ಲಿ ತುಂಬಿರುವ ಹೂಳು
ಹಾಗೂ ಮಣ್ಣು ತೆಗೆದು ಸ್ವಚ್ಚಗೊಳಿಸುವ ಕಾರ್ಯಕ್ಕೆ ಪ್ರತಿ ವರ್ಷ ಗ್ಯಾಂಗ್‌ಗಳನ್ನು ರಚಿಸಲಾಗುತ್ತದೆ. ಈ ಗ್ಯಾಂಗ್‌ ಗಳನ್ನು ಸಾಕಷ್ಟು ಮುಂಚಿತವಾಗಿ ರಚಿಸಿ ವಾರ್ಡ್‌ ಮಟ್ಟದಲ್ಲಿ ಕಾರ್ಯಯೋಜನೆ ರೂಪಿಸಿ ಕೆಲಸಗಳನ್ನು ವಹಿಸಿಕೊಡುವುದು ಉತ್ತಮ. ಈ ಗ್ಯಾಂಗ್‌ಗಳು ವಾರ್ಡ್‌ ಮಟ್ಟದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಿವೆ ಎಂಬ ಬಗ್ಗೆ ಆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಕೂಡ ಸಾಕಷ್ಟು ಕಾಲಾವಕಾಶ ಲಭಿಸುತ್ತದೆ. 

 ಶೀಘ್ರ ಸಭೆ
ಮಳೆಗಾಲಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುವ ನಿಟ್ಟಿನಲ್ಲಿ ಮಂಗಳೂರುನಗರದಲ್ಲಿ ಆಗಿರುವ ಕ್ರಮಗಳನ್ನು ಪರಿಶೀಲಿಸಲಾಗುವುದು. ಪಾಲಿಕೆ ಅಧಿಕಾರಿಗಳ ಸಭೆಯನ್ನು ಶೀಘ್ರ ನಡೆಸಿ ಅವಶ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು .
– ಸಸಿಕಾಂತ್‌ ಸೆಂಥಿಲ್‌,
 ದ.ಕ. ಜಿಲ್ಲಾಧಿಕಾರಿ

ಕೇಶವ ಕುಂದರ್‌

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.