ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ


Team Udayavani, Mar 12, 2019, 7:43 AM IST

spardatmaka.jpg

ತಿಪಟೂರು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಮಾರ್ಗ ಕಂಡುಕೊಂಡು ತಮ್ಮ ಭವಿಷ್ಯದ ಬದುಕನ್ನು ರೂಪಿಸಿಕೊಂಡಾಗ ಮಾತ್ರ ಜೀವನಕ್ಕೆ ಮಾರ್ಗ ಸಿಗುತ್ತದೆ ಎಂದು ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ.ದಿಲೀಪ್‌ ಎಂ.ಶಾ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ವತಿಯಿಂದ ನಡೆದ ಮ್ಯಾನೇಜ್‌ಮೆಂಟ್‌ ಫೆಸ್ಟ್‌-2019 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಉದಾಸೀನತೆ ಬಿಡಿ: ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಸ್ಥೈರ್ಯವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಸಾಧಿಸುವ ಅರಿವು ನಿಮ್ಮಲ್ಲಿ ಬಂದರೆ ನೀವು ಸಮಾಜದಲ್ಲಿ ಒಬ್ಬ ಶ್ರೇಷ್ಠ ವ್ಯಕ್ತಿಗಳಾಗಿ ಇತರರಿಗೆ ಮಾದರಿಯಾಗಿ ಬೆಳೆಯಬಹುದು. ಜಗತ್ತನ್ನೆ ಮೆಟ್ಟಿ ನಿಲ್ಲುವ ಶಕ್ತಿ ನಿಮ್ಮಲ್ಲಿದ್ದು, ನಿಚ್ಚಳವಾದ ಸಾಧನೆ ಮಾಡಿದಾಗ ಜಗತ್ತೇ ನಿಂತು ನಿಮ್ಮನ್ನು ನೋಡುತ್ತದೆ. ನನ್ನ ಕೈಯಲ್ಲಿ ಏನೂ ಸಾಧಿಸಲು ಸಾಧ್ಯವಿಲ್ಲ ಎಂಬ ಉದಾಸೀನತೆ ಬಿಟ್ಟು

-ನಿಮ್ಮಲ್ಲಿ ಸಾಧಿಸುವ ತಾಕತ್ತಿದ್ದರೆ ನಿಮ್ಮ ಗುರಿ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ನಿಮ್ಮ ಏಳ್ಗೆಯ ಶಿಲ್ಪಿ ನೀವೇ ಎಂದುಕೊಂಡು ನಿಮ್ಮನ್ನು ನೀವು ಅರ್ಥಮಾಡಿಕೊಂಡು ಕೌಶಲ್ಯಗಳನ್ನು ಸರಿಯಾದ ರೀತಿ ಸದ್ಬಳಕೆ ಮಾಡಿಕೊಂಡರೆ ಭವಿಷ್ಯದ ಬದುಕು ಹಸನಾಗಲಿದೆ. ದೇಶದ ಅಭಿವೃದ್ಧಿಗೆ ಯುವ ಸಮೂಹದ ಅಗತ್ಯವಿದ್ದು, ಮಹಾನ್‌ ವ್ಯಕ್ತಿಗಳ, ಸಾಧಕರ ಆದರ್ಶ ಮೈಗೂಡಿಸಿಕೊಂಡು ಭವ್ಯ ಭಾರತ ನಿರ್ಮಾಣ ಮಾಡಿ ವಿಶ್ವ ಮಾನವರಾಗಬೇಕು ಎಂದು ಸಲಹೆ ನೀಡಿದರು.

ಕೌಶಲ್ಯ ಅಭಿವೃದ್ಧಿಪಡಿಸಿಕೊಳ್ಳಿ: ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಪ್ರೊ.ಶೇಖರ್‌ಗೌಡ ಮಾತನಾಡಿ, ಉದ್ಯೋಗ ಹುಡುಕಿಕೊಂಡು ಹೋಗುವ ಬದಲು ಉದ್ಯೋಗವೇ ನಿಮ್ಮನ್ನು ಹುಡುಕಿಕೊಂಡು ಬರಬೇಕು. ಆ ರೀತಿ ನಿಮ್ಮಲ್ಲಿರುವ ಕೌಶಲ್ಯ ಅಭಿವೃದ್ಧಿಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು ನಡೆಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ವಿದ್ಯಾರ್ಥಿಗಳು ಉನ್ನತ ಹುದ್ದೆ ಪಡೆದು ಉತ್ತಮ ಜೀವನ ತಮ್ಮದಾಗಿಸಿಕೊಂಡು ರಾಷ್ಟ್ರಸೇವೆಯಲ್ಲಿ ತೊಡಗಬೇಕೆಂದು ಸಲಹೆ ನೀಡಿದರು.

ಗುರುಗಳ ಮಾರ್ಗದರ್ಶನದಂತೆ ನಡೆಯಿರಿ: ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಕೆ.ಎಂ.ರಾಜಣ್ಣ ಮಾತನಾಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾರ್ಯಕ್ರಮ ಯೋಜನೆ ಮಾಡಲಾಗಿದ್ದು, ಇದರ ಪ್ರಯೋಜನವನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು. ಸಮಯ ಹಾಳುಮಾಡದೆ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿ ಗುರುಗಳ ಮಾರ್ಗದರ್ಶನದಲ್ಲಿ ಸಾಗಿ ಪೋಷಕರ ಕನಸನ್ನು ನನಸು ಮಾಡಬೇಕು ಎಂದರು.

 ಕಾರ್ಯಕ್ರಮದಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ. ಕೆ. ನಾಗರಾಜು, ನ್ಯಾಕ್‌ ಸಂಯೋಜಕಿ ಡಾ. ಕೆ.ಬಿ. ಸರಸ್ವತಿ, ಸಹಾಯಕ ಪ್ರಾಧ್ಯಾಪಕ ಕೆ.ಆರ್‌. ಅನುಪ್ರಸಾದ್‌ ಸೇರಿದಂತೆ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.