ಭಾರತ ವಿರೋಧಿ ಶಕ್ತಿಗಳಿಗಿಲ್ಲ ಬೆಂಬಲ
Team Udayavani, Mar 12, 2019, 12:30 AM IST
ಹೊಸದಿಲ್ಲಿ/ಢಾಕಾ: ಭಾರತದ ವಿರುದ್ಧದ ಯಾವುದೇ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಭರವಸೆ ನೀಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಬಾಂಗ್ಲಾದೇಶ ಸರಕಾರ ಭಯೋತ್ಪಾದಕರ ವಿರುದ್ಧ “ಶೂನ್ಯ ಸಹನೆ ನೀತಿ’ ಅನುಸರಿಸುತ್ತಿದ್ದು, ಇದರನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಹರಡುತ್ತಿರುವ ತೀವ್ರಗಾಮಿತ್ವ ನಿಜಕ್ಕೂ ಸವಾಲಿನದ್ದಾಗಿದೆ ಎಂದು ಪ್ರತಿಪಾದಿಸಿರುವ ಹಸೀನಾ, ಇದು ಎರಡು ದೇಶಗಳಿಗೆ ಮಾತ್ರವಲ್ಲ, ಇಡೀ ದಕ್ಷಿಣ ಏಷ್ಯಾಕ್ಕೆ ಬೆದರಿಕೆ ಹುಟ್ಟಿಸುವ ವಿಚಾರ ಎಂದು ಹೇಳಿದ್ದಾರೆ. ಇದೇ ವೇಳೆ ಪುಲ್ವಾಮಾ ದಾಳಿಯನ್ನೂ ಅವರು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ