ಮೂವರಿಗೆ ಹ್ಯಾಟ್ರಿಕ್‌, ನಾಲ್ವರಿಗೆ 4ನೇ ಗೆಲುವಿನ ನಿರೀಕ್ಷೆ


Team Udayavani, Mar 12, 2019, 12:30 AM IST

mallikarjun-khargeananth-kumar-hegde.jpg

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಿಂದ ಲೋಕಸಭೆಗೆ ಆಯ್ಕೆಯಾಗುತ್ತಿರುವ ನಾಯಕರ ಪೈಕಿ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮೂವರು ಹಾಲಿ ಸಂಸದರು ಹ್ಯಾಟ್ರಿಕ್‌ ಗೆಲುವಿನ ತವಕದಲ್ಲಿದ್ದರೆ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸೇರಿದಂತೆ ನಾಲ್ವರು ಸಂಸದರು ಸತತ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಬಾರಿಯ ಚುನಾವಣೆ ಉತ್ತರ ಕರ್ನಾಟಕದ ಹಲವು ಲೋಕಸಭಾ ಕ್ಷೇತ್ರಗಳ ಮಟ್ಟಿಗೆ ಹೊಸ ದಾಖಲೆ ಬರೆಯುವ, ದಾಖಲೆಗಳನ್ನು ಸರಿಗಟ್ಟುವ ಅವಕಾಶವನ್ನು ಒದಗಿಸಿದೆ. ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಹಾಗೂ ಹಾವೇರಿ ಕ್ಷೇತ್ರಗಳ ಸಂಸದರಿಗೆ ಹ್ಯಾಟ್ರಿಕ್‌ ಗೆಲುವಿನ ಸವಾಲು ಹಾಗೂ ಅವಕಾಶ ಎದುರಾಗಿದೆ. ಕಲಬುರಗಿ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಹಾಗೂ ದೇಶದ ಗಮನ ಸೆಳೆಯಬಹುದಾದ ಕ್ಷೇತ್ರಗಳಲ್ಲಿ ಒಂದು. ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಈ ಕ್ಷೇತ್ರದಲ್ಲಿ ಸತತ ಎರಡು ಗೆಲುವು ಕಂಡಿದ್ದು, ಹಿಂದಿನ ಇಬ್ಬರು ಸಂಸದರ ಸಾಧನೆ ಸರಿಗಟ್ಟಿದ್ದು, 2019ರಲ್ಲಿ ಗೆಲುವು ಸಾಧಿಸಿದರೆ, ಹ್ಯಾಟ್ರಿಕ್‌ ಸಾಧನೆ ಮಾಡಿದ ಮೊದಲ ಸಂಸದರಾಗಲಿದ್ದಾರೆ.

ಕಲಬುರಗಿ ಕ್ಷೇತ್ರದಲ್ಲಿ 1957 ಮತ್ತು 1962ರಲ್ಲಿ ಮಹದೇವಪ್ಪ ಯಶವಂತರಾವ್‌ ಅವರು ಸತತವಾಗಿ ಎರಡು ಬಾರಿ ಗೆದ್ದಿದ್ದರು. 1989 ಹಾಗೂ 1991ರಲ್ಲಿ ಬಿ.ಜಿ.ಜವಳಿ, 1999 ಮತ್ತು 2004ರಲ್ಲಿ ಕಾಂಗ್ರೆಸ್‌ನ ಇಕ್ಬಾಲ್‌ ಅಹ್ಮದ್‌ ಸರಡಗಿ ಅವರು ಸತತ ಎರಡು ಗೆಲುವು ಕಂಡಿದ್ದರು. 1996ರಲ್ಲಿ ಖಮರುಲ್ಲಾ ಇಸ್ಲಾಂ ಜನತಾದಳದಿಂದ ಆಯ್ಕೆಯಾಗಿದ್ದರು. 2009 ಮತ್ತು 2014ರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸತತವಾಗಿ ಎರಡು ಬಾರಿ ಸಂಸದರಾಗಿದ್ದು, ಇದೀಗ ಹ್ಯಾಟ್ರಿಕ್‌ ಗೆಲುವಿನ ನಗೆ ಬೀರುವ ಸವಾಲು ಹಾಗೂ ಅವಕಾಶ ಅವರ ಮುಂದಿದೆ.

ಜಿಗಜಿಣಗಿ, ಉದಾಸಿಗೆ ಹ್ಯಾಟ್ರಿಕ್‌ ಕನಸು: 
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಸಹ ಹ್ಯಾಟ್ರಿಕ್‌ ಗೆಲುವಿನ ತವಕದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಇದುವರೆಗೆ ರಮೇಶ ಜಿಗಜಿಣಗಿ ಸೇರಿ ನಾಲ್ವರು ಸತತ ಎರಡು ಬಾರಿ ಗೆದ್ದ ಸಾಧನೆ ತೋರಿದ್ದಾರೆ. 1977 ಮತ್ತು 1980ರಲ್ಲಿ ಚೌಧರಿ ಕಾಳಿಂಗಪ್ಪ ಭೀಮಣ್ಣ ಅವರು ಸತತ ಎರಡು ಗೆಲುವು ಸಾಧಿಸಿದ್ದರೆ, 1989 ಮತ್ತು 1991ರಲ್ಲಿ ಬಿ.ಕೆ.ಗುಡದಿನ್ನಿ, 1999 ಮತ್ತು 2004ರಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಸತತ ಎರಡು ಬಾರಿ ಗೆಲುವಿನ ನಗೆ ಬೀರಿದ್ದಾರೆ. 2009 ಮತ್ತು 2014ರಲ್ಲಿ ರಮೇಶ ಜಿಗಜಿಣಗಿ ಅವರು ಸತತ ಎರಡು ಗೆಲುವು ಕಂಡಿದ್ದು, ಇದೀಗ ಹ್ಯಾಟ್ರಿಕ್‌ ಗೆಲುವಿನ ಸವಾಲು-ಅವಕಾಶ ಎದುರಾಗಿದೆ. ಇನ್ನು, ಹಾವೇರಿ, ಈ ಹಿಂದೆ ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರದ ಭಾಗವಾಗಿತ್ತು. 2008ರಲ್ಲಿ ನಡೆದ ಕ್ಷೇತ್ರ ಪುನರ್‌ ವಿಂಗಡಣೆ ನಂತರ ಹಾವೇರಿ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಿದೆ. ಈ ಕ್ಷೇತ್ರದಲ್ಲಿ 2009 ಮತ್ತು 2014ರಲ್ಲಿ ಬಿಜೆಪಿಯ ಶಿವಕುಮಾರ ಉದಾಸಿ ಸತತ ಗೆಲುವು ಕಂಡಿದ್ದು, 2019ರ ಚುನಾವಣೆಯಲ್ಲಿ ಗೆಲುವು ಕಂಡರೆ ಹ್ಯಾಟ್ರಿಕ್‌ ಗೆಲುವಿನ ಸಾಧನೆ ತೋರಲಿದ್ದಾರೆ.

ದಾಖಲೆ ಸರಿಗಟ್ಟುವ ನಿರೀಕ್ಷೆ:
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸೇರಿದಂತೆ ನಾಲ್ವರು ಸಂಸದರು ಸತತ ನಾಲ್ಕು ಬಾರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರದ ಹಿಂದಿನ ದಾಖಲೆಗಳನ್ನು ಸರಿಗಟ್ಟುವ ನಿರೀಕ್ಷೆಯಲ್ಲಿದ್ದಾರೆ. ವಿಶೇಷವೆಂದರೆ, ಈ ನಾಲ್ವರೂ ಬಿಜೆಪಿ ಸಂಸದರಾಗಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಇದುವರೆಗೆ ಒಟ್ಟಾರೆ ಐದು ಗೆಲುವು ಕಂಡಿದ್ದರೂ, ಸತತ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇದು ಸಾಧ್ಯವಾದರೆ ಸುಮಾರು 19 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಲಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಿ.ದೇವರಾಯ ನಾಯ್ಕ ಅವರು 1980ರಿಂದ 91ರವರೆಗೆ ಸತತವಾಗಿ ನಾಲ್ಕು ಬಾರಿ ಗೆಲುವು ಕಂಡಿದ್ದರು. ಅನಂತಕುಮಾರ ಹೆಗಡೆ ಅವರು 1996 ಮತ್ತು 1998ರಲ್ಲಿ ಸತತ ಎರಡು ಗೆಲುವು ಕಂಡಿದ್ದರಾದರೂ, 1999ರಲ್ಲಿ ಈ ಕ್ಷೇತ್ರದಲ್ಲಿ ಮಾರ್ಗರೇಟ್‌ ಆಳ್ವಾ ಗೆಲುವು ಸಾಧಿಸಿ ಹೆಗಡೆಯವರ ಹ್ಯಾಟ್ರಿಕ್‌ ಗೆಲುವನ್ನು ಭಗ್ನಗೊಳಿಸಿದ್ದರು. 2004, 2009 ಹಾಗೂ 2014ರಲ್ಲಿ ಗೆಲ್ಲುವ ಮೂಲಕ ಅನಂತಕುಮಾರ ಹೆಗಡೆ ಹ್ಯಾಟ್ರಿಕ್‌ ಸಾಧನೆ ತೋರಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಅವರು ಗೆದ್ದರೆ ಡಿ.ದೇವರಾಯ ನಾಯ್ಕ ಅವರ ಸತತ ನಾಲ್ಕನೇ ಗೆಲುವಿನ ದಾಖಲೆ ಸರಿಗಟ್ಟಲಿದ್ದಾರೆ.

ಜೋಶಿ, ಗದ್ದಿಗೌಡರ ತವಕ: 
ಧಾರವಾಡ ಕ್ಷೇತ್ರದಲ್ಲಿ ಇಬ್ಬರು ಸಂಸದರು ಸತತ ನಾಲ್ಕು ಬಾರಿ ಗೆಲುವಿನ ಸಾಧನೆ ತೋರಿದ್ದರೆ, ಹಾಲಿ ಸಂಸದ ಪ್ರಹ್ಲಾದ ಜೋಶಿ ಸೇರಿದಂತೆ ಇಬ್ಬರು ಹ್ಯಾಟ್ರಿಕ್‌ ಸಾಧನೆ ತೋರಿದ್ದಾರೆ. ಇದೀಗ, ಪ್ರಹ್ಲಾದ ಜೋಶಿಯವರ ಮುಂದೆ ಸತತ ನಾಲ್ಕನೇ ಗೆಲುವಿನ ಸವಾಲು ಎದುರಾಗಿದೆ. ಸರೋಜಿನಿ ಮಹಿಷಿ ಅವರು 1962-1977ರವರೆಗೆ ಹಾಗೂ ಡಿ.ಕೆ.ನಾಯ್ಕರ್‌ ಅವರು 1980ರಿಂದ 1991ರವರೆಗೆ ಸತತ ನಾಲ್ಕು ಗೆಲುವಿನ ಸಾಧನೆ ತೋರಿದ್ದರು. 1996-1999ರವರೆಗೆ ಬಿಜೆಪಿಯ ವಿಜಯ ಸಂಕೇಶ್ವರ ಅವರು ಸತತ ಮೂರು ಗೆಲುವು ಕಂಡರೆ, 2004ರಿಂದ 2014ರವರೆಗೆ ಬಿಜೆಪಿಯ ಪ್ರಹ್ಲಾದ ಜೋಶಿ ಸತತ ಮೂರು ಗೆಲುವು ಸಾಧಿಸಿದ್ದಾರೆ. 2019ರಲ್ಲಿ ಜೋಶಿ ಗೆಲುವು ಕಂಡರೆ ಸರೋಜಿನಿ ಮಹಿಷಿ ಹಾಗೂ ಡಿ.ಕೆ.ನಾಯ್ಕರ ಅವರ ಸಾಧನೆ ಸರಿಗಟ್ಟಲಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ 1951 ಮತ್ತು 1957ರಲ್ಲಿ ರಾಮಪ್ಪ ಬಾಳಪ್ಪ ಬಿದರಿಯವರು ಸತತ ಗೆಲುವು ಕಂಡಿದ್ದು, ಅದು ಬಿಟ್ಟರೆ 1962ರಿಂದ 1977ರವರೆಗೆ ಸಂಗನಗೌಡ ಪಾಟೀಲರು ಸತತ ನಾಲ್ಕು ಗೆಲುವಿನ ಸಾಧನೆ ತೋರಿದ್ದರು. 1980ರಲ್ಲಿ ಇದೇ ಕ್ಷೇತ್ರದಿಂದ ವೀರೇಂದ್ರ ಪಾಟೀಲರು ಲೋಕಸಭೆಗೆ ಆಯ್ಕೆಯಾಗಿದ್ದರು. 2004, 2009, 2014ರಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ ಗೆಲುವಿನ ಹ್ಯಾಟ್ರಿಕ್‌ ಸಾಧನೆ ತೋರಿದ್ದು, ನಾಲ್ಕನೇ ಗೆಲುವು ಸಾಧ್ಯವಾದರೆ, ಸುಮಾರು 42 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಲಿದ್ದಾರೆ.

4ನೇ ಬಾರಿ ಅಂಗಡಿ ತೆರೆಯಲು ಸಿದ್ಧತೆ
ಬೆಳಗಾವಿ ಕ್ಷೇತ್ರದಲ್ಲಿ ಸತತ ಮೂರು ಗೆಲುವು ಕಂಡಿರುವ ಬಿಜೆಪಿ ಸಂಸದ ಸುರೇಶ ಅಂಗಡಿಗೆ ನಾಲ್ಕನೇ ಗೆಲುವಿನ ದಾಖಲೆ ಸರಿಗಟ್ಟುವ ಸವಾಲು ಎದುರಾಗಿದೆ. 1980ರಿಂದ 1991ರವರೆಗಿನ ಚುನಾವಣೆಯಲ್ಲಿ ಎಸ್‌.ಬಿ.ಸಿದ್ನಾಳ ಅವರು ಸತತ ನಾಲ್ಕು ಗೆಲುವು ಕಂಡಿದ್ದರು. ಸಂಸದ ಸುರೇಶ ಅಂಗಡಿ ಅವರು 2004, 2009 ಹಾಗೂ 2014ರಲ್ಲಿ ಗೆಲುವಿನೊಂದಿಗೆ ಹ್ಯಾಟ್ರಿಕ್‌ ಸಾಧನೆ ತೋರಿದ್ದು, 2019ರಲ್ಲಿ ಗೆಲುವು ಕಂಡರೆ ಎಸ್‌.ಬಿ.ಸಿದ್ನಾಳ ಅವರ ದಾಖಲೆ ಸರಿಗಟ್ಟಲಿದ್ದಾರೆ.

– ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.