ಈ ಬಾರಿಯಾದರೂ ಕೈ ಹಿಡಿದೀತೇ ಮಾವು?


Team Udayavani, Mar 11, 2019, 11:12 AM IST

11-march-18.jpg

ಗದಗ: ಹವಾಮಾನ ವೈಪರಿತ್ಯ ಹಾಗೂ ಬರಗಾಲ ಮಧ್ಯೆಯೂ ಈ ಬಾರಿ ಜಿಲ್ಲೆಯಲ್ಲಿ ಹಣ್ಣುಗಳ ರಾಜ ಮಾವು ಬಂಪರ್‌ ಬೆಳೆ ನಿರೀಕ್ಷಿಸಲಾಗಿದೆ. ಎಲ್ಲೆಡೆ ಮಾವಿನ ಗಿಡಗಳಲ್ಲಿ ಹೂವು ಅರಳುತ್ತಿದ್ದು, ಅಲ್ಲಲ್ಲಿ ಕಾಯಿ ಕಟ್ಟುತ್ತಿವೆ. ಮಾವು ಬೆಳೆಗಾರರ ಮೊಗದಲ್ಲೀಗ ಮಂದಹಾಸ ಮೂಡಿಸಿದೆ.

ಕೆಲವೇ ದಿನಗಳ ಹಿಂದೆ ಎಲೆಗಳು ಉದುರಿ, ಬೋಳಾಗಿದ್ದ ಮಾವಿನ ಮರಗಳು ಇದೀಗ ವಸಂತ ಋತುಕಾಲದಲ್ಲಿ ಹೊಸ ಚಿಗುರಿನಿಂದ ಕಂಗೊಳಿಸುತ್ತಿದೆ. ಅದರೊಂದಿಗೆ ಮಾವಿನ ಮರಗಳಲ್ಲಿ ಹೂವು ಬಿಡಲಾರಂಭಿಸಿದ್ದು, ಅಲ್ಲಲ್ಲಿ ಕಾಯಿ ಕಟ್ಟುತ್ತಿವೆ.

ಕಳೆದ ವರ್ಷ ನಾನಾ ಕಾರಣಗಳಿಂದ ಆರ್ಥಿಕ ನಷ್ಟ ಅನುಭವಿಸಿದ್ದ ಮಾವು ಬೆಳೆಗಾರರಿಗೆ ಈ ಬಾರಿ ಮಾವು ಕೈ ಹಿಡಿಯುವ ಸಾಧ್ಯತೆಗಳಿವೆ. ಹೂವುಗಳೆಲ್ಲವೂ ಕಾಯಿ ಕಟ್ಟಲು ಸಾಧ್ಯವಿಲ್ಲದಿದ್ದರೂ, ಶೇ.75ರಷ್ಟು ಹೂವುಗಳಲ್ಲಿ ಕಾಯಿ ಕಟ್ಟುತ್ತವೆ. ಆದರೆ, ಕೊನೆ ಗಳಿಗೆಯಲ್ಲಿ ಬೆಳೆಗೆ ಯಾವುದೇ ರೋಗ ಬಾರದಿರಲೆಂದು ಮಾವು ಬೆಳೆಗಾರರು ಪ್ರಕೃತಿ ಮಾತೆಯಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಎಲ್ಲೆಲ್ಲಿ ಮಾವು ಬೆಳೆ?: ಮಾವು ಉಷ್ಣವಲಯದ ಬೆಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಸವಳು ಭೂಮಿ ಹೊರತುಪಡಿಸಿ ನೀರು ಬಸಿದು ಹೋಗುವ ಕೆಂಪು ಮಣ್ಣಿನ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಕೆಲವು ರೈತರು ಮಾತ್ರ ಮಳೆ ಆಶ್ರಯದಲ್ಲಿ ಮಾವು ಬೆಳೆದಿದ್ದು, ಹೆಚ್ಚಿನ ರೈತರು ನೀರಾವರಿ ಆಶ್ರಯದಲ್ಲೇ ಮಾವು ಬೆಳೆದಿದ್ದಾರೆ. ಮುಂಡರಗಿ ಭಾಗದ ರೈತರು ತುಂಗಭದ್ರಾ ನದಿ ನೀರಿನಲ್ಲಿಯೇ ಮಾವು ಬೆಳೆ ಬೆಳೆಯುವ ಮೂಲಕ ಉತ್ತಮ ಇಳುವರಿ ಪಡೆಯುತ್ತಿದ್ದಾರೆ.

ಗದಗ ತಾಲೂಕಿನಲ್ಲಿ ಹುಲಕೋಟಿ, ಕುರ್ತಕೋಟಿ, ದುಂದೂರನಲ್ಲಿ ಸೇರಿದಂತೆ ಒಟ್ಟು 800 ಹೆಕ್ಟೇರ್‌, ಮುಂಡರಗಿ ತಾಲೂಕಿನ ಕೊರ್ಲಹಳ್ಳಿ, ಹಮ್ಮಿಗಿ, ನಾಗರಳ್ಳಿ, ಹೆಸರೂರು ಸೇರಿ 184 ಹೆಕ್ಟೇರ್‌, ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ, ಬಾಲೆಹೊಸೂರ, ಶಿಗ್ಲಿ ಸೇರಿ 128 ಹೆಕ್ಟೇರ್‌, ರೋಣ ತಾಲೂಕಿನ ನರೇಗಲ್‌, ಗಜೇಂದ್ರಗಡ, ರಾಜೂರು, ಕುಂಟೋಜಿ ಸೇರಿದಂತೆ ಒಟ್ಟು 100 ಹೆಕ್ಟೇರ್‌ ಮತ್ತು ನರಗುಂದ ತಾಲೂಕಿನ 35 ಹೆಕ್ಟೇರ್‌ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1247 ಹೆಕ್ಟೇರ್‌ ಮಾವು ಪ್ರದೇಶ ಹೊಂದಿದೆ. ವಾರ್ಷಿಕವಾಗಿ ಅಂದಾಜು 10 ಸಾವಿರ ಟನ್‌ಗಳಷ್ಟು ಇಳುವರಿ ಬರುತ್ತಿದ್ದು, ಸುಮಾರು 20 ಕೋಟಿಯಷ್ಟು ವರಮಾನ ತರುತ್ತಿದೆ. ಅಲ್ಲದೇ ಜಿಲ್ಲೆಯ ಒಣ ಹವಾಗುಣಕ್ಕೆ ಹೊಂದಿಕೊಳ್ಳುವ ಮಾವು ಕ್ಷೇತ್ರ ಮತ್ತು ಉತ್ಪಾದನೆ ವರ್ಷದಿಂದ ವರ್ಷ ವಿಸ್ತಾರಗೊಳ್ಳುತ್ತಿದೆ ಎಂಬುದು ಗಮನಾರ್ಹ.

ಉತ್ಕೃಷ್ಟ ಗುಣಮಟ್ಟದ ಹಣ್ಣು ಪಡೆಯಲು ಪೋಷಕಾಂಶಗಳ ನಿರ್ವಹಣೆ ಜತೆಗೆ ಮಾವಿನಲ್ಲಿ ಬರುವ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕ್ರಮ ಕೈಗೊಳ್ಳುವುದು ಅಗತ್ಯ. ಹೂವು ಬಿಡುವ ಸಮಯದಲ್ಲಿ ಮಳೆ ಮತ್ತು ಮೋಡ ಕವಿದ ವಾತಾವರಣವಿದ್ದರೆ, ಬೂದು ರೋಗ ಬೀಳುವ ಅಪಾಯವಿದೆ. ಬೂದು ರೋಗ, ಜಿಗಿ ಹುಳುವಿನ ಬಾಧೆ ಸಮಸ್ಯೆ ತಲೆದೋರದಿದ್ದರೆ ಈ ಬಾರಿ ಉತ್ತಮ ಮಾವಿನ ಫಸಲು ಉತ್ತಮವಾಗಲಿದೆ. ಅಲ್ಲದೇ ಈ ಬಾರಿ ಚಳಿಗಾಲ ಮುಗಿಯುತ್ತಿದ್ದಂತೆ ಬಿಸಿಲಿನ ಪ್ರಖರ ಹೆಚ್ಚಿದೆ. ಮಾವಿನ ಉತ್ತಮ ಇಳುವರಿಗೆ ಪೂರಕ ವಾತಾವರಣವಿದ್ದು, ಪ್ರತಿ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಫಸಲು ಕೈ ಸೇರಬಹುದು ಎನ್ನುತ್ತಾರೆ ಮಾವು ಬೆಳೆಗಾರರು.

ಜಿಲ್ಲೆಯ ಪ್ರಮುಖ ಮಾವು ತಳಿಗಳು
ಜಿಲ್ಲೆಯಲ್ಲಿ ಅಲ್ಪಾನ್ಸೋ ತಳಿಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಕೇಸರ, ದಶೇರಿ, ಮಲ್ಲಿಕಾ, ತೋತಾಪುರಿ, ನೀಲಂ ಹಾಗೂ ಮತ್ತಿತರೆ ತಳಿಯ ಮಾವುಗಳನ್ನು ಬೆಳೆಯಲಾಗುತ್ತದೆ.

ಜಿಲ್ಲೆಯಲ್ಲಿ ಈಗಾಗಲೇ ಮಾವು ಬೆಳೆ ಹೂವು ಬಿಟ್ಟು ಕಾಯಿ ಕಟ್ಟುತ್ತಿವೆ. ಈ ಬಾರಿ ಬಿಸಿಲಿನ ಝಳ ಹೆಚ್ಚಿದ್ದು, ಈವರೆಗೆ ಗಂಭಿರವಾದ ಕೀಟ ಭಾದೆ ಕಾಣಿಸಿಕೊಂಡಿಲ್ಲ. ಹೀಗಾಗಿ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿದೆ. ಕೊನೆ ಗಳಿಕೆಯಲ್ಲಿ ಕಾಣಿಸಿಕೊಳ್ಳುವ ಕೀಟ ಭಾದೆ ಮತ್ತು ಮಾವಿನ ರೋಗಗಳನ್ನು ನಿಯಂತ್ರಿಸುವ ಬಗ್ಗೆ ಮಾವು ಬೆಳೆಗಾರರಿಗೆ ತಾಂತ್ರಿಕ ಸಲಹೆ ನೀಡಲಾಗಿದೆ.
. ಎಲ್‌. ಪ್ರದೀಪ,
ಉಪ ನಿರ್ದೇಶಕ, ತೋಟಗಾರಿಕೆ ಇಲಾಖೆ 

„ವೀರೇಂದ್ರ ನಾಗಲದಿನ್ನಿ 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.