ಕಲುಷಿತ ನೀರು ಪೂರೈಕೆ: ಕುಡಿವ ನೀರಿಗೆ ಪರದಾಟ


Team Udayavani, Mar 11, 2019, 9:30 AM IST

bell.jpg

ಕೊಟ್ಟೂರು: ಪಟ್ಟಣದಲ್ಲಿ ಪಟ್ಟಣ ಪಂಚಾಯತ್‌ ಕಳೆದ ನಾಲ್ಕೈದು ದಿನಗಳಿಂದ ನಾಗರಿಕರಿಗೆ ಪೂರೈಸುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದ್ದು, ಕುಡಿಯಲು ಆಗದೇ ಇತ್ತ ಬಿಡಲು ಆಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದಲ್ಲಿ ತುಂಗಭದ್ರಾ ಹಿನ್ನೀರು ಸರಬರಾಜು ಇದ್ದು, ಕೆಲ ಭಾಗದಲ್ಲಿ ಕೊಳವೆಬಾವಿ ನೀರು ಸರಬರಾಜು ಆಗುತ್ತದೆ. ಕೆಲವೊಮ್ಮೆ ಕೆಲ ಕೊಳವೆಬಾವಿಗಳಿಂದ ಮಿಶ್ರಿತ ನೀರನ್ನು ಸರಬರಾಜು ಮಾಡಲಾಗುತ್ತದೆ.

ಆರೋಗ್ಯಕ್ಕೆ ತುತ್ತು: ನಾಲ್ಕೈದು ದಿನಗಳಿಂದ ಸರಬರಾಜು ಆಗುತ್ತಿರುವ ತುಂಗಭದ್ರೆ ಹಿನ್ನೀರು ತೆಳು ಬಟ್ಟೆಯಲ್ಲಿ ಸೋಸಿದರೆ ಮಣ್ಣು ಬರುತ್ತದೆ. ಉಳ್ಳ ಕೆಲವು ಜನರು ಇದೇ ನೀರನ್ನು ಶುದ್ಧೀಕರಿಸುವ ಫಿಲ್ಟರ್‌ ಅನ್ನು ಬಳಸುತ್ತಾರೆ. ಉಳಿದ ಬಡವರು ಶುದ್ಧಿಕರಿಸದೇ ನೀರನ್ನು ಕುಡಿಯುವಂತಾಗಿದೆ. ಈ ನೀರನ್ನು ಕುಡಿದ ಅನೇಕ ಜನರು ರೋಗಗಳಿಗೆ ತುತ್ತಾಗುತ್ತಿದ್ದಾರೆ.

ಆರೋಗ್ಯ ಕಾಪಾಡಲಿ: ಪಟ್ಟಣದ ಕೆಲವೊಂದು ವಾರ್ಡ್‌ನಲ್ಲಿ ನೀರು ಸರಬರಾಜು ಮಾಡುವ ಪೈಪ್‌ಗ್ಳು ಹೊಡೆದು ಹೋಗಿ ಸರಬರಾಜು ಆಗುವ ನೀರು ಕಲುಷಿತಗೊಂಡು ಜನರು ರೋಗಕ್ಕೆ ಈಡಾಗುವಂತಾಗಿದೆ. ಈಗಾಲಾದರೂ ಪಟ್ಟಣ ಪಂಚಾಯತ್‌ ನವರು ಪ್ರತಿಯೊಂದು ವಾರ್ಡ್‌ಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ನಾಗರಿಕರ ಆರೋಗ್ಯ ಕಾಪಾಡಬೇಕಿದೆ. 

ಪಪಂನಿಂದ ಈಗಾಗಲೇ ಕೆಲವೊಂದು ವಾರ್ಡ್‌ಗಳಲ್ಲಿ ಘಟಕಗಳು ಸ್ಥಾಪಿತವಾಗಿವೆ. ಆ ಘಟಕಗಳಿಗೆ ಕುಡಿವ ನೀರು ಸರಬರಾಜು ಆಗಿಲ್ಲ. ಆದ್ದರಿಂದ ಬಿಸಿಲಿನ ಬೇಗೆ ಹಾಗೂ ಕಲುಷಿತ ನೀರಿನ ಪರಿಣಾಮ ಎದುರಿಸಬೇಕಾದ ಪರಿಸ್ಥಿತಿ ಉಂಟಾಗಿದೆ.

ಪಟ್ಟಣದಲ್ಲಿ ಬಹುತೇಕರು ಬಡವರಾಗಿದ್ದು, ಇಂತಹ ನೀರನ್ನು ಕುಡಿದು ರೋಗಕ್ಕೆ ತುತ್ತಾದರೆ ಏನು ಮಾಡಬೇಕು. ತಕ್ಷಣವೇ ಪಟ್ಟಣ ಪಂಚಾಯತ್‌ ಜನಪ್ರತಿನಿಧಿಗಳು ಹಾಗೂ ಶಾಸಕರು ಶುದ್ಧ ನೀರಿನ ಸರಬರಾಜಿಗೆ ಕ್ರಮ ಕೈಗೊಳ್ಳಬೇಕು.
 ಶ್ಯಾಮ ಕೊಟ್ಟೂರು.

ತುಂಗಭದ್ರಾ ನದಿ ಹಿನ್ನೀರಿದ್ದು, ನೀರಿನ ಸರಬರಾಜಿನಲ್ಲಿ ವ್ಯತ್ಯಯ ಹಾಗೂ ಕಲುಷಿತಗೊಂಡಿದ್ದು, ಇದನ್ನು ಕೂಡಲೇ ನಾವು ಎರಡು ದಿನಗಳಲ್ಲಿ ಸರಿಪಡಿಸಿ ಶುದ್ಧ ನೀರನ್ನು ಸರಬರಾಜು ಮಾಡುತ್ತೇವೆ.
 ಎಚ್‌.ಎಫ್‌. ಬಿದರಿ, ಮುಖ್ಯಾಧಿಕಾರಿ ಕೊಟ್ಟೂರು.

„ರವಿಕುಮಾರ ಎಂ

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.