ಅಪರಾಧ ನಿಯಂತ್ರಣಕ್ಕೆ ಸಹಕರಿಸಿ


Team Udayavani, Mar 11, 2019, 10:21 AM IST

cta-2.jpg

ಚಿತ್ರದುರ್ಗ: ಸಾರ್ವಜನಿಕರು ತಮ್ಮ ಆತ್ಮರಕ್ಷಣೆಗಾಗಿ ಬಂದೂಕು ತರಬೇತಿ ಪಡೆಯುವುದು ಅಗತ್ಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌ ಹೇಳಿದರು. ಇಲ್ಲಿನ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ 10 ದಿನಗಳ ಕಾಲ ಏರ್ಪಡಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರು ಕಾನೂನು ಗೌರವಿಸಿದಲ್ಲಿ ಪೊಲೀಸರ ಬಗ್ಗೆ ಭಯಪಡುವ ಅಗತ್ಯವಿಲ್ಲ. ನಾವು ಕೂಡ ಸಮಾಜದ ಒಂದು ಭಾಗ. ಈ ತರಬೇತಿ ಕಾರ್ಯಾಗಾರವನ್ನು ಪ್ರತಿ ವರ್ಷ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಕಳ್ಳತನ ಮತ್ತಿತರ ಅಪರಾಧ ಪ್ರಕರಣ ತಗ್ಗಿಸಲು ಸಾರ್ವಜನಿಕರು ಇಲಾಖೆಗೆ ಸಹಕರಿಸಬೇಕು. ಸರಿಯಾಗಿ ಸಂಚಾರಿ ನಿಯಮ ಪಾಲಿಸಬೇಕು. ಎಲ್ಲವನ್ನೂ ಪೊಲೀಸರೇ ಮಾಡಲು ಸಾಧ್ಯವಿಲ್ಲ. ಎಲ್ಲಿಯೇ ಅನ್ಯಾಯ ಕಂಡು ಬಂದರೂ ತಕ್ಷಣ ನಮಗೆ ತಿಳಿಸಿ. ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಎಸ್‌ಜೆಎಂ ಕಾಲೇಜಿನ ಸತ್ಯನಾರಾಯಣ ತಮ್ಮ ಅನುಭವ ಹಂಚಿಕೊಂಡು ಮಾತನಾಡಿ, ಪೊಲೀಸರಿಗೆ ಸಾರ್ವಜನಿಕರ ಸಹಾಯ ಬೇಕು ಎಂದರೆ ನಾವು ಸದಾ ಸಿದ್ಧ. ಪೊಲೀಸರೊಂದಿಗೆ ನಾವು ಕೈಜೋಡಿಸಿ ಸಮಾಜ ರಕ್ಷಣೆ ಮಾಡುತ್ತೇವೆ. ಈ ತರಬೇತಿಯಿಂದ ಪೊಲೀಸರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಲು ಅವಕಾಶ ಸಿಕ್ಕಿತು. ಪ್ರತಿಯೊಬ್ಬರಿಗೂ ಬಂದೂಕು ತರಬೇತಿ ಅವಶ್ಯ. ನಮ್ಮ ಆತ್ಮರಕ್ಷಣೆ ಮಾಡಿಕೊಳ್ಳ ಲು ಆಯುಧ ಬಳಸುವವಿಧಾನ ಕಲಿತುಕೊಂಡ ಬಗ್ಗೆ ಸಂತೋಷವಿದೆ ಎಂದು ತಿಳಿಸಿದರು.
 
ಶಿಬಿರದಲ್ಲಿ 146 ಮಂದಿ ಪಾಲ್ಗೊಂಡು ತರಬೇತಿ ಪಡೆದುಕೊಂಡಿದ್ದಾರೆ. 6 ಮಂದಿ ವೈದ್ಯರು, ತಲಾ 40 ಮಂದಿ ಸರ್ಕಾರಿ ನೌಕರರು ಹಾಗೂ ರೈತರು, 25 ವಿದ್ಯಾರ್ಥಿಗಳು, 20 ಖಾಸಗಿ ನೌಕರರು, 15 ಮಂದಿ ವ್ಯಾಪಾರಸ್ಥರು ಸೇರಿದಂತೆ ಒಟ್ಟು 146 ಮಂದಿ ತರಬೇತಿ ಪಡೆದಿದ್ದಾರೆ ಪುರುಷರ ವಿಭಾಗದಲ್ಲಿ ನೂರ್‌ ಅಹಮ್ಮದ್‌ ಶರೀಫ್‌ ಪ್ರಥಮ, ಡಾ| ತಿಮ್ಮಾರೆಡ್ಡಿ ದ್ವಿತೀಯ. ರಘುವರ್ಮ ತೃತೀಯ ಸ್ಥಾನ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಎಂ.ಎಸ್‌. ಚೇತನಾ ಪ್ರಥಮ, ಮೊನಿಷಾ ದ್ವಿತೀಯ, ಎಚ್‌.ಎಸ್‌. ಸ್ಫೂರ್ತಿ ತೃತೀಯ ಸ್ಥಾನ ಗಳಿಸಿದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು. ಡಿವೈಎಸ್ಪಿ ವಿಜಯಕುಮಾರ್‌ ಸಂತೋಷ್‌, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಉಪಾ ಧೀಕ್ಷಕ ಶ್ರೀನಿವಾಸ್‌, ಪೊಲೀಸ್‌ ನಿರೀಕ್ಷಕರಾದ ಎಚ್‌.ಬಿ. ಸೋಮಶೇಖರಪ್ಪ, ಕಿರಣ್‌ಕುಮಾರ್‌ ಇದ್ದರು. 

ತರಬೇತಿಯಿಂದ ಶಿಸ್ತು ಕಲಿತೆ
ಬಂದೂಕು ತರಬೇತಿಯ ಅನುಭವ ಹಂಚಿಕೊಂಡು ಮಾತನಾಡಿ, ಆತ್ಮರಕ್ಷಣೆಗೆ ಬಂದೂಕು ತರಬೇತಿ ಬಹಳ ಮುಖ್ಯ. ತರಬೇತಿ ಪಡೆದಿದ್ದು ಹೊಸ ಅನುಭವ ನೀಡಿದೆ. ಪೊಲೀಸರ ಬಗ್ಗೆ ಕುತೂಹಲವಿತ್ತು. ಕೇವಲ ಚಲನಚಿತ್ರಗಳಲ್ಲಿ ಪೊಲೀಸ್‌ ಠಾಣೆ ನೋಡಿದ್ದೆ. ಆದರೆ ನಿಜವಾದ ಪೊಲೀಸ್‌ ಠಾಣೆ ನೋಡಿದಾಗ ರೋಮಾಂಚಿತಳಾದೆ. ಈ ತರಬೇತಿಯಿಂದ ಶಿಸ್ತು ಕಲಿತುಕೊಂಡೆ ಎಂದು ಶಿಬಿರಾರ್ಥಿ ಡಾ| ಚೇತನಾ ತಿಳಿಸಿದರು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.