ಚಂದಮಾಮ ಮಾಲೀಕರ ವಿರುದ್ಧ ಕಪ್ಪುಹಣ ಆರೋಪ
Team Udayavani, Mar 12, 2019, 12:30 AM IST
ಹೊಸದಿಲ್ಲಿ: ದಶಕಗಳ ಕಾಲ ದೇಶದ ಚಿಣ್ಣರನ್ನು ರಂಜಿಸಿದ “ಚಂದಮಾಮ’ ಮಾಸಿಕವನ್ನು 2007ರಲ್ಲಿ ಖರೀದಿಸಿದ ಮುಂಬಯಿನ ಜಿಯೋಡೆಸಿಕ್ ಕಂಪೆನಿ ವಿರುದ್ಧ ಸ್ವಿಜರ್ಲೆಂಡ್ನಲ್ಲಿ ಕಪ್ಪುಹಣ ಇರಿಸಿದ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾಗಿ ಸ್ವಿಸ್ ಅಧಿಕಾರಿಗಳು ಕಂಪೆನಿ ವಿರುದ್ಧ ಇರುವ ಮಾಹಿತಿ ಹಂಚಿಕೊಳ್ಳುವ ವಾಗ್ಧಾನವನ್ನೂ ಮಾಡಿದ್ದಾರೆ. ಸಂಸ್ಥೆಯ ಮೂವರು ನಿರ್ದೇಶಕರು ನಿಯಮಗಳನ್ನು ಉಲ್ಲಂಘಿಸಿ ಹೂಡಿಕೆ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕೇಂದ್ರದ ತನಿಖಾ ಸಂಸ್ಥೆಗಳು ಅವರ ವಿರುದ್ಧ ತನಿಖೆ ನಡೆಸುತ್ತಿವೆ.
ಮಾ.5ರಂದು ಸ್ವಿಜರ್ಲೆಂಡ್ನ ತೆರಿಗೆ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಜಿಯೋಡೆಸಿಕ್ ಕಂಪೆನಿ ವಿರುದ್ಧದ ಮಾಹಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ನಿರ್ದೇಶಕರಾಗಿರುವ ಪ್ರಶಾಂತ್ ಶರದ್ ಮುಲೇಕರ್, ಪಂಕಜ್ ಕುಮಾರ್ ಓಂಕಾರ್ ಶ್ರೀವಾಸ್ತವ ಮತ್ತು ಕಿರಣ್ ಕುಲಕರ್ಣಿ ವಿರುದ್ಧ ತನಿಖೆಯ ಮಾಹಿತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರದ ವಿರುದ್ಧ 30 ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ