ಸಾಮಾಜಿಕ ಮಾಧ್ಯಮಕ್ಕೆ ಬೆ‹àಕ್
Team Udayavani, Mar 11, 2019, 12:30 AM IST
ಈ ಬಾರಿ ಚುನಾವಣಾ ಆಯೋಗವು ಕೇವಲ ಭೌತಿಕವಾಗಿ ಚುನಾವಣಾ ಪ್ರಚಾರವನ್ನು ನಿಯಂತ್ರಿಸುವುದಿಲ್ಲ. ಬದಲಿಗೆ ವರ್ಚುವಲ್ ಜಗತ್ತಿನ ಮೇಲೂ ನಿಯಂತ್ರಣ ಹೇರಲಿದೆ. ಸಾಮಾಜಿಕ ಮಾಧ್ಯಮಗಳು ಪಕ್ಷಗಳಿಗೆ ಪ್ರಚಾರ ನಡೆಸಲು ತ್ವರಿತ, ಸುಲಭ ಲಭ್ಯ ಹಾಗೂ ಕಡಿಮೆ ಖರ್ಚಿನ ಪ್ಲಾಟ್ಫಾರಂ ಆಗಿದ್ದು, ಇಲ್ಲೂ ಚುನಾವಣಾ ಆಯೋಗ ಕಣ್ಣಿಡಲಿದೆ. ಈ ಬಗ್ಗೆ ಸಮಗ್ರ ವಿವರಗಳನ್ನು ಚುನಾವಣಾ ಆಯುಕ್ತ ಸುನೀಲ್ ಅರೋರಾ ವಿವರಿಸಿದ್ದಾರೆ.
ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸುವ ಜಾಹೀರಾತಿಗೆ ಮೊದಲೇ ಪ್ರಮಾಣಪತ್ರ ಪಡೆಯಬೇಕು. ಇವು ಪಕ್ಷದ ಚುನಾವಣೆ ವೆಚ್ಚದ ಭಾಗವಾಗಿರುತ್ತದೆ. ಗೂಗಲ್, ಫೇಸ್ಬುಕ್, ಯೂಟ್ಯೂಬ್ ಹಾಗೂ ಟ್ವಿಟರ್ಗಳು ಎಲ್ಲ ರಾಜಕೀಯ ಜಾಹೀರಾತುಗಳನ್ನೂ ಪ್ರಮಾಣೀ ಕರಿಸುತ್ತವೆ. ಈ ಸಾಮಾಜಿಕ ಮಾಧ್ಯಮಗಳು ರಾಜಕೀಯ ಜಾಹೀರಾತು ಪ್ರಕಟಿಸುವಾಗ ಅವುಗಳಲ್ಲಿ ಇದು ರಾಜಕೀಯ ಜಾಹೀರಾತು ಎಂಬುದಾಗಿ ಪ್ರಕಟಿಸುತ್ತವೆ. ಚುನಾವಣಾ ಆಯೋಗದ ನೀತಿಯ ಯಾವುದೇ ಉಲ್ಲಂಘನೆಯ ಬಗ್ಗೆ ದೂರು ಸ್ವೀಕರಿಸಲು ಗೂಗಲ್ ಹಾಗೂ ಫೇಸ್ಬುಕ್ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಿವೆ.
ಅಭ್ಯರ್ಥಿಗಳು ಕೂಡ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ವಿವರವನ್ನು ನೀಡಬೇಕು. ಇದು ಸುಳ್ಳು ಸುದ್ದಿ ಹಬ್ಬಿಸುವುದು ಹಾಗು ದ್ವೇಷಯುತ ವಿಷಯಗಳ ಹಂಚಿಕೊಳ್ಳುವುದನ್ನು ತಡೆಯುವಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ. ಅಷ್ಟೇ ಅಲ್ಲ, ಸಾಮಾಜಿಕ ಮಾಧ್ಯಮ ಪರಿಣಿತರನ್ನು ಪ್ರಮಾಣೀಕರಣ ಮತ್ತು ವಿಚಕ್ಷಣಾ ಸಮಿತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಆದರೆ ಈಗಾಗಲೇ ನಿರೀಕ್ಷಿಸಿದಂತೆ ಮತದಾನಕ್ಕೂ 48 ಗಂಟೆಗಳ ಮೊದಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರಚಾರ ನಡೆಸಲು ನಿಷೇಧ ಹೇರಿದಂತೆ ಸಾಮಾಜಿಕ ಮಾಧ್ಯಮಗಳಿಗೂ ನಿಷೇಧ ಹೇರುವ ಬಗ್ಗೆ ಚುನಾವಣಾ ಆಯೋಗ ಯಾವುದೇ ವಿವರಣೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ