ದೊಡ್ಡವನೆಂಬ ಭಾವನೆ ಸಾಹಿತಿಗೆ ಸಲ್ಲ: ಗೀತಾ ನಾಗಭೂಷಣ


Team Udayavani, Mar 11, 2019, 5:56 AM IST

gul-3.jpg

ಕ‌ಲಬುರಗಿ: ಸಾಹಿತಿಗಳಿಗೆ ದೊಡ್ಡವನು ಎನ್ನುವ ಭಾವನೆ ಬಂದ ಕ್ಷಣವೇ ಸಣ್ಣವರಾಗುತ್ತಾರೆ. ಕೊನೆತನಕ ಕಲಿಯುವರೆಲ್ಲರೂ ಸಣ್ಣವರೇ ಎಂದು ಹಿರಿಯ ಸಾಹಿತಿ, ನಾಡೋಜ ಡಾ| ಗೀತಾ ನಾಗಭೂಷಣ ಹೇಳಿದರು.
 
ಕನ್ನಡ ಭವನದ ಸುವರ್ಣ ಭವನದಲ್ಲಿ ರವಿವಾರ ಕವಯಿತ್ರಿ ಗೌರಿ ಪಾಟೀಲ ಅವರ ಪ್ರಥಮ ಕವನ ಸಂಕಲನ “ಸೆರಗ ನೂಲಿನ ಕಾವು’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಪ್ರತಿ ಹಂತದಲ್ಲಿ ಕಲಿಯುವುದು ಇರುತ್ತದೆ. ಆದ್ದರಿಂದ ದೊಡ್ಡ ಸಾಹಿತಿಗಳು ಸಣ್ಣ ಕಾರ್ಯಕ್ರಮಗಳಿಗೆ ಹೋಗಬಾರದು ಎನ್ನುವ ಭ್ರಮೆ ಸಲ್ಲದು ಎಂದರು.

ಕವಿಗಳು ಹುಟ್ಟುವುದು ಕಾಲೇಜಿನ ದಿನಗಳಲ್ಲಿ, ಹರೆಯ ವಯಸ್ಸಿನಲ್ಲಿ. ಆಗ ಸಾವಿರಾರು ಕನಸುಗಳು ಇರುತ್ತವೆ. ಹುಡುಗರು ಹುಡುಗಿಯರ ಮೇಲೆ ಪದ್ಯ, ಕವನ ಬರೆಯುತ್ತಾರೆ. ಹುಡುಗಿಯರೂ ಕದ್ದು ಮುಚ್ಚಿ ಹುಡುಗರ ಮೇಲೆ ಪದ್ಯ ಬರೆಯುತ್ತಾರೆ. ಹೀಗೆ ಪ್ರೇಮಕವಿಗಳಾದ ನಂತರ ಬೇರೆ ನೆಲೆಗಟ್ಟಿನ ಕವಿಯಾಗಿ ಉಳಿಯದಿರುವುದು ಬೇಸರದ ಸಂಗತಿ ಎಂದು ಹೇಳಿದರು. 

ಸಾಹಿತ್ಯದ ಮೂಲ ದ್ರವ್ಯ ಪ್ರೀತಿ. ಪ್ರೀತಿಯಲ್ಲಿ ಶುದ್ಧ, ಸ್ವತ್ಛ ಮನಸ್ಸಿರಬೇಕು. ಪ್ರೀತಿಯಲ್ಲಿ ಹಿಂಸೆ ಇರಕೂಡದು. ಯಾವ ವಯಸ್ಸಿನಲ್ಲಿ ಬೇಕಾದರೂ ಪ್ರತಿಭೆ ಅರಳಬಹುದು. ಪ್ರತಿಭೆ, ಅಕ್ಷರ ಹಾಗೂ ಬರೆಯಬೇಕೆಂಬ ಹಂಬಲ ಇರಬೇಕಷ್ಟೆ. ಪ್ರತಿಭೆ ಯಾರಪ್ಪನ ಸ್ವತ್ತಲ್ಲ ಎಂದರು.

ಲೇಖಕರು ಗಾಡ್‌ ಫಾದರ್‌, ಗಾಡ್‌ ಮದರ್‌ ಬಯಸಬಾರದು. ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಹೆಚ್ಚಿನದ್ದನ್ನು ಓದದವರು, ಅಕ್ಷರ ಜ್ಞಾನವೇ ಗೊತ್ತಿಲ್ಲದ ಎಷ್ಟೋ ಜನರು ವಿಶಿಷ್ಟ ಸಾಹಿತ್ಯವನ್ನು ರಚಿಸಿ ಸಾಧನೆ ಮಾಡಿದ್ದಾರೆ. ಪುಸ್ತಕಗಳು ಉತ್ತಮ ಸಂಗಾತಿಗಳು. ಪುಸ್ತಕಗಳನ್ನು ನಿರಂತರವಾಗಿ ಓದಬೇಕು. ಅನುಭವ ಗಟ್ಟಿಯಾಗುತ್ತಾ ಹೋದಂತೆ ಸಾಹಿತ್ಯ ಬೆಳೆಯುತ್ತದೆ.  ಸಾಹಿತ್ಯದ ನಶೆ ಒಮ್ಮೆ ಏರಿದ ನಂತರ ಅದನ್ನು ಇಳಿಸುವುದು ಕಷ್ಟ ಎಂದು ಹೇಳಿದರು.

ಮಹಾಗಾಂವ ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಉದ್ಘಾಟಿಸಿದರು. ಹಿರಿಯ ಸಾಹಿತಿ ಡಾ| ಶಶಿಕಲಾ ಮೋಳ್ದಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಶಾಂತಾ ಮಠ ಪುಸ್ತಕ ಪರಿಚಯಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಮರನಾಥ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.